​ಮದ್ದೂರು | ಲೋಕಾಯುಕ್ತಕ್ಕೆ ನೀಡಿದ ದೂರಿನ ಫಲಶ್ರುತಿ; ಕಳಪೆ ರಸ್ತೆಗೆ ಮರುಜೀವ

Date:

ಮಂಡ್ಯ ಜಿಲ್ಲೆ, ಮದ್ದೂರು ತಾಲ್ಲೂಕಿನ ಮಾದನಾಯಕನಹಳ್ಳಿಯಿಂದ ಸಿದ್ದರಾಮೇಶ್ವರ ದೇವಸ್ಥಾನದ ಮೂಲಕ ತಾಲ್ಲೂಕು ಗಡಿ ಸಂಪರ್ಕಿಸುವ ರಸ್ತೆಯ ಕಳಪೆ ಕಾಮಗಾರಿಯ ವಿರುದ್ಧ ನಡೆದ ಕಾನೂನು ಹೋರಾಟಕ್ಕೆ ಮೊದಲ ಯಶಸ್ಸು ಸಿಕ್ಕಿದೆ. ದೂರಿನ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಪಂಚಾಯತ್ ರಾಜ್ ಇಂಜಿನಿಯರ್ ಮಂಡ್ಯ ವಿಭಾಗದ ಅಧಿಕಾರಿಗಳು ಸದರಿ ರಸ್ತೆಯ ಮರು ಡಾಂಬರೀಕರಣ (Resurfacing) ಕಾರ್ಯವನ್ನು ಪೂರ್ಣಗೊಳಿಸಿದ್ದಾರೆ.

​ಘಟನೆಯ ಹಿನ್ನೆಲೆ: ಚನ್ನಸಂದ್ರ ಗ್ರಾಮದ ನಿವಾಸಿ, ರಾಜ್ಯ ತೆಂಗು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಹಾಗೂ ಸಾಮಾಜಿಕ ಹೋರಾಟಗಾರ ಲಕ್ಷ್ಮಣ ಸಿ ಎಸ್ ಅವರು ಮಂಡ್ಯ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳ ವಿರುದ್ಧ ಕರ್ನಾಟಕ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. 2022-23ನೇ ಸಾಲಿನ ಪ್ಯಾಕೇಜ್ ಸಂಖ್ಯೆ ಎಂಡಿಆರ್: ನಂ:4ರ ಅಡಿಯಲ್ಲಿ ನಡೆದ ಮೂರು ರಸ್ತೆಗಳು ಹಾಗೂ ಇತರ ನಾಲ್ಕು ರಸ್ತೆ ಕಾಮಗಾರಿಗಳು ಕಾಮಗಾರಿಗಳು ಅತ್ಯಂತ ಕಳಪೆಯಾಗಿದ್ದು, ಸಾರ್ವಜನಿಕ ಹಣ ದುರುಪಯೋಗವಾಗಿದೆ ಎಂದು ಅವರು ಗಂಭೀರವಾಗಿ ಆಪಾದಿಸಿ ದೂರು ನೀಡಿದ್ದರು.

​ಮುಖ್ಯವಾಗಿ ಮದ್ದೂರು ತಾಲ್ಲೂಕಿನ ಮಾದನಾಯಕನಹಳ್ಳಿ-ಸಿದ್ದರಾಮೇಶ್ವರ ದೇವಸ್ಥಾನದ ರಸ್ತೆ, ಆರ್‌ ಹೆಚ್ ರಸ್ತೆಯಿಂದ ಅರೆಕಲ್ ದೊಡ್ಡ ಕ್ರಾಸ್, ಹಾಗೂ ತೊಪ್ಪನಹಳ್ಳಿ-ಚಂದಹಳ್ಳಿ ಕ್ರಾಸ್ ರಸ್ತೆಗಳು ನಿರ್ಮಾಣವಾದ ಕೆಲವೇ ದಿನಗಳಲ್ಲಿ ಕಿತ್ತು ಹೋಗಿದ್ದವು. ಸರಿ ಪ್ರಮಾಣದ ಜಲ್ಲಿ ಸಾಮಗ್ರಿಗಳು, ಬಿಟುಮಿನ್ ಅಂಶದ ಕೊರತೆ ಮತ್ತು ಸರಿಯಾದ ಯಂತ್ರೋಪಕರಣ ಬಳಸದ ಕಾರಣ ರಸ್ತೆಗಳು ಗುಂಡಿ ಬಿದ್ದಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಮದ್ದೂರು | ನಮಗೆ ಮಠ ಕಟ್ಟಿಸಿಕೊಡಿ: ಮದುವೆಯಾಗಲು ಹೆಣ್ಣು ಸಿಗದ ಯುವಕರಿಂದ ಗ್ರಾ.ಪಂ.ಗೆ ಅರ್ಜಿ!

​ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ: ಕಾರ್ಯಪಾಲಕ ಇಂಜಿನಿಯರ್ ಶಿವಚಂದ್, ಎಇಇ ಬಸವರಾಜು, ಎಇ ಮಹದೇವ ಮತ್ತು ಸೂರ್ಯಕಾಂತ್ ಅವರ ಮೇಲುಸ್ತುವಾರಿಯಲ್ಲಿ ನಡೆದಿದ್ದ ಈ ಕಾಮಗಾರಿಗಳ ಬಗ್ಗೆ ಲಕ್ಷ್ಮಣ ಅವರು ಫೋಟೋ ಮತ್ತು ವೀಡಿಯೋ ಸಾಕ್ಷ್ಯಗಳ ಸಮೇತ ಲೋಕಾಯುಕ್ತಕ್ಕೆ ಅಫಿಡವಿಟ್ ಸಲ್ಲಿಸಿದ್ದರು. ಎದುರುದಾರ ಅಧಿಕಾರಿಗಳು ತಮ್ಮ ಸಮರ್ಥನೆ ನೀಡಿದ್ದರೂ, ತಾಂತ್ರಿಕ ತಂಡದಿಂದ ಸ್ಥಳ ಪರಿಶೀಲನೆ ನಡೆಸುವಂತೆ ಲಕ್ಷ್ಮಣ ಅವರು ಪಟ್ಟು ಹಿಡಿದಿದ್ದರು.

​ಹೋರಾಟಕ್ಕೆ ಸಂದ ಜಯ: ಈ ಕಾನೂನು ಹೋರಾಟದ ತೀವ್ರತೆಯನ್ನು ಅರಿತ ಸಂಬಂಧಪಟ್ಟ ಇಲಾಖೆಯು, ದೂರಿನಲ್ಲಿ ಉಲ್ಲೇಖಿಸಲಾಗಿದ್ದ ಮೊದಲ ರಸ್ತೆಯಾದ ‘ಮಾದನಾಯಕನಹಳ್ಳಿ-ಸಿದ್ದರಾಮೇಶ್ವರ ದೇವಸ್ಥಾನದ ರಸ್ತೆ’ಯನ್ನು ಇದೀಗ ಮರು ಡಾಂಬರೀಕರಣ ಮಾಡುವ ಮೂಲಕ ದುರಸ್ತಿಪಡಿಸಿದೆ. ಇದು ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿದ ನಾಗರಿಕನ ಜಯವಾಗಿದ್ದು, ಉಳಿದ ಆರು ರಸ್ತೆಗಳ ಕಾಮಗಾರಿಗಳ ಬಗ್ಗೆಯೂ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮ ಜರುಗುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ಲಕ್ಷ್ಮಣ ಸಿ ಎಸ್ ತಿಳಿಸಿದ್ದಾರೆ.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...