ಮಂಗಳೂರು | ‘ವಿನೂತನ ಒಳಮೀಸಲಾತಿ ನೀತಿ’ ಪ್ರಕಟಿಸಿ ಲೋಲಾಕ್ಷ ಅಭಿಮತ

Date:

ಶಿಕ್ಷಕರಿಲ್ಲದ, ಸರಿಯಾಗಿ ಪಠ್ಯ ಪುಸ್ತಕಗಳೇ ಇಲ್ಲದೆ, ಕಾಲಿಗೆ ಚಪ್ಪಲಿಯೂ ಇಲ್ಲದೆ ಸರಕಾರಿ ಶಾಲೆಗಳಲ್ಲಿ ಓದುವ ನಮ್ಮ ನಗರಗಳಲ್ಲಿ ಬೀದಿ ಗುಡಿಸುವ, ಚರಂಡಿ ಸ್ವಚ್ಛ ಮಾಡುವ ಬಡ ಪೌರ ಕಾರ್ಮಿಕರ ಮಕ್ಕಳು, ರಸ್ತೆ ಬದಿಗಳಲ್ಲಿ ಬೂಟ್ ಪಾಲಿಶ್ ಮಾಡುವವರ ಮಕ್ಕಳು ಮತ್ತು ಎಲ್ಲ ಸೌಲಭ್ಯ – ಸೌಕರ್ಯಗಳೊಂದಿಗೆ ಮೊಂಟೆಸ್ಸೋರಿ, ಸಿ ಬಿ ಎಸ್ ಸಿ ಮತ್ತು ಐ ಸಿ ಎಸ್ ಸಿ ಶಾಲೆಗಳಲ್ಲಿ ಓದುವ ಮತ್ತು ಐ ಎ ಎಸ್, ಐ ಪಿ ಎಸ್ ಅಧಿಕಾರಿಗಳು ಮತ್ತು ಮಂತ್ರಿಗಳ ಮಕ್ಕಳು, ಕೇವಲ ಅವರೆಲ್ಲರ ಜಾತಿ ಒಂದೇ ಎಂಬ ಕಾರಣಕ್ಕಾಗಿ, ಮೆಡಿಕಲ್, ಇಂಜಿನಿಯರಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಮತ್ತು ಸರಕಾರಿ ನೌಕರಿ ಪಡೆಯಲು ಒಂದೇ ಕೋಟಾದಡಿಯಲ್ಲಿ ಸ್ಪರ್ಧೆ ಎದುರಿಸಬೇಕು ಎಂಬ ಚಿಂತನೆ ಮತ್ತು ಅಂತಹ ನೀತಿ ಮೂಲತಃ ಅತ್ಯಂತ ಅಮಾನವೀಯ. ಆದ್ದರಿಂದ ಪರಿಶಿಷ್ಟ ಜಾತಿಗಳ ನಡುವೆ ಒಳಮೀಸಲಾತಿ ಕಲ್ಪಿಸಲು ರಾಜ್ಯ ಸರಕಾರ ಮುಂದಾಗಿರುವ ಈ ಸಂದರ್ಭದಲ್ಲಿ, ಈ ಅಮಾನವೀಯ ಮೀಸಲಾತಿ ನೀತಿಯನ್ನು ಆಮೂಲಾಗ್ರ ವಾಗಿ ಪರಿಷ್ಕರಿಸಿ ಅಥವಾ ತಿರಸ್ಕರಿಸಿ, ಈ ಶೋಷಿತ ಜಾತಿಗಲ್ಲಿರುವ ಅತ್ಯಂತ ದುರ್ಬಲರೂ ಅಸಹಾಯಕರೂ ಆಗಿರುವ ಶ್ರಮಜೀವಿಗಳ ವರ್ಗಗಳಿಗೆ ವಿಶೇಷ ಆದ್ಯತೆ ಮತ್ತು ಸಂರಕ್ಷಣೆ ನೀಡುವ ವಿನೂತನ ಮೀಸಲಾತಿ ನೀತಿಯನ್ನು ರೂಪಿಸಲಾಗಿದೆ ಎಂದು ಪರಿಶಿಷ್ಟ ಜಾತಿಗಳು ಮತ್ತು ಬುಡಕಟ್ಟುಗಳ ಸಂಘ ಸಂಸ್ಥೆಗಳ ಮಹಾಒಕ್ಕೂಟದ ಅಧ್ಯಕ್ಷ ಲೋಲಾಕ್ಷ ಹೇಳಿದ್ದಾರೆ.

ಭಾನುವಾರ ಮಂಗಳೂರು ನಗರದ ಹೊಟೇಲ್ ಶ್ರೀನಿವಾಸ್ ನಲ್ಲಿ ಸಂಘಟಿಸಲಾಗಿದ್ದ’ಪರಿಶಿಷ್ಟ ಜಾತಿಗಳ ನಡುವೆ ಒಳಮೀಸಲಾತಿ ಕುರಿತ ಸಮಾಲೋಚನಾ ಸಭೆ’ ಯಲ್ಲಿ ಲೋಲಾಕ್ಷ ಮಾತನಾಡುತ್ತಿದ್ದರು.

ಪವರ್ ಪಾಯಿಂಟ್ ಮೂಲಕ ಪರಿಶಿಷ್ಟ ಜಾತಿಗಳ ಕುರಿತು ಸಂವಿಧಾನದ ಪರಿಕಲ್ಪನೆ, ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಕುರಿತು ಸಂವಿಧಾನದ ಆಶಯ ಮತ್ತು ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳ ಪ್ರಸಕ್ತ ಸ್ಥಿತಿ ಗತಿ ಕುರಿತು ಸಾಕಷ್ಟು ಸರಕಾರಿ ವರದಿಗಳನ್ನು, ದತ್ತಾಂಶಗಳನ್ನು ಪ್ರಸ್ತುತ ಪಡಿಸುತ್ತಾ, ಈ ವಿಚಾರದ ವಿಸ್ತ್ರತ ವಿಶ್ಲೇಷಣೆ ನಡೆಸಿದ ಲೋಲಾಕ್ಷ ಅವರು, ಬದಲಾವಣೆಗೆ ಈಗ ಕಾಲ ಪಕ್ವವಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಳುವ ವರ್ಗಗಳು ಸಿದ್ಧ ಪಡಿಸುವ ನೀತಿಗೆ ಪರ್ಯಾಯವಾಗಿ, ತಾವು ಸಿದ್ಧ ಪಡಿಸಿದ ಒಳಮೀಸಲಾತಿ ನೀತಿ ಮತ್ತು ಅದರ ಪರಿಣಾಮ ಕಾರಿ ಅನುಷ್ಠಾನ ಹೇಗೆ ಮತ್ತು ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳು ಎಂದು ಅಧಿಸೂಚಿತ 101 ಜಾತಿಗಳಲ್ಲಿರುವ ವಿವಿಧ ವರ್ಗಗಳ ಜನರ ಸಂರಕ್ಷಣೆ ಹೇಗೆ ಖಾತರಿ ಮಾಡ ಬಹುದು ಎಂಬುದನ್ನು 100 ಪಾಯಿಂಟ್ ರೋಸ್ಟರ್ ಮೂಲಕ ವಿವರಿಸಿ, ವಿಶ್ಲೇಷಣೆ ನಡೆಸಿದರು.

ಈ ವೈಜ್ಞಾನಿಕ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಈ ವಿನೂತನ ಮೀಸಲಾತಿ ನೀತಿಯನ್ನು ರಾಜ್ಯದಲ್ಲಿ ಅನುಷ್ಠಾನಕ್ಕೆ ತರುವಲ್ಲಿ ನಮ್ಮ ಪ್ರಜ್ಞಾವಂತ ನಾಗರಿಕ ಸಮಾಜ ನಮಗೆ ನೆರವು ನೀಡಬೇಕು ಎಂದು ಮನವಿ ಮಾಡಿದ ಅವರು, ಈ ಬಗ್ಗೆ ಶೀಘ್ರದಲ್ಲಿ ಮಹಾಒಕ್ಕೂಟದ ನಿಯೋಗ ನಮ್ಮ ಜನಪ್ರತಿನಿದಿನಗಳನ್ನು ಭೇಟಿ ಮಾಡಿ ಚರ್ಚಿಸಲಿದೆ ಎಂದು ಹೇಳಿದರು.

‘ಆಯೋಗದಿಂದಲೇ ಸಂವಿಧಾನಕ್ಕೆ ಅಪಚಾರ’

ಕರ್ನಾಟಕ ರಾಜ್ಯಕ್ಕೆ ಅಧಿಸೂಚಿತವಾಗಿರುವ ‘ಆದಿ ಆಂಧ್ರ’, ‘ಆದಿ ದ್ರಾವಿಡ’ ಮತ್ತು ‘ಆದಿ ಕರ್ನಾಟಕ’ ಎಂಬ ಹೆಸರಿನ ಜಾತಿಗಳನ್ನು ‘ಅವುಗಳು ಜಾತಿಗಳಲ್ಲ, ಜಾತಿಗಳ ಗುಂಪುಗಳು. ಆದ್ದರಿಂದ ಈ ಗುಂಪುಗಳಿಗೆ ಸೇರಿದವರು ಸಮೀಕ್ಷೆಯಲ್ಲಿ ತಮ್ಮ ಉಪ ಜಾತಿಗಳನ್ನು ದಾಖಲಿಸ ಬೇಕು’ ಎಂದು ಹೇಳುತ್ತಾ ಸರಕಾರದ ಓರ್ವ ಸಚಿವರು ಮತ್ತು ಸ್ವತಃ ನ್ಯಾ. ನಾಗಮೋಹನ್ ದಾಸ್ ಅವರು ಪರಿಶಿಷ್ಟ ಸಮುದಾಯಗಳಲ್ಲಿ ಅನಗತ್ಯ ಗೊಂದಲಗಳನ್ನು ಮೂಡಿಸುತ್ತಿದ್ದಾರೆ.

‘ಸಂವಿಧಾನ (ಪರಿಶಿಷ್ಟ ಜಾತಿಗಳು) ಆದೇಶ, 1950 ಇರಬಹುದು ಅಥವಾ ದಿ. 27.07.1977 ರಂದು ಜಾರಿಗೆ ಬಂದಿರುವ ತಿದ್ದುಪಡಿ ಆದೇಶ (Act 108 of 1976- Govt of India) ಇರಬಹುದು, ಈ ಮೂರನ್ನೂ ಪರಿಶಿಷ್ಟ ಜಾತಿಗಳು ಎಂದೇ ಅಧಿಸೂಚಿಸಲಾಗಿದೆ. ಇವುಗಳನ್ನು ‘ಜಾತಿಗಳ ಗುಂಪುಗಳು’ ಎಂದು ಕರೆಯಲು, ಪರಿಗಣಿಸಲು ಆಯೋಗಕ್ಕಾಗಲಿ, ಸಚಿವರಿಗೆ ಆಗಲಿ ಯಾವುದೇ ಅಧಿಕಾರ ಇಲ್ಲ. ಇದು ಸಂವಿಧಾನಕ್ಕೆ ಮಾಡುವ ಅಪಚಾರ. ಹೇಗಾದರೂ ಮಾಡಿ ಪರಿಶಿಷ್ಟ ಜಾತಿಗಳನ್ನು, ಜಾತೀಯ ನೆಲೆಯಲ್ಲಿಯೇ ಒಡೆದು, ಅವರನ್ನು ಇನ್ನಷ್ಟು ದುರ್ಬಲ ಗೊಳಿಸಬೇಕು ಎಂಬ ವಿಕೃತ ಮನಸ್ಸು ಇದು ಎಂದು ಅವರು ತಮ್ಮ ಅಸಮಾಧಾನ ವ್ಯಕ್ತ ಪಡಿಸಿದರು.

ಕರ್ನಾಟಕ ರಾಜ್ಯದ 101 ಪರಿಶಿಷ್ಟ ಜಾತಿಗಳನ್ನು ನಾಲ್ಕು ಗುಂಪುಗಳಲ್ಲಿ ವಿಂಗಡಿಸಿ, ಅದರಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ 13 ಜಾತಿಗಳು ಸೇರಿ, 89 ಅತ್ಯಂತ ದುರ್ಬಲ ಜಾತಿಗಳಿಗೆ ಶೇಕಡಾ 1 ಮೀಸಲಾತಿ ನಿಗದಿ ಗೊಳಿಸಿ, ಈ ಬಗ್ಗೆ ಸಂವಿಧಾಕ್ಕೆ ಸೂಕ್ತ ತಿದ್ದುಪಡಿ ಮಾಡಬೇಕು ಎಂದು ಬಸವರಾಜ ಬೊಮ್ಮಯಿ ನೇತೃತ್ವದ ರಾಜ್ಯ ಸರಕಾರ ದಿ. 27.03.2023 ರಂದು ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಿತ್ತು. ನಮ್ಮ ಮಹಾಒಕ್ಕೂಟ ಇದನ್ನು ಆಗಲೇ ತೀವ್ರವಾಗಿ ವಿರೋಧಿಸಿತ್ತು.

ಈ ವರ್ಷ ಏಪ್ರಿಲ್ 14 ರಂದು ತೆಲಂಗಾಣದ ಸರಕಾರ ಆ ರಾಜ್ಯದ 59 ಪರಿಶಿಷ್ಟ ಜಾತಿಗಳನ್ನು ಮೂರು ಗುಂಪುಗಳಾಗಿ ವಿಂಗಡಿಸಿ, ಅತೀ ಹೆಚ್ಚು ಹಿಂದುಳಿದಿರುವ 25 ಪರಿಶಿಷ್ಟ ಜಾತಿಗಳಿಗೆ ಶೇಕಡಾ 1 ಮೀಸಲಾತಿ ಕಲ್ಪಿಸಿ ಅಧಿಸೂಚನೆ ಹೊರಡಿಸಿದೆ.

ಈ ವರ್ಷದ ಏಪ್ರಿಲ್ 17 ರಂದು ಆಂಧ್ರ ಪ್ರದೇಶ ಸರಕಾರ ಆ ರಾಜ್ಯದ 59 ಪರಿಶಿಷ್ಟ ಜಾತಿಗಳನ್ನು ಮೂರು ಗುಂಪುಗಳಲ್ಲಿ ವಿಂಗಡಿಸಿ, ಅತ್ಯಂತ ಹಿಂದುಳಿದ 12 ಪರಿಶಿಷ್ಟ ಜಾತಿಗಳಿಗೆ ಶೇಕಡಾ 1 ಮೀಸಲಾತಿ ನಿಗದಿಗೊಳಿಸಿ Andhra Pradesh Scheduled Castes ( Sub Classification) Ordinance, 2025 ನ್ನು ಹೊರಡಿಸಿದೆ. ಇವೆಲ್ಲವೂ ಸಂವಿಧಾನದ ಆಶಯಕ್ಕೆ ವ್ಯತಿರಿಕ್ತವಾಗಿವೆ. ಇದರಿಂದ, ಪರಿಶಿಷ್ಟ ಜಾತಿಗಳನ್ನು ಒಡೆದು ಆಳುವ ನೀತಿಯನ್ನು ಈ ಮೂರೂ ರಾಜ್ಯಗಳ ಆಳುವ ವರ್ಗ ಅನುಸರಿಸುತ್ತಿರುವುದನ್ನು ನಾವು ಕಾಣಬಹುದಾಗಿದೆ ಎಂದು ಅವರು ಅಭಿಪ್ರಾಯ ಪಟ್ಟರು.

‘ಅಸಮಾನ ಶಿಕ್ಷಣದಿಂದ ಆತಂಕಕಾರಿ ಅಸಮಾನತೆ’

ಈ ಸಮಾಲೋಚನಾ ಸಭೆಯಲ್ಲಿ ತಮ್ಮ ಚಿಂತನೆಗಳನ್ನು ಪ್ರಸ್ತುತ ಪಡಿಸಿದ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಮಾಜಿ ಅಧ್ಯಕ್ಷ ಮತ್ತು ಮಕ್ಕಳ ಹಕ್ಕುಗಳ ಕುರಿತ ತಜ್ಞರಾದ ರೆನ್ನಿ ಡಿ’ ಸೋಜ ಅವರು, ಸಮಾಜದಲ್ಲಿ ಇರುವ ಶ್ರೇಣೀಕೃತ ವ್ಯವಸ್ಥೆಯಂತೆಯೇ ಶಿಕ್ಷಣ ಪದ್ಧತಿಯಲ್ಲೂ ಶ್ರೇಣಿಕರಣ ಇದ್ದು, ಇದು ಪರಿಶಿಷ್ಟ ಜಾತಿಗಳಲ್ಲಿ ಆತಂಕಕಾರಿಯಾದ ಅಸಮಾನತೆಗೆ ಕಾರವಾಗುತ್ತಿದೆ ಎಂದು ಪಿ ಪಿ ಟಿ ಮೂಲಕ ಸಾಕಷ್ಟು ದತ್ತಾಂಶಗಳ ಮೂಲಕ ವಿವರಿಸಿ, ವಿಶ್ಲೇಷಣೆ ನಡೆಸಿದರು.

ಈ ಸಮಾಲೋಚನಾ ಕಾರ್ಯಕ್ರಮವನ್ನು ವಿಶ್ರಾಂತ ಪೌರ ಕಾರ್ಮಿಕೆ ಪೂವಮ್ಮ ಉದ್ಘಾಟಿಸಿದರು. ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಬಿ ಎ ಎಂ ಹನೀಫ್, ಸುಳ್ಯ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಚನಿಯ ಕಲ್ತಡ್ಕ, ಹಿರಿಯ ಪತ್ರಕರ್ತರಾದ ಎಸ್ ಜಯರಾಮ್ ಮತ್ತು ರಮೇಶ್ ಪೆರ್ಲ, ಮಾಜಿ ಕರ್ಪೂರೇಟರ್ ಪ್ರೇಮ್ ಬಲ್ಲಾಳ್ ಭಾಗ್, ಡಿ ಎಸ್ ಎಸ್ ಸಂಚಾಲಕ ಗಿರೀಶ್ ಉಳ್ಳಾಲ್, ಮಹಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕಾಂತಪ್ಪ ಅಲಂಗಾರ್, ಉಪಾಧ್ಯಕ್ಷರಾದ ಮೋಹನಾಂಗಯ್ಯ ಸ್ವಾಮಿ, ಸೀತಾರಾಮ್ ಕೊಂಚಾಡಿ, ಉಪ ಕಾರ್ಯದರ್ಶಿ ಪದ್ಮನಾಭ ಮೂಡಬಿದರೆ, ಪ್ರೊ. ಐಡಾ ಡಿ ಸೋಜ, ಜಿಲ್ಲಾ ಡಿ ಗ್ರೂಪ್ ನೌಕರರ ಸಂಘದ ಅಧ್ಯಕ್ಷ ಅನಿಲ್ ಕಂಕನಾಡಿ, ವಿ ವಿ ಯ ಶಿಕ್ಷಕ ಡಾ. ಅನಿಲ್ ಮತ್ತು ಜಿಲ್ಲೆಯ ವಿವಿಧ ಪರಿಶಿಷ್ಟ ಜಾತಿಗಳ ಸಂಘಟನೆಗಳ ನಾಯಕರು, ವಿವಿಧ ನೌಕರರ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದು, ಸಮಾಲೋಚನೆಯಲ್ಲಿ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...