ಮುಂದಿನ ಚುನಾವಣೆಯಲ್ಲಿ ಪೈಪೋಟಿ ನಿರೀಕ್ಷೆಯ ಇರುವ ಹಾಸನ, ಮಂಡ್ಯ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳ ಚುನಾವಣೆ ಉಸ್ತುವಾರಿಯನ್ನು ರಾಜ್ಯಸಭಾ ಸದಸ್ಯ ಜಿ ಸಿ ಚಂದ್ರಶೇಖರ್ ಅವರಿಗೆ ವಹಿಸಿರುವ ಕಾಂಗ್ರೆಸ್ ವರಿಷ್ಠರು, ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಬೇಕೆಂಬ ಗುರಿ ನೀಡಿದ್ದಾರೆ.
ಹೈಕಮಾಂಡ್ ಮಟ್ಟದಲ್ಲಿ ಹಿಡಿತ ಹೊಂದಿರುವ ಚಂದ್ರಶೇಖರ್, ರಾಜ್ಯ ವಿಧಾನಸಭೆಯಿಂದ ಎರಡನೇ ಬಾರಿಗೆ ರಾಜ್ಯಸಭೆ ಪ್ರವೇಶಿಸಿದ್ದಾರೆ. ಅದಕ್ಕೆ ಪ್ರತಿಯಾಗಿ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಪಕ್ಷದ ವಿಜಯ ಪತಾಕೆ ಹಾರಿಸಬೇಕೆಂಬ ಹೊಣೆಯನ್ನು ವರಿಷ್ಠರು ಹೊರಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ಈ ಬಾರಿಯ ಚುನಾವಣೆ ದೇಶದ ಸಂವಿಧಾನವನ್ನು ರಕ್ಷಿಸುವ ಚುನಾವಣೆಯಾಗಲಿದೆ : ಸಚಿವ ಪ್ರಿಯಾಂಕ್ ಖರ್ಗೆ
“2023ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ತುಮಕೂರು ಮತ್ತು ಮಂಡ್ಯ ಜಿಲ್ಲೆಗಳ ಕ್ಷೇತ್ರಗಳ ಹೊಣೆ ವಹಿಸಿಕೊಂಡಿದ್ದ ಚಂದ್ರಶೇಖರ್, ಆ ಎರಡೂ ಜಿಲ್ಲೆಗಳಲ್ಲಿ ಪಕ್ಷದ ತಲಾ ಏಳು ಶಾಸಕರನ್ನು ಗೆಲ್ಲಿಸುವಲ್ಲಿ ಯಶಸ್ವಿಯಾಗಿದ್ದರು. ಅದೇ ವಿಶ್ವಾಸದಿಂದ ಪಕ್ಷದ ಈಗ ಮೂರು ಕ್ಷೇತ್ರಗಳಲ್ಲಿ ಅಭ್ಯರ್ಥಿ ಗೆಲ್ಲಿಸುವ ಗುರಿ ನೀಡಿದೆ” ಎಂದು ತಿಳಿದುಬಂದಿದೆ.





