ಲೋಕಾಪುರ-ಸವದತ್ತಿ-ಧಾರವಾಡ ರೈಲು ಮಾರ್ಗಕ್ಕೆ ಸಚಿವರ ಜೊತೆ ಚರ್ಚೆ

Date:

ಲೋಕಾಪುರ-ಸವದತ್ತಿ-ಧಾರವಾಡ ಮರ್ಗದಲ್ಲಿ ಹೊಸ ರೈಲು ಮಾರ್ಗ ನಿರ್ಮಿಸುವಂತೆ ಬೆಳಗಾವಿ ಲೋಕಸಭಾ ಸಂಸದ ಜಗದೀಶ ಶೆಟ್ಟರ್ ಅವರು ಕೇಂದ್ರ ರೈಲ್ವೆ ಸಚಿವರೊಂದಿಗೆ ಚರ್ಚೆ ನಡೆಸಿದ್ದಾರೆ.

ನವದೆಹಲಿಯ ರೈಲ್ವೆ ಭವನದ ಅವರ ಕಚೇರಿಯಲ್ಲಿ ಕೇಂದ್ರ ರೈಲ್ವೆ ಸಚಿವರನ್ನು ಭೇಟಿ ಮಾಡಿ, “ಬೆಳಗಾವಿ ಜಿಲ್ಲೆಯ ಸುಕ್ಷೇತ್ರ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಅನುಕೂಲವಾಗುವಂತೆ ಸವದತ್ತಿ ಮಾರ್ಗವಾಗಿ ಲೋಕಾಪುರ-ಧಾರವಾಡ ನಡುವೆ ನೂತನ ರೈಲು ಮಾರ್ಗ ನಿರ್ಮಾಣಕ್ಕೆ ಪ್ರಾಥಮಿಕ ಹಂತದಲ್ಲಿ ಅವಶ್ಯವಿರುವ ಮಾರ್ಗ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಬೇಕು” ಎಂದು ಚರ್ಚೆ ಮಾಡಿದ್ದಾರೆ.

“2019ರಲ್ಲಿ ಪ್ರಸ್ತಾಪಿತ ರೈಲು ಮಾರ್ಗ ನಿರ್ಮಾಣಕ್ಕೆ ಪ್ರಾಥಮಿಕ ಹಂತದ ಸಮೀಕ್ಷೆ ಕಾರ್ಯವನ್ನು ರೈಲ್ವೆ ಇಲಾಖೆ ಕೈಗೊಂಡು, ಈ ಮಾರ್ಗದಲ್ಲಿ ಜನದಟ್ಟಣೆ ಇಲ್ಲವೆಂದು ಪ್ರಸ್ತಾಪಿಸಿ, ಯೋಜನೆ ಫಲಕಾಯವಲ್ಲವೆಂದು ವರದಿ ನೀಡಿತ್ತು. ಆದರೆ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮದೇವಿ ದೇವಸ್ಥಾನಕ್ಕೆ 2022-23 ನೇ ಸಾಲಿನಲ್ಲಿ(ಎಪ್ರಿಲ್ 2022 ರಿಂದ ಮಾರ್ಚ್ 2023ರವರೆಗೆ) ಅಂದಾಜು 1.23ಕೋಟಿ ಮಂದಿ ಭೇಟಿ ನೀಡಿದ್ದು, 87 ಲಕ್ಷ ಮಂದಿ ದರ್ಶನ ಪಡೆದಿದ್ದಾರೆ. ಜನಸಾಂದ್ರತೆ ಇದ್ದಿದ್ದರಿಂದ 35 ಲಕ್ಷ ಮಂದಿ ದರ್ಶನ ಪಡೆಯದೆ ವಾಪಸ್ಸಾಗಿದ್ದಾರೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇಶದ ವಿವಿಧ ಭಾಗಗಳಿಂದ ದರ್ಶನಕ್ಕೆ ಬಂದು ಹೋಗಿದ್ದುದರ ಕುರಿತು ಜಿಲ್ಲೆಯ ಪ್ರವಾಸೋದ್ಯಮ ಇಲಾಖೆ ಮಾಹಿತಿ ನೀಡಿದೆ. ಅಲ್ಲದೇ ಕೇಂದ್ರ ಸರ್ಕಾರದ ಯೋಜನೆ ಅಡಿಯಲ್ಲಿ ಈಗಾಗಲೇ ನೂರಾರು ಕೋಟಿ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಸುಕ್ಷೇತ್ರದಲ್ಲಿ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತಾಪಿತ ಮಾರ್ಗದ ರೈಲು ಮಾರ್ಗ ನಿರ್ಮಾಣಕ್ಕಾಗಿ ಪುನಃ ಸಮೀಕ್ಷೆ ಕಾರ್ಯ ಕೈಗೊಳ್ಳುವುದು ಅವಶ್ಯ” ಎಂದು ಕೇಂದ್ರ ಸಚಿವರಲ್ಲಿ ಮನವಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ತುಮಕೂರು | ಮುಸ್ಲಿಂ ಸಾಹಿತ್ಯ ಪ್ರಶಸ್ತಿಗೆ ಡಾ.ಮಿರ್ಜಾ ಬಷೀರ್ ʼಅಬ್ರಕಡಬ್ರʼ ಕೃತಿ ಆಯ್ಕೆ

ವಿಷಯವನ್ನು ಅವಲೋಕಿಸಿದ ರೈಲ್ವೆ ಸಚಿವರು ಮುಂಬರುವ ದಿನಗಳಲ್ಲಿ ಲೋಕಾಪುರ-ಸವದತ್ತಿ- ಧಾರವಾಡ ನೂತನ ರೈಲು ಮಾರ್ಗ ನಿರ್ಮಾಣ ಕುರಿತು ಸಮೀಕ್ಷೆ ಕಾರ್ಯ ನಡೆಸುವ ವಿಷಯ ಪರಿಶೀಲಿಸುವ ಕುರಿತು ಭರವಸೆ ನೀಡಿದ್ದಾರೆ.

ಬೆಂಗಳೂರು-ಧಾರವಾಡ ನಡುವೆ ಸದ್ಯ ಚಲಿಸುತ್ತಿರುವ “ವಂದೇ ಭಾರತ್” ರೈಲು ಸಂಚಾರವನ್ನು ಬೆಳಗಾವಿ ನಗರದವರೆಗೆ ವಿಸ್ತರಿಸುವ ಬಗ್ಗೆಯೂ ನಾವು ಚರ್ಚೆ ನಡೆಸಿದ್ದು, ಸಮಯವನ್ನು ಹೊಂದಿಸಿಕೊಂಡು ರೈಲು ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಿಸುವುದು ಸಾಧ್ಯ ಎಂದು ರೈಲ್ವೆ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಅದರಂತೆ ಈ ಬೇಡಿಕೆಯನ್ನು ಈಡೇರಿಸುವುದಾಗಿ ರೈಲ್ವೆ ಸಚಿವರು ಭೇಟಿಯ ವೇಳೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...