ಉಡುಪಿ | ನಿಟ್ಟೂರಿನ ಮಲಿನ ನೀರು ಶುದ್ಧೀಕರಣ ಘಟಕಕ್ಕೆ ಉಪ ಲೋಕಾಯುಕ್ತರ ಭೇಟಿ ನೀಡಿ ಅವ್ಯವಸ್ಥೆ ಪರಿಶೀಲನೆ

Date:

ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ. ವೀರಪ್ಪ ರವರು ಇಂದು ನಿಟ್ಟೂರಿನ ಮಲಿನ ನೀರು ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ, ಶುದ್ಧೀಕರಣ ಘಟಕ (ಎಸ್‌ಟಿಪಿ) ದ ನಿರ್ವಹಣೆಗೆ ಪ್ರತೀ ಮಾಹೆ ಸುಮಾರು ರೂ. 3 ಲಕ್ಷ ಕ್ಕೂ ಹೆಚ್ಚು ವೆಚ್ಚ ಮಾಡುತ್ತಿದ್ದರೂ ಸಹ ನಿರ್ವಹಣೆ ವ್ಯವಸ್ಥಿತವಾಗಿ ಇಲ್ಲದಿರುವುದು, ಘಟಕದಿಂದ ಹೊರಬರುತ್ತಿರುವ ದುರ್ವಾಸನೆ, ಕಳಪೆ ಶುದ್ಧೀಕರಣ ಹಾಗೂ ಪೂರ್ಣ ಪ್ರಮಾಣದಲ್ಲಿ ಶುದ್ಧವಾಗದೇ ಇರುವ ನೀರನ್ನು ಸಮುದ್ರಕ್ಕೆ ಬಿಡುತ್ತಿರುವುದು ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ನ್ಯೂನ್ಯತೆಗಳು ಕಂಡು ಬಂದ ಹಿನ್ನೆಲೆ, ಸ್ವಯಂ ಪ್ರೇರಿತವಾಗಿ ದೂರನ್ನು ದಾಖಲಿಸಲು ಸೂಚನೆ ನೀಡಿದರು.

1009795512

ಘಟಕವು ಆರು ಹಂತಗಳಲ್ಲಿ ಶುದ್ಧೀಕರಣಗೊಂಡಿದೆ ಎಂದು ಹೇಳಲಾಗುತ್ತಿದ್ದರೂ ಘಟಕದಿಂದ ಕಪ್ಪುಬಣ್ಣದ ನೀರು ಹೊರಬರುತ್ತಿರುವುದು ಗಮನಿಸಿ ನ್ಯಾಯಮೂರ್ತಿಗಳು ಪರಿಸ್ಥಿತಿಯನ್ನು ಗಂಭೀರವೆಂದು ಅಭಿಪ್ರಾಯಪಟ್ಟರು. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧಿಕಾರಿಯಾದ ಕೀರ್ತಿ ಕುಮಾರ್ ವಿರುದ್ಧ ನಿರ್ಲಕ್ಷ್ಯದ ಪ್ರಕರಣ ದಾಖಲಿಸಲು ಅಧಿಕಾರಿಗಳಿಗೆ ಸೂಚಿಸಿದರು.

1009795509

2010 ರಲ್ಲಿ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ (ಕೆ.ಯು.ಐ.ಡಿ.ಎಫ್.ಸಿ) ಮೂಲಕ ಸ್ಥಾಪಿಸಲ್ಪಟ್ಟ ಈ ಘಟಕವನ್ನು ರೂ. 30 ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೆ ಏರಿಸಲು ಯೋಜಿಸಲಾಗಿದೆ. ಅನುದಾನ ಮಂಜೂರಾದರೂ ಮೇಲ್ದರ್ಜೆ ಕಾಮಗಾರಿ ಇನ್ನೂ ಆರಂಭವಾಗಿಲ್ಲ. ಆದರೆ ನಗರಸಭೆ ಅಧಿಕಾರಿಗಳು ಆರಂಭಿಕ ಕಾರ್ಯ ಶುರು ಆಗಿವೆ ಎಂದು ತಿಳಿಸಿದ್ದಾರೆ. ಅಧಿಕಾರಿಗಳ ಅಸ್ಪಷ್ಟ ಮಾಹಿತಿ ಮತ್ತು ಸಮನ್ವಯದ ಕೊರತೆ ಉಪ ಲೋಕಾಯುಕ್ತರ ಅಸಮಾಧಾನವನ್ನು ಮತ್ತಷ್ಟು ಹೆಚ್ಚಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1009795508

ಸಮರ್ಪಕವಾಗಿ ಶುದ್ಧೀಕರಿಸದ ನೀರನ್ನು ಸಮುದ್ರಕ್ಕೆ ಬಿಡಲಾಗುತ್ತಿದ್ದು, ಅಲ್ಲಿನ ಜಲಚರಗಳು ಮಲಿನ ನೀರಿನಲ್ಲಿರುವ ರಾಸಾಯನಿಕಗಳನ್ನು ಸೇವಿಸುವ ಅನಿವಾರ್ಯತೆ ಉಂಟಾಗಿದೆ. ಅಲ್ಲಿನ ಸಮುದ್ರ ಆಹಾರ ಉತ್ಪನ್ನಗಳು ಜನರು ಸೇವಿಸುತ್ತಿದ್ದಾರೆ. ಇದು ಪರೋಕ್ಷವಾಗಿ ಜನರಿಗೆ ವಿಷವೇ ಉಣಿಸಿದಂತಿದೆ ಎಂದ ಅವರು, ಸುಮಾರು 18 ಜಿಲ್ಲೆಗಳ ಎಸ್.ಟಿ.ಪಿ.ಗಳನ್ನು ಪರಿಶೀಲಿಸಿದ್ದರೂ ಉಡುಪಿಯಷ್ಟು ಕಳಪೆ ಸ್ಥಿತಿ ಎಲ್ಲಿಯೂ ಕಂಡಿಲ್ಲವೆಂದು ಅವರು ತಿಳಿಸಿದರು.

1009795652

ಮಲ್ಪೆ ಕಡೆಗೆ ತೆರಳುವ ವೇಳೆ ಇಂದ್ರಾಣಿ ನದಿಯ ಮಾಲಿನ್ಯದಿಂದ ಬಳಲುತ್ತಿರುವ ನಿವಾಸಿಗಳ ಸ್ಥಿತಿಯನ್ನೂ ಅವರು ಪರಿಶೀಲಿಸಿದರು. ಸ್ಥಳೀಯ ನಿವಾಸಿ ಇಂದಿರಾ, ಹಲವಾರು ವರ್ಷಗಳಿಂದ ನಾವು ಬಾವಿ ನೀರನ್ನು ಬಳಸಲು ಸಾಧ್ಯವಾಗುತ್ತಿಲ್ಲ. ಹಿಂದೆ ಸ್ನಾನಕ್ಕೂ ಬಳಸುತ್ತಿದ್ದೆವು. ಈಗ ನೀರು ರಾಸಾಯನಿಕಗಳಿಂದ ತುಂಬಿರುವುದರಿಂದ ಮೀನುಗಳೂ ಬದುಕುತ್ತಿಲ್ಲ, ದುರ್ವಾಸನೆಯಿಂದ ಅನೇಕರು ಆಸ್ತಮಾ ಮತ್ತು ಉಸಿರಾಟದ ಸಮಸ್ಯೆ ಅನುಭವಿಸುತ್ತಿದ್ದಾರೆ, ಸಿಎಂಸಿ ಕುಡಿಯುವ ನೀರನ್ನು ಪೈಪ್ ಮೂಲಕ ಪೂರೈಸುತ್ತಿರುವುದರಿಂದ ನಾವು ಬದುಕುತ್ತಿದ್ದೇವೆ. ಸಂಜೆ ವೇಳೆಯಲ್ಲಿ ದುರ್ವಾಸನೆ ತಾಳಲಾರದ ಕಾರಣ ಕಿಟಕಿ ಬಾಗಿಲುಗಳನ್ನು ಮುಚ್ಚಿಕೊಳ್ಳುತ್ತೇವೆ, ಎಂಬ ವಿಷಯಗಳ್ನು ತಿಳಿದ ಅವರು, ಬೇಸರ ವ್ಯಕ್ತಪಡಿಸಿ, ಇಂತಹ ನಿರ್ಲಕ್ಷ್ಯವನ್ನು ಸಹಿಸಲಾಗುವುದಿಲ್ಲ ಎಂದು ನ್ಯಾಯಮೂರ್ತಿ ವೀರಪ್ಪ ಎಚ್ಚರಿಕೆ ನೀಡಿದರು.

1009795649

ಇಂದ್ರಾಳಿ ನದಿಯ ನೀರು ಅರಬ್ಬಿ ಸಮುದ್ರವನ್ನು ಕೂಡುವ ಅಳಿವೆ ಪ್ರದೇಶವನ್ನು ವೀಕ್ಷಣೆ ಮಾಡಲು ಹೊರಟಾಗ ನದಿಯ ದಡದಲ್ಲಿ ಗಿಡ ಗಂಟಿಗಳು, ಅನುಪಯುಕ್ತ ವಸ್ತುಗಳು, ಎಲ್ಲೆಂದರಲ್ಲಿ ಬಿಸಾಕಿರುವ ಕಸ ಕಡ್ಡಿಗಳ ರಾಶಿ, ಸತ್ತ ನಾಯಿ ಇರುವುದನ್ನು ನೋಡಿ, ಬೇಸರ ವ್ಯಕ್ತಪಡಿಸಿದ ಅವರು, ಬಂದರು ಹಾಗೂ ಸಿ.ಆರ್.ಝಡ್ ನ ಅಧಿಕಾರಿಗಳಿಗೆ ಕೂಡಲೇ ಇವುಗಳ ಸ್ವಚ್ಛಗೊಳಿಸುವುದರೊಂದಿಗೆ ಇವುಗಳ ನಿರ್ವಹಣೆಯನ್ನು ವ್ಯವಸ್ಥಿತವಾಗಿ ಮಾಡಬೇಕು. ಮಲಿನ ನೀರು ಸಮುದ್ರಕ್ಕೆ ಬಿಡುತ್ತಿದ್ದರೂ ಮೌನವಹಿಸಿ, ಯಾವುದೇ ಕ್ರಮಗಳನ್ನು ಕೈಗೊಳ್ಳದಿರುವ ಬಗ್ಗೆಯೂ ಸಹ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಳ್ಳಲು ಸೂಚನೆ ನೀಡಿದರು.

1009795513

ನಗರದ ಬನ್ನಂಜೆಯ ನೂತನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ಅವರು ಹಾಗೂ ಅವರ ತಂಡದವರು ಮಳಿಗೆಗಳಲ್ಲಿ ಮಾರಾಟ ಮಾಡುತ್ತಿರುವ ಸಿದ್ಧ ಆಹಾರ ಪದಾರ್ಥಗಳ ಹಾಗೂ ಪಾನೀಯಗಳ ತಯಾರಾದ ದಿನಾಂಕ ಮತ್ತು ಅವಧಿ ಮುಗಿದ ದಿನಾಂಕಗಳ ಪರಿಶೀಲನೆ ನಡೆಸಿದರು. ಅಲ್ಲಿನ ಹೋಟೆಲ್‌ನ ಅಡುಗೆ ಕೋಣೆಗೆ ಭೇಟಿ ನೀಡಿ, ಶುದ್ಧತೆ ಹಾಗೂ ಆಹಾರ ತಯಾರಿಕೆ ಬಗ್ಗೆ ವೀಕ್ಷಿಸಿದ ಅವರು, ಹೋಟೆಲ್ ಮಾಲೀಕರುಗಳಿಗೆ ಜನರಿಗೆ ಉತ್ತಮ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ನೀಡಬೇಕು. ಆದಷ್ಟು ಸ್ವಚ್ಛತೆಗೆ ಆದ್ಯತೆ ನೀಡಬೇಕು. ತಿಂಡಿ-ತಿನಿಸುಗಳ ದರಪಟ್ಟಿಯನ್ನು ಪ್ರದರ್ಶಿಸಬೇಕೆಂದ ಅವರು, ಜಿಲ್ಲಾ ಆಹಾರ ಅಂಕಿತ ಅಧಿಕಾರಿಗಳು ಪರಿಶೀಲನೆ ಮಾಡಲು ಸೂಚನೆ ನೀಡಿದ ಅವರು, ತ್ಯಾಜ್ಯ ವಸ್ತುಗಳ ನಿರ್ವಹಣೆಯನ್ನು ಆಗಿಂದ್ದಾಗ್ಗೆ ವಿಲೇವಾರಿಯನ್ನು ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ಮಾಡಬೇಕು. ಅವುಗಳ ಸಂಗ್ರಹಣೆಗೆ ಬಳಸಿರುವ ಕಸ ಹಾಕುವ ಡಬ್ಬಿಗಳ ಮುಚ್ಚುಳವನ್ನು ಅಳವಡಿಸಬೇಕೆಂದು ಸೂಚನೆ ನೀಡಿದರು.

1009795649 1

ಬಸ್ ಸ್ಟಾಂಡ್ ಸ್ವಚ್ಛತೆ ಕಾರ್ಯಗಳನ್ನು ನಿರ್ವಹಿಸುವ ಗುತ್ತಿಗೆದಾರ ನೌಕರರಿಗೆ ಗುರುತಿನ ಚೀಟಿಯನ್ನು ನೀಡಬೇಕು. ಅವರಿಗೆ ನಿಗಧಿತ ಸಂಬಳವನ್ನು ಕಾಲಕಾಲಕ್ಕೆ ಗುತ್ತಿಗೆದಾರರು ನೀಡುತ್ತಿರುವ ಬಗ್ಗೆ ಪರಿಶೀಲಿಸಬೇಕು. ವಿಮಾ ಆಧಾರಿತ ವೈದ್ಯಕೀಯ ಸೌಲಭ್ಯಗಳು ದೊರಕುವಂತಾಗಬೇಕು. ಶೌಚಾಲಯಗಳ ಬಳಕೆಯ ಶುಲ್ಕ ಪಾವತಿಸಲು ಕ್ಯೂ ಆರ್ ಕೋಡ್ ಅನ್ನು ತಪ್ಪದೇ ಅಳವಡಿಸಬೇಕೆಂದು ಸೂಚನೆ ನೀಡಿ, ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡರು.

ಉಡುಪಿ ತಾಲೂಕು ಕಚೇರಿಗ ಭೇಟಿ ನೀಡಿದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಹಾಗೂ ತಂಡ, ತಾಲೂಕು ಕಛೇರಿಯ ಆಡಳಿತ ವಿಭಾಗ, ಟಪ್ಪಾಲು ವಿಭಾಗ, ಭೂಮಿ ಕೇಂದ್ರ, ಅರ್ಜಿ ಸ್ವೀಕಾರ ಅವುಗಳ ನಿರ್ವಹಣಾ ಕೇಂದ್ರಗಳಿಗೆ ಭೇಟಿ ನೀಡಿ, ಕಡತಗಳನ್ನು ಹಾಗೂ ರಿಜಿಸ್ಟರ್ ಗಳನ್ನು ಪರಿಶೀಲಿಸಿದಾಗ ನ್ಯೂನ್ಯತೆಗಳು ಕಂಡು ಬಂದ ಹಿನ್ನೆಲೆ ಹಾಗೂ ಚಿಟ್ ಫಂಡ್ ಕಚೇರಿಯಲ್ಲಿ ನಡೆಸಿರುವ ಬಗ್ಗೆ ಹಾಗೂ ಸಮವಸ್ತçಗಳನ್ನು ಧರಿಸದೇ ಇರುವ ಹಿನ್ನೆಲೆ ಸ್ವಯಂ ಪ್ರೇರಿತ ದೂರುಗಳನ್ನು ದಾಖಲಿಸಿಕೊಂಡರು.

1009795664

ತಾಲೂಕು ಭೂ ದಾಖಲೆಗಳ ಕಚೇರಿ ಭೇಟಿ ನೀಡಿದ ಅವರು, ಅಲ್ಲಿನ ದಾಖಲೆಗಳನ್ನು ಪರಿಶೀಲಿಸಿ, 1500 ಕ್ಕೂ ಹೆಚ್ಚು 11 ಎ , ತತ್ಕಾಲ್ ಪೋಡಿ ಸೇರಿದಂತೆ ಮತ್ತಿತರ ಅಳತೆ ಅರ್ಜಿಗಳು ಬಾಕಿ ಇರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ, ಇದರಿಂದ ಸಾರ್ವಜನಿಕರಿಗೆ ಹೆಚ್ಚಿನ ತೊಂದರೆಗಳು ಉಂಟಾಗುತ್ತಿವೆ. ಮುಂದಿನ ಮೂರು ತಿಂಗಳ ಒಳಗಾಗಿ ಇವುಗಳ ಪೂರ್ಣ ಪ್ರಮಾಣದಲ್ಲಿ ವಿಲೇವಾರಿ ಮಾಡಬೇಕು. ಕಳೆದ 7 ವರ್ಷಗಳಿಂದ ನಿವೃತ್ತ ಸೈನಿಕನ ಜಮೀನಿನ ಅಳತೆ ಮಾಡದೇ ಇರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ಒಂದು ವಾರದ ಒಳಗಾಗಿ ಮಾಡಿಕೊಡಬೇಕು ಎಂದು ತಿಳಿಸಿ, ನ್ಯೂನ್ಯತೆಗಳು ಕಂಡು ಬಂದ ಹಿನ್ನೆಲೆ, ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲು ಸೂಚನೆ ನೀಡಿದರು.

1009795514

ಉಪನೋಂದಣಾಧಿಕಾರಿಗಳ ಕಛೇರಿ ಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ನೋಂದಣಿಗೆ ಆಗಮಿಸಿದ ಜನರ ಸಮಸ್ಯೆಗಳನ್ನು ಆಲಿಸಿದ ಅವರು, ಕಚೇರಿಯ ಕಡತಗಳು ಪರಿಶೀಲನೆ ನಡೆಸಿದರು. ಅಲ್ಲಿನ ಗುತ್ತಿಗೆ ನೌಕರರು ತಮ್ಮ ಸ್ವಂತ ಬ್ಯಾಗ್‌ನಲ್ಲಿ ಅನೇಕ ಖಾಸಗಿ ದಾಖಲೆಗಳು ಕಂಡು ಬಂದ ಹಿನ್ನೆಲೆ, ಇವುಗಳ ಬಗ್ಗೆ ಸೂಕ್ತ ವಿವರಗಳನ್ನು ನೀಡದೇ ಹಾಗೂ ಕೆಲಸ ಕಾರ್ಯಗಳ ನಿರ್ವಹಣೆಯಲ್ಲಿ ನ್ಯೂನ್ಯತೆಗಳು ಕಂಡು ಬಂದ ಹಿನ್ನೆಲೆ, ಪರಕರಣ ದಾಖಲಿಸಲು ಸೂಚನೆ ನೀಡಿದರು.

ಉಪ ಲೋಕಾಯುಕ್ತ ನ್ಯಾಯಮೂರ್ತಿಗಳು ಜಿಲ್ಲಾ ಆಸ್ಪತ್ರೆಯ ಔಷಧಿ ವಿತರಣಾ ಕೇಂದ್ರ, ನೋಂದಣಿ ಕೇಂದ್ರ, ಮಹಿಳಾ ವಾರ್ಡ್, ಪ್ರಯೋಗಾಲಯ, ರಕ್ತನಿಧಿ ಕೇಂದ್ರ, ಆಸ್ಪತ್ರೆಯ ಆಡಳಿತ ವಿಭಾಗಕ್ಕೆ ಭೇಟಿ ನೀಡಿದ ಅವರು, ಆಡಳಿತ ಕೇಂದ್ರದಲ್ಲಿ ದಾಖಲೆಗಳ ಪರಿಶೀಲನೆಯನ್ನು ನಡೆಸಿದರು. ರಕ್ತನಿಧಿ ಕೇಂದ್ರದ ರಿಜಿಸ್ಟರ್, ಡೇಕೇರ್ ಸೆಂಟರ್‌ಗಳನ್ನು ಪರಿಶೀಲಿಸಿದ ಅವರು, ಜನನ ಹಾಗೂ ಮರಣ ಪ್ರಮಾಣದ ಅನೇಕ ಪತ್ರಗಳು ಕಂಡು ಬಂದ ಹಿನ್ನೆಲೆ, ಸಂಬAಧಪಟ್ಟವರಿಗೆ ಪೋಸ್ಟ್ ಮೂಲಕ ರವಾನೆ ಮಾಡಬೇಕೆಂದು ಸೂಚನೆ ನೀಡಿದ ಅವರು, ಸಹಾಯಕ ಕಮೀಷನರ್ ಗೆ ಆಗಿಂದಾಗ್ಗೆ ಆಸ್ಪತ್ರೆ ಭೇಟಿ ನೀಡಿ ಪರಿಶೀಲಿಸಲು ಸೂಚನೆ ನೀಡಿದರು. ಆಸ್ಪತ್ರೆಯ ಕ್ಯಾಂಟೀನ್ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡದೇ ಇರುವ ಹಿನ್ನೆಲೆ, ಕ್ಯಾಂಟಿನ್ ಬಂದ್ ಮಾಡಲು ಕ್ರಮಕೈಗೊಳ್ಳುವಂತೆ ತಿಳಿಸಿದರು.

1009795513 1

ನಗರಸಭೆ ಕಚೇರಿಗೆ ಹಠಾತ್ ಭೇಟಿ ಮಾಡಿದ ಅವರು, ಅಲ್ಲಿನ ಬಯೋಮೆಟ್ರಿಕ್‌ನ ಕಾರ್ಯ, ಕಳೆದ ಮೂರು ವರ್ಷಗಳಲ್ಲಿ ಕೈಗೊಂಡ ಕಾಮಗಾರಿಗಳ ವಿವರ, ವಾಹನಗಳ ನಿರ್ವಹಣೆ, ಆಸ್ತಿ ತೆರಿಗೆ ಸಂಗ್ರಹ, ಇ-ಆಸ್ತಿ ಮಾಡುವ ಬಾಕಿ ಇರುವ ಅರ್ಜಿಗಳ ವಿವರ, ಉದ್ದಿಮೆ ಪರವಾನಿಗೆ, ಪಾರ್ಕ್ಗಳ ನಿರ್ವಹಣೆ, ನಗರಸಭೆಯ ಭೂಮಿಯ ಅತಿಕ್ರಮ ಸೇರಿದಂತೆ ಮತ್ತಿತರ ವಿವರಗಳನ್ನು ಉಪ ಲೋಕಾಯುಕ್ತ ನ್ಯಾಯಮೂರ್ತಿ ಹಾಗೂ ತಂಡದವರು ಪರಿಶೀಲಿಸಿ, ನ್ಯೂನ್ಯತೆಗಳು ಕಂಡು ಬಂದ ಹಿನ್ನೆಲೆ, ದೂರುಗಳನ್ನು ದಾಖಲಿಸಿಕೊಂಡರು.

ಈ ಸಂದರ್ಭದಲ್ಲಿ ಕರ್ನಾಟಕ ಲೋಕಾಯುಕ್ತ ಉಪ ನಿಬಂಧಕರು ವಿಚಾರಣೆ – 1 ಶ್ರೀಯುತ ಅರವಿಂದ್ ಎನ್.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಮಂಗಳೂರು ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಬಿ.ಪಿ ದಿನೇಶ್ ಕುಮಾರ್, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯಕ್, ಹಿರಿಯ ಸಿವಿಲ್ ನ್ಯಾಯಾಧೀಶ ಮನು ಪಟೇಲ್, ಸಹಾಯಕ ಕಮೀಷನರ್ ರಶ್ಮಿ, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...