ಮೈಸೂರು | ಹೋರಾಟಗಾರರನ್ನು ಕಳೆದುಕೊಳ್ಳುವುದು ಸಮಾಜಕ್ಕೆ ನಷ್ಟ : ಬಡಗಲಪುರ ನಾಗೇಂದ್ರ

Date:

ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆಯಲ್ಲಿ ನಡೆದ ಹೆಗ್ಗನೂರು ಅಣ್ಣೆಗೌಡ ಅವರ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ‘ಹೋರಾಟಗಾರರನ್ನು ಕಳೆದುಕೊಳ್ಳುವುದು ಸಮಾಜಕ್ಕೆ ನಷ್ಟ’ ಎಂದು ಅಭಿಪ್ರಾಯಪಟ್ಟರು.

“ಇಂದಿನ ಯುವ ಪೀಳಿಗೆ ಸಂಘಟನೆ ಕಡೆಗೆ ಮುಖ ಮಾಡದಿರುವ ಹೊತ್ತಿನಲ್ಲಿ ಹಿರಿಯ ಹೋರಾಟಗಾರರನ್ನು
ಕಳೆದುಕೊಳ್ಳುತ್ತಿರುವುದು ಸಮಾಜಕ್ಕೆ ನಷ್ಟ. ಅದೇ ರಾಜಕೀಯ ಕ್ಷೇತ್ರವಾದರೆ ಹಾಗಲ್ಲ, ಮಗದೊಬ್ಬ, ಮತ್ತೊಬ್ಬ ಬರಲು ಅವಕಾಶ. ಯಾವತ್ತಿಗೂ ಹೋರಾಟಗಾರರು ಸಮಾಜದ ಆಸ್ತಿ” ಎಂದರು.

ಹಿರಿಯ ಮುಖಂಡರಾದ ಜೆ ಪಿ ನಾಗರಾಜು ಮಾತನಾಡಿ ಅಣ್ಣೆಗೌಡರು ಸರಳ ಜೀವಿಯಾಗಿದ್ದು, ತಾಲ್ಲೂಕಿನಲ್ಲಿ ಸ್ವತಃ ತಮ್ಮ ಖರ್ಚಿನಿಂದ ಓಡಾಟ ನಡೆಸಿ ಸಂಘಟನೆ ಕಟ್ಟಲು ಶ್ರಮಿಸಿದವರು. ಇಂದು ದೊಡ್ಡ ಮಟ್ಟದಲ್ಲಿ ಸಂಘಟನೆ ಬೆಳೆಯಲು ಕಾರಣರಾದರು ಎಂದು ತಿಳಿಸಿದರು. ಜಿಲ್ಲಾ ಉಪಾಧ್ಯಕ್ಷ ಪಳನಿಸ್ವಾಮಿ ಮಾತನಾಡಿ ಪ್ರೊ. ನಂಜುಂಡಸ್ವಾಮಿ, ದಿವಂಗತ ಕೆ. ಎಸ್. ಪುಟ್ಟಣ್ಣಯ್ಯ ಅವರ ಸಾಂಗತ್ಯದಿಂದ, ಅಂದಿನಿಂದಲೂ ಹೋರಾಟದಲ್ಲಿ ತೊಡಗಿಸಿಕೊಂಡು ಇಂದಿನವರಿಗೆ ಸ್ಫೂರ್ತಿಯಾಗಿದ್ದಾರೆ ಎಂದರು. ತಾಲ್ಲೂಕು ಅಧ್ಯಕ್ಷರಾದ ಮಹಾದೇವ ನಾಯಕ ಮಾತನಾಡಿ ತಾಲ್ಲೂಕಿನ ಮಟ್ಟಿಗೆ ಹಿರಿಯರ ಕೊಡುಗೆ ಅಪಾರವಾಗಿದೆ. ತಾಲ್ಲೂಕಿನಲ್ಲಿ ನಡೆದ ಹೋರಾಟಗಳಲ್ಲಿ ಅವರ ಪಾತ್ರ ಎಂದಿಗೂ ಸ್ಮರಣಿಯ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದ ಲೈವ್ ವೀಕ್ಷಿಸಿ : https://www.youtube.com/live/TZlz_Dcln6E?si=RpgkA8txp2pmUg6D

ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ವಿಭಾಗಿಯ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ರಾಜ್ಯ ಪ್ರಧಾನ ಕಾರ್ಯದರ್ಶಿ ನೇತ್ರಾವತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ. ಮರಂಕಯ್ಯ ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...