ಪ್ರೇಮ ಪ್ರಕರಣ | ತುಮಕೂರಿನಿಂದ ನಾಪತ್ತೆಯಾಗಿದ್ದ ನಾಲ್ಕು ಮಕ್ಕಳು ಹಾಸನದಲ್ಲಿ ಪತ್ತೆ

Date:

ಒಂದೇ ಗ್ರಾಮದಿಂದ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳನ್ನು ಪತ್ತೆ ಹಚ್ಚುವಲ್ಲಿ ತುಮಕೂರು ಜಿಲ್ಲೆಯ ಪಟ್ಟನಾಯಕನಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಶಿರಾ ತಾಲೂಕಿನ ಚಿಕ್ಕಬಾಣಗೆರೆ ಗ್ರಾಮದಿಂದ ನಾಪತ್ತೆಯಾಗಿದ್ದ ಮಕ್ಕಳು ಹಾಸನದ ಕೆಎಸ್​ಆರ್​ಟಿಸಿ ಹೊಸ ಬಸ್​ ನಿಲ್ದಾಣದಲ್ಲಿ ಪತ್ತೆಯಾಗಿದ್ದಾರೆ. ಹಾಸನ ಪೊಲೀಸರ ಸಹಾಯದೊಂದಿಗೆ ಪಟ್ಟನಾಯಕನಹಳ್ಳಿ ಪೊಲೀಸರು ಮಕ್ಕಳನ್ನು ರಕ್ಷಿಸಿದ್ದು, ಪೋಷಕರ ಮಡಿಲಿಗೆ ಸೇರಿಸಿದ್ದಾರೆ.

ಚಿಕ್ಕಬಾಣಗೆರೆ ಗ್ರಾಮದ ನಾಲ್ವರು ಮಕ್ಕಳು ಕಣ್ಮರೆಯಾಗಿದ್ದು, ಗ್ರಾಮದಲ್ಲಿ ಆತಂಕ ಆವರಿಸಿತ್ತು. ಮಂಜುಳಾ, ಮಧು ಕುಮಾರ್, ಮಹಾಲಕ್ಷ್ಮಿ ಹಾಗೂ ಭಾನು ಶನಿವಾರ ಮಧ್ಯಾಹ್ನ ಆಟ ಆಡಲೆಂದು ಮನೆಯಿಂದ ಹೊರಗೆ ಹೋದವರು ನಾಪತ್ತೆಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಪತ್ತೆಯಾಗಿದ್ದವರಲ್ಲಿ ಮಂಜುಳಾ-ಮಧು ಕುಮಾರ್ ಅವಳಿ ಮಕ್ಕಳು. ನಾಪತ್ತೆಯಾಗಿದ್ದ ಎಲ್ಲ ಮಕ್ಕಳು 15ರಿಂದ 16 ವರ್ಷದ ವಯಸ್ಸಿನವರು. ಒಂದೇ ಗ್ರಾಮದ, ಒಂದೇ ವಯಸ್ಸಿನ ಅಂತರವಿದ್ದ ನಾಲ್ಕು ಮಕ್ಕಳು ನಾಪತ್ತೆಯಾಗಿದ್ದದ್ದು ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಎಷ್ಟೊತ್ತಾದರೂ ಮಕ್ಕಳು ಮನೆಗೆ ಬಾರದಿದ್ದುದನ್ನು ಕಂಡ ಪೋಷಕರು ಗಾಬರಿಗೊಂಡು, ಎಲ್ಲ ಕಡೆ ಹುಡುಕಾಡಿದ್ದರು.

ಊರೆಲ್ಲಾ ಹುಡುಕಿದರೂ ಮಕ್ಕಳು ಸಿಗದಿದ್ದಾಗ ಪೋಷಕರು ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಕೈಗೊಂಡಿದ್ದು, ಪಟ್ಟನಾಯಕಹಳ್ಳಿ ಡಿವೈಎಸ್​ಪಿ ನವೀನ್ ನೇತೃತ್ವದಲ್ಲಿ ನಾಲ್ಕು ತಂಡಗಳನ್ನಾಗಿ ರಚನೆ ಮಾಡಿ ಮಕ್ಕಳ ಶೋಧಕಾರ್ಯ ಆರಂಭಿಸಿದ್ದರು.

ತುಮಕೂರು, ಚಿಕ್ಕಮಗಳೂರು, ಬೆಂಗಳೂರು, ಹಾಸನ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹುಡುಕಾಟ ನಡೆಸಿದ್ದರೂ ಮಕ್ಕಳು ಪತ್ತೆಯಾಗಿರಲಿಲ್ಲ. ಇದೀಗ ಹಾಸನದ ಕೆಎಸ್​ಆರ್​ಟಿಸಿ ಹೊಸ ಬಸ್ ನಿಲ್ದಾಣದಲ್ಲಿ ನಾಲ್ವರು ಮಕ್ಕಳು ಪತ್ತೆಯಾಗಿದ್ದಾರೆ.

ಕಳೆದ ಎರಡು ವರ್ಷಗಳಿಂದ ಬಾಲಕಿಯೊಬ್ಬಳು ರಮೇಶ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ತಮ್ಮಿಬ್ಬರ ಪ್ರೀತಿಗೆ ಸಹಾಯ ಮಾಡಿದಕ್ಕೆ ಮೂವರು ಮಕ್ಕಳನ್ನು ಬಾಲಕಿ ತಮ್ಮ ಜತೆಯಲ್ಲೇ ಬೆಂಗಳೂರಿಗೆ ಕರೆದೊಯ್ದಿದ್ದಾಳೆ. ಬಳಿಕ ಬೆಂಗಳೂರಿನಿಂದ ಹಾಸನಕ್ಕೆ ತೆರಳಿದ್ದರು. ಇದೀಗ ಪೊಲೀಸರ ಸತತ ಪ್ರಯತ್ನದಿಂದ ನಾಲ್ವರು ಮಕ್ಕಳನ್ನು ಪತ್ತೆ ಮಾಡಿ ಪೊಲೀಸರು ನಿಟ್ಟುಸಿರು ಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...