ಕವಾಡಿಗರಹಟ್ಟಿಗೆ ಲೋಕಾಯುಕ್ತ ನ್ಯಾ. ಬಿ ಎಸ್‌ ಪಾಟೀಲ್‌ ದಿಢೀರ್‌ ಭೇಟಿ, ಅಧಿಕಾರಿಗಳಿಗೆ ತರಾಟೆ

Date:

  • ಲೋಕಾಯುಕ್ತರ ಮುಂದೆ ಸಂಕಷ್ಟ ಹೇಳಿಕೊಂಡ ಜನತೆ
  • ಶೌಚಾಲಯ ನಿರ್ಮಿಸಲು ನಗರಸಭೆ ಪೌರಾಯುಕ್ತರಿಗೆ ತಾಕೀತು

ಕಲುಷಿತ ನೀರು ಕುಡಿದು ಜನರು ಅಸ್ವಸ್ಥಗೊಂಡ ಚಿತ್ರದುರ್ಗ ಜಿಲ್ಲೆಯ ಕವಾಡಿಗರಹಟ್ಟಿಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್‌ ಪಾಟೀಲ್‌ ಅವರು ಶುಕ್ರವಾರ ಬೆಳಗ್ಗೆ ದಿಢೀರ್ ಭೇಟಿ ಪರಿಶೀಲನೆ ನಡೆಸಿದರು.

ಈ ವೇಳೆ ಜನರು ಲೋಕಾಯುಕ್ತ ನ್ಯಾಯಮೂರ್ತಿ ಎದುರು ತಮ್ಮ ಸಂಕಷ್ಟಗಳ ಬಗ್ಗೆ ಹೇಳಿಕೊಂಡು, ಮೂಲಸೌಲಭ್ಯ ಕಲ್ಪಿಸುವಂತೆ ಅವರನ್ನು ಮನವಿ ಮಾಡಿದರು.

ಕಾಲರಾ ರೋಗಕ್ಕೆ ತುತ್ತಾದ ಮಂಜುಳ ಅವರ ಮನೆಗೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಮನೆಯ ಸ್ಥಿತಿ, ಅನೈರ್ಮಲ್ಯದ ವಾತಾವರಣ ಕಂಡು ಶೌಚಾಲಯದ ಬಗ್ಗೆ ಪ್ರಶ್ನಿಸಿದರು. ಬಯಲು ಬಹಿರ್ದೆಸೆಗೆ ತೆರಳುತ್ತಿರುವುದಾಗಿ ಕುಟುಂಬಸ್ಥರು ಮಾಹಿತಿ ನೀಡಿದರು. ಸ್ಥಳದಲ್ಲೇ ಇದ್ದ ನಗರಸಭೆ ಪೌರಾಯುಕ್ತ ಶ್ರೀನಿವಾಸ್‌ ಅವರನ್ನು ತರಾಟೆ ತೆಗೆದುಕೊಂಡ ಬಿ ಎಸ್‌ ಪಾಟೀಲ್‌ ಅವರು, ಶೌಚಾಲಯ ನಿರ್ಮಿಸಿಕೊಡುವಂತೆ ತಾಕೀತು ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಗರಸಭೆ ಪೌರಾಯುಕ್ತ ಶ್ರೀನಿವಾಸ್‌ ಪ್ರತಿಕ್ರಿಯಿಸಿ, “‘ಸ್ಥಳಾವಕಾಶದ ಕೊರತೆ ಇರುವುದರಿಂದ ಶೌಚಾಲಯ ನಿರ್ಮಾಣ ಸಾಧ್ಯವಾಗಿಲ್ಲ” ಎಂದು ಸಮಜಾಯಿಷಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರ ಸುಡದಿರಲಿ ಬಿಲ್ ಬಾಕಿ ಬೆಂಕಿ ಕಿಡಿ

ನ್ಯಾಯಮೂರ್ತಿ ಸಂಚಾರ

ಬೆಳಗ್ಗೆ 7.30 ರಿಂದ 11 ಗಂಟೆಯವರೆಗೆ ನಗರದ ವಿವಿಧ ರಸ್ತೆಗಳು, ಬಡಾವಣೆಗಳಲ್ಲಿ ನ್ಯಾಯಮೂರ್ತಿ ಅವರು ಸಂಚಾರ ನಡೆಸಿದರು. ಮೆದೇಹಳ್ಳಿ ರಸ್ತೆ, ಹೊರಪೇಟೆ, ಬಸವೇಶ್ವರ ಟಾಕೀಸ್ ರಸ್ತೆ, ಜೆಸಿಆರ್ ರಸ್ತೆ ಸೇರಿದಂತೆ ಹಲವು ಕಡೆಗಳಲ್ಲಿ ಅಕ್ಕಪಕ್ಕದಲ್ಲಿ ಬಿದ್ದಿರುವ ಕಸದ ರಾಶಿ ಕಂಡು ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಭೇಟಿ ವೇಳೆ ವೈದ್ಯರೇ ಇರಲಿಲ್ಲ

ತಾತ್ಕಾಲಿಕ ಆಸ್ಪತ್ರೆಗೆ ಲೋಕಾಯುಕ್ತ ನ್ಯಾಯಮೂರ್ತಿಗಳು ಭೇಟಿ ನೀಡಿದಾಗ ವೈದ್ಯರೇ ಇರಲಿಲ್ಲ. ಶುಶೂಷಕರು ಮಾತ್ರ ಇರುವುದನ್ನು ಕಂಡು ಅಸಮಾಧಾನ ಹೊರಹಾಕಿದ ಪಾಟೀಲ್‌ ಅವರು, ಜನರಿಗೆ ವೈದ್ಯಕೀಯ ಸೇವೆಯನ್ನು ಸರಿಯಾಗಿ ಒದಗಿಸುವಂತೆ ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...