ಮದ್ದೂರು | ಮಣ್ಣಿನ ಆರೋಗ್ಯ, ರೈತರ ಕಲ್ಯಾಣಕ್ಕೆ ಸರ್ಕಾರ ಗಮನಹರಿಸಲಿ: ಚಂದನ್‌ ಗೌಡ

Date:

ಮಣ್ಣಿನ ಆರೊಗ್ಯ ಹಾಗೂ ರೈತರ ಕಲ್ಯಾಣಕ್ಕಾಗಿ ಶ್ರಮಿಸಬೇಕಾದ ಸರ್ಕಾರ ರೈತರ ಹಿತ ಮತ್ತು ಮಣ್ಣಿನ ಆರೊಗ್ಯವನ್ನು ಕಡೆಗಣಿಸಿದೆ ಎಂದು ರೈತ ಕಲ್ಯಾಣ ಸಂಘದ ರಾಜ್ಯಾಧ್ಯಕ್ಷ ಚಂದನ್‌ ಗೌಡ ವಿಷಾದಿಸಿದರು.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೊಂಪುರ ಗ್ರಾಮದಲ್ಲಿ ಏರ್ಪಡಿಸಿದ್ದ ಮಣ್ಣು ಉಳಿಸಿ ಅಭಿಯಾನ ಮತ್ತು ಸಂಘದ ಉದ್ಘಾಟನೆ ನೆರವೆರಿಸಿ ಮಾತನಾಡಿದರು.

“ಬಹುರಾಷ್ಟ್ರೀಯ ಕಂಪನಿಗಳು ತಮ್ಮ ಲಾಭದ ದುರಾಸೆಯಿಂದಾಗಿ ಕೀಟನಾಶಕ, ಕಳೆನಾಶಕಗಳನ್ನು ಮಣ್ಣಿಗೆ ಸುರಿಯಲು ಅಧಿಕ ಇಳುವರಿಯ ನೆಪದಲ್ಲಿ ರೈತರನ್ನು ಪ್ರಚೋದಿಸುತ್ತಿವೆ. ಇಂತಹ ಸಮಯದಲ್ಲಿ ರೈತರ ಪರವಾಗಿ ಕಾರ್ಯನಿರ್ವಹಿಸಿ ರೈತರನ್ನು ಜಾಗೃತಗೊಳಿಸಬೇಕಾದ ಸರ್ಕಾರಗಳು ರೈತರ ಹಿತ ಮರೆತಿವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
IMG 20241201 WA0003

“ದಿನ ಕಳೆದಂತೆ ಜನಸಂಖ್ಯೆ ಹೆಚ್ಚಳವಾಗುತ್ತಿದೆ. ಆದರೆ ಭೂಮಿ ಹೆಚ್ಚಾಗಲು ಸಾಧ್ಯವಿಲ್ಲ. ಬದಲಾಗಿ ಫಲವತ್ತತೆಯ ಭೂಮಿಗಳು ದಿನೇ ದಿನೆ ನಿವೇಶನಗಳಾಗಿ ಪರಿವರ್ತನೆಯಾಗುತ್ತಿವೆ. ಪರಿಸ್ಥಿತಿ ಹೀಗೆಯೆ ಮುಂದುವರೆದರೆ ಆಹಾರ ಸಮಸ್ಯೆ ಉಲ್ಬಣಿಸುವ ಸಮಯ ಸಮೀಪಿಸುತ್ತದೆ” ಎಂದರು.

“ಸರ್ಕಾರಗಳು ರೈತರ ಕಲ್ಯಾಣ ಮರೆತು ಉದ್ಯಮಿಗಳ ಹಿತ ರಕ್ಷಿಸುತ್ತಿರುವ ಈ ಹೊತ್ತಿನಲ್ಲಿ ರೈತರು ವೈಯಕ್ತಿಕವಾಗಿ ತಮ್ಮ ಜಮೀನುಗಳಲ್ಲಿ ರಸಾಯನಿಕ ಬಳಕೆ ಮಾಡದಿರುವ ಸಂಕಲ್ಪದೊಂದಿಗೆ ಕಾರ್ಯನಿರ್ವಹಿಸಿ ತಮ್ಮ ಭೂಮಿಯ ಫಲವತ್ತತೆಯ ಹೆಚ್ಚಳ ಮಾಡಿ ಮುಂದಿನ ಪೀಳಿಗೆಗೆ ಆರೊಗ್ಯಕರ ಮಣ್ಣು ವರ್ಗಾಯಿಸಿ ಸುಸ್ಥಿರ ಕೃಷಿಗೆ ಶ್ರಮಿಸಬೇಕು. ಇದಕ್ಕೆ ಬೇಕಾದ ಮಾರ್ಗದರ್ಶನ ಮಾಡುವಲ್ಲಿ ಕಲ್ಯಾಣ ರೈತಸಂಘ ಜೊತೆಗಿರಲಿದೆ” ಎಂದು ಚಂದನ್‌ಗೌಡ ಭರವಸೆ ನೀಡಿದರು.

ಇದನ್ನು ಓದಿದ್ದೀರಾ? ಕೆಆರ್‌ಪೇಟೆ | ವಾಟ್ಸಾಪ್ ಯುನಿವರ್ಸಿಟಿ ತಿರುಚಿದ ಇತಿಹಾಸ ಹೇಳುತ್ತಿದೆ: ಪ್ರೊ ಎಸ್ ಜಿ ಸಿದ್ದರಾಮಯ್ಯ

ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಉಷಾಜಯಶೀಲ್ ಮಾತನಾಡಿ, ಮಣ್ಣಿನ ಆರೊಗ್ಯ ಹಾಗೂ ರೈತರ ಕಲ್ಯಾಣ ನಮ್ಮ ಸಂಘದ ಧ್ಯೇಯಾವಾಗಿದೆ. ಅದಕ್ಕಾಗಿ ರೈತರ ಸಂಘಟನೆ, ರೈತರ ಜಾಗೃತಿ ಮತ್ತು ಮಾಹಿತಿ ನೀಡುವುದು ನಮ್ಮ ಸಂಘದ ಕಾರ್ಯಸೂಚಿಯಾಗಿದ್ದು, ರಾಜ್ಯದ್ಯಾಂತ ರೈತರನ್ನು ಸಂಘಟಿಸಲಾಗುತ್ತಿದೆ. ಮಂಡ್ಯ ಜಿಲ್ಲೆಯಲ್ಲಿ ಸೊಂಪುರ ಗ್ರಾಮದಲ್ಲಿನ ಸಭೆ ಪ್ರಥಮವಾದುದ್ದಾಗಿದೆ” ಎಂದರು.

ನಗರಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹದೇವ್ ಮಾತನಾಡಿ, “ಮಣ್ಣಿನ ಸಂರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತ ರೈತ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ರೈತ ಕಲ್ಯಾಣ ಸಂಘಟನೆ ಮಾರ್ಗದರ್ಶನದಲ್ಲಿ ಮಣ್ಣಿನ ಸ್ವಾಸ್ಥ್ಯ ಕಾಯುವಲ್ಲಿ ಮುಂದಾಗೋಣ” ಎಂದರು.

ಮಂಡ್ಯ ಜಿಲ್ಲಾಧ್ಯಕ್ಷ ದೇವು ಸೇರಿದಂತೆ ಹಲವು ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...