ಮದ್ದೂರು | ಕುಲಾಂತರಿ ತಳಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ: ಎನ್ ಪಿ ಶಂಕರಯ್ಯ ಕರೆ

Date:

ಕುಲಾಂತರಿ ತಳಿ, ಬೀಜ ಮತ್ತು ಆಹಾರಗಳನ್ನು ತಿರಸ್ಕರಿಸುವ ನಿಟ್ಟಿನಲ್ಲಿ ದೊಡ್ಡಹೊಸೂರು ಸತ್ಯಾಗ್ರಹದಲ್ಲಿ ಭಾಗವಹಿಸಲು ಬಯಲುಸೀಮೆ ಬೆಳೆಗಾರರ ಸಂಘದ ಸಂಸ್ಥಾಪಕ‌ ಅಧ್ಯಕ್ಷ ಎನ್ ಪಿ ಶಂಕರಯ್ಯ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕುಲಾಂತರಿ ಆಹಾರಗಳು ದೇಶ ಪ್ರವೇಶಿಸುವುದನ್ನ ತಿರಸ್ಕರಿಸುವ ಸತ್ಯಾಗ್ರಹದಲ್ಲಿ ಎಲ್ಲ ವಿಚಾರವಂತರು, ಪ್ರಗತಿಪರರು, ರೈತರು, ವಿದ್ಯಾರ್ಥಿಗಳು, ಸಂಘ ಸಂಸ್ಥೆಯವರು ಭಾಗವಹಿಸಿ, ಕುಲಾಂತರಿ ಆಹಾರ ತಿರಸ್ಕರಿಸಬೇಕು. ಆ ಮೂಲಕ ಸುಸ್ಥಿರ, ಸಮರ್ಥನೀಯವಾದ ಹಾಗೂ ಹವಾಮಾನ ವೈಪರೀತ್ಯಗಳಿಗೆ ಹೊಂದಿಕೊಳ್ಳುವ ಗುಣವುಳ್ಳ ಸಹಜ ಬೇಸಾಯ, ಸಾವಯವ ಕೃಷಿ ಪದ್ದತಿಗಳ ಮೂಲಕ ನಮ್ಮ ಭವಿಷ್ಯದ ಮರು ಹುಟ್ಟು ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.

ತುಮಕೂರಿನ ಹೊನ್ನುಡುಕೆ ಹ್ಯಾಂಡ್ ಪೊಸ್ಟ್ ಬಳಿ ಇರುವ ಗಾಂಧಿ ಸಹಜ ಬೇಸಾಯ ಆಶ್ರಮ ದೊಡ್ಡಹೊಸೂರು ಗ್ರಾಮದಲ್ಲಿ ವಿಚಾರ ಸಂಕಿರಣ ಸೆಪ್ಟೆಂಬರ್ 29ರಿಂದ ಆಕ್ಟೊಬರ್ 2ರವರೆಗೆ ನಾಲ್ಕು ದಿನಗಳ ಕಾಲ ನಡೆಯಲಿದೆ. ಈ ವಿಚಾರ ಸಂಕಿರಣದಲ್ಲಿ ಮಾನವನ ಆರೋಗ್ಯ ಮತ್ತು ಪರಿಸರದ ಮೇಲೆ ಜಿಎಮ್ ಆಹಾರಗಳ ಪ್ರತಿಕೂಲ ಪರಿಣಾಮಗಳ ಕುರಿತು ಮತ್ತು ಪಂಚಾಯಿತಿ ಮಟ್ಟದಲ್ಲಿ ನೈಸರ್ಗಿಕ ಕೃಷಿಯನ್ನು ಮುಂದುವರೆಸುವ ಕಾರ್ಯತಂತ್ರಗಳ ಕುರಿತು ಗೋಷ್ಠಿಗಳು ನಡೆಯಲಿದ್ದು, ರಾಜ್ಯಾದ್ಯಂತ ಕುಲಾಂತರಿ ತಳಿ ವಿರೋಧಿಸಲು ಪ್ರಗತಿಪರರು ಸುಸ್ಥಿರ ಕೃಷಿ ಬಯಸುವವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಯಾದಗಿರಿ | ವಸತಿ ನಿಲಯದ ಮೇಲ್ವಿಚಾರಕನನ್ನು ಅಮಾನತುಗೊಳಿಸಲು ಆಗ್ರಹಿಸಿ ಪ್ರತಿಭಟನೆ

ಮದ್ದೂರು ತಾಲೂಕಿನಿಂದಲೂ ಸೆಪ್ಟಂಬರ್ 29ರಂದು ಭಾನುವಾರ ಬಯಲುಸೀಮೆ ಬೆಳೆಗಾರರ ಸಂಘದ ನೇತೃತ್ವದಲ್ಲಿ ದೊಡ್ಡ ಹೊಸೂರು ಸತ್ಯಾಗ್ರಹದಲ್ಲಿ ಭಾಗವಹಿಸುತ್ತಿದ್ದೇವೆ ಎಂದಿರುವ ಎನ್ ಪಿ ಶಂಕರಯ್ಯ, ಮಂಡ್ಯ ಜಿಲ್ಲೆಯಾದ್ಯಂತ ರೈತರು, ಪ್ರಗತಿಪರರು ಭಾಗವಹಿಸಲು ಮನವಿ ಮಾಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...