ಮದ್ದೂರು | ನಮಗೆ ಮಠ ಕಟ್ಟಿಸಿಕೊಡಿ: ಮದುವೆಯಾಗಲು ಹೆಣ್ಣು ಸಿಗದ ಯುವಕರಿಂದ ಗ್ರಾ.ಪಂ.ಗೆ ಅರ್ಜಿ!

Date:

ಮದುವೆಯಾಗಲು ತಯಾರಿದ್ದರೂ ಹೆಣ್ಣು ಸಿಗದೆ ಹತಾಶೆಗೊಳಗಾದ ಯುವಕರು, ‘ನಮಗೆ ಗ್ರಾಮದಲ್ಲಿ ಮಠ ಕಟ್ಟಿಸಿಕೊಡಿ’ ಎಂದು ಬೇಡಿಕೆ ಇಟ್ಟಿರುವ ಪ್ರಸಂಗ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.

ಮದ್ದೂರು ತಾಲೂಕಿನ ಮರಳಿಗ ಗ್ರಾಮದ ಅವಿವಾಹಿತ ಯುವಕರು ತಮ್ಮ ಗ್ರಾಮ ಪಂಚಾಯತ್‌ಗೆ ಈ ವಿಚಿತ್ರ ಅರ್ಜಿ ಸಲ್ಲಿಸಿದ್ದು, ಗ್ರಾಮದ 30ರಿಂದ 40 ವರ್ಷ ವಯಸ್ಸಿನ ಯುವಕರು ಈ ಮನವಿಗೆ ಸಹಿ ಹಾಕಿದ್ದಾರೆ.

ಪ್ರಸನ್ನ ಎಂಬ ಯುವಕನ ನೇತೃತ್ವದಲ್ಲಿ ಪಂಚಾಯ್ತಿಗೆ ಅರ್ಜಿ ಬರೆದು ಸಲ್ಲಿಸಿದ್ದಾರೆ. ಅವಿವಾಹಿತ ಯುವಕರ ಈ ವಿಚಿತ್ರ ಅರ್ಜಿ ಕಂಡು ಒಂದು ಕ್ಷಣದ ಸದಸ್ಯರು ಹಾಗೂ ಅಧಿಕಾರಿ ಒಮ್ಮೆ ಶಾಕ್ ಆಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯುವಕರು ಸಲ್ಲಿಸಿರುವ ಮನವಿಯ ಬಗ್ಗೆ ತಮ್ಮ ಪ್ರತಿಕ್ರಿಯೆ ನೀಡಿರುವ ಮರಳಿಗ ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಸುನೀತಾ, “ಗ್ರಾಮದ 30ರಿಂದ 40 ವರ್ಷ ವಯಸ್ಸಿನ ಯುವಕರು ತಮಗೆ ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲ ಎಂದು ಉಲ್ಲೇಖಿಸಿದ್ದು, ಗ್ರಾಮದಲ್ಲಿ ಮಠ ನಿರ್ಮಿಸಿಕೊಡಿ ಎಂದು ಡಿಸೆಂಬರ್ 9ರಂದು ನಡೆದ ಗ್ರಾಮ ಸಭೆಗೆ ಅರ್ಜಿ ಸಲ್ಲಿಸಿದ್ದಾರೆ. ಯುವಕರು ನೀಡಿರುವ ಈ ಮನವಿಯನ್ನು ತಹಶೀಲ್ದಾರ್ ಗಮನಕ್ಕೆ ತರುತ್ತೇವೆ” ಎಂದು ತಿಳಿಸಿದರು.

ತಮ್ಮೂರಿನ ಗಂಡು ಮಕ್ಕಳ ಸ್ಥಿತಿಗೆ ಕಂಗಾಲಾಗಿರೋ ಯುವಕರ ಪೋಷಕರು, ರೈತ ಕುಟುಂಬದ ಗಂಡು ಮಕ್ಕಳಿಗೆ ಹೆಣ್ಣು ಕೊಡದ ಸ್ಥಿತಿಗೆ ಬಂದಿದ್ದಕ್ಕೆ ವಿಷಾದ ಸೂಚಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...