ಬೀದರ್‌ |ಬ್ರಿಮ್ಸ್ ಹೊರಗುತ್ತಿಗೆಯಲ್ಲಿ ಲೂಟಿ; ಸಚಿವ ಖೂಬಾರನ್ನು ಸಂಪುಟದಿಂದ ವಜಾಕ್ಕೆ ಒತ್ತಾಯ

Date:

  • ಸಚಿವ ಭಗವಂತ ಖೂಬಾಗೆ ಈಶ್ವರ ಖಂಡ್ರೆ ವಿರುದ್ಧ ಮಾತನಾಡುವ ಯಾವುದೇ ನೈತಿಕತೆ ಇಲ್ಲ.
  • ಸಚಿವ ಖೂಬಾ ವಿರುದ್ಧ ಸಮಗ್ರ ತನಿಖೆಗೆ ಆದೇಶ ನೀಡುವಂತೆ ರಾಷ್ಟ್ರಪತಿಗಳಿಗೆ ಪತ್ರ ಬರೆಯಲು ಸಿದ್ಧ

ಬೀದರ್ ಬ್ರಿಮ್ಸ್ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನೌಕರರ ನೇಮಕಾತಿಯ ಗುತ್ತಿಗೆಯನ್ನು ತಮ್ಮ ಸೋದರನ ಸಂಸ್ಥೆಗೆ ಕೊಡಿಸಿ, ಮಂಜೂರಾದ ಹುದ್ದೆಗಿಂತ ಕಡಿಮೆ ಜನರನ್ನು ಕೆಲಸಕ್ಕೆ ಹಚ್ಚಿ ಹಣ ಲೂಟಿ ಮಾಡಿದ ಕೇಂದ್ರ ಸಚಿವ ಭಗವಂತ ಖೂಬಾಗೆ ಈಶ್ವರ ಖಂಡ್ರೆ ವಿರುದ್ಧ ಮಾತನಾಡುವ ಯಾವುದೇ ನೈತಿಕತೆ ಇಲ್ಲ ಎಂದು ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಅಮೃತರಾವ್ ಚಿಮಕೋಡ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ ತಿರುಗೇಟು ನೀಡಿದ್ದಾರೆ.

“ಬ್ರಿಮ್ಸ್ ಆಸ್ಪತ್ರೆಯಲ್ಲಿ ದುಡಿದ ಬಡ ಮತ್ತು ದಲಿತ ನೈರ್ಮಲ್ಯ ಕಾರ್ಯಕರ್ತರಿಗೆ, ದುರ್ಬಲ ವರ್ಗದ ಮಹಿಳೆಯರಿಗೆ ಸರಿಯಾಗಿ ಸಂಬಳವನ್ನೂ ನೀಡದೆ, ಭವಿಷ್ಯನಿಧಿ, ಇ.ಎಸ್.ಐ. ಹಣ ಕಟ್ಟದೆ ವಂಚಿಸಿ, ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ಆರ್ಥಿಕ ಇಲಾಖೆಯ ಮೇಲೆ ಒತ್ತಡ ಹೇರಿ ಹಣ ಬಿಡುಗಡೆ ಮಾಡಿಸಿಕೊಂಡವರು ಈಗ ಈಶ್ವರ ಖಂಡ್ರೆ ದಬ್ಬಾಳಿಕೆ ಮಾಡುತ್ತಿದ್ದಾರೆ ಎಂದು ಹೇಳುವುದು ಭೂತದ ಬಾಯಲ್ಲಿ ಭಗವದ್ಗೀತೆ ನುಡಿದಂತೆ ಆಗಿದೆ” ಎಂದು ಅವರು ವ್ಯಂಗ್ಯವಾಡಿದ್ದಾರೆ.

“ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದೆ. ಎಲ್ಲ ಗ್ಯಾರಂಟಿಗಳನ್ನೂ ಹಂತ ಹಂತವಾಗಿ ಮತ್ತು ಯಶಸ್ವಿಯಾಗಿ ಜಾರಿ ಮಾಡುತ್ತಿದೆ. ಈಶ್ವರ ಖಂಡ್ರೆ ಅವರು ಜಿಲ್ಲೆಯ ಅಭಿವೃದ್ಧಿಗೆ ಹಲವು ಯೋಜನೆ ರೂಪಿಸುತ್ತಿದ್ದು, ಅವರ ಜನಪ್ರಿಯತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ, ಸಚಿವರ ಏಳಿಗೆ ಸಹಿಸದೆ ಖೂಬಾ ಅನಗತ್ಯ ಪ್ರಲಾಪ ಮಾಡುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಿಲ್ಲೆಯ ಯಾವುದೇ ಇಲಾಖೆಯಲ್ಲಿ ಯಾವುದೇ ರೀತಿಯ ಅವ್ಯವಹಾರ ನಡೆಯುತ್ತಿರುವ ಬಗ್ಗೆ ದೂರು ಬಂದರೆ ಅದರ ಪರಿಶೀಲನೆ ಮಾಡುವ ಜವಾಬ್ದಾರಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಇರುತ್ತದೆ. ಎಲ್ಲಿ ತಮ್ಮ ನಿಜ ಬಣ್ಣ ಬಯಲಾಗುತ್ತದೋ ಎಂದು ಹೆದರಿ ಖೂಬಾ ಹೀಗೆಲ್ಲಾ ಹೇಳಿಕೆ ನೀಡುತ್ತಿದ್ದಾರೆ. ಜಿಲ್ಲೆಯಲ್ಲಿ ನಡೆದಿರುವ ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ. ಈ ಬಗ್ಗೆ ಚಕಾರ ಎತ್ತದ ಖೂಬಾ ಗುತ್ತಿಗೆದಾರ ಸಂಸ್ಥೆಯೊಂದಿಗೆ ಶಾಮೀಲಾಗಿರುವ ಬಗ್ಗೆ ಅವರ ಪಕ್ಷದವರೇ ಆರೋಪ ಮಾಡುತ್ತಿದ್ದಾರೆ” ದೂರಿದರು.

ಈ ಸುದ್ದಿ ಓದಿದ್ದೀರಾ ? ಬೀದರ್ | ಅಪ್ರಾಪ್ತೆಯನ್ನು ವಿವಾಹವಾದ ಸರ್ಕಾರಿ ಶಾಲೆ ಶಿಕ್ಷಕ; ಪ್ರಕರಣ ದಾಖಲು

ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಸಮಗ್ರ ತನಿಖೆಗೆ ಆದೇಶ ನೀಡುವಂತೆ ಮತ್ತು ಸಂಪುಟದಿಂದ ವಜಾಮಾಡುವಂತೆ ಕೋರಿ ರಾಷ್ಟ್ರಪತಿಗಳಿಗೆ ಪತ್ರ ಬರೆಯುವುದಾಗಿ ಅವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...