ಮದ್ದೂರು | ರಾಜಕಾರಣವನ್ನು ಕಸುಬು ಮಾಡಿಕೊಳ್ಳುವ ನಡೆ ಸರಿಯಲ್ಲ: ಕಾಂಗ್ರೆಸ್ ಮುಖಂಡ ಆಶಯ್ ಮಧು

Date:

ವ್ಯಕ್ತಿಗಳು ಸಮಾಜ ಸುಧಾರಣೆ ಮಾಡಲು ಬರುತ್ತಿದಂತಹ ಕಾಲ ಹೋಗಿದೆ. ರಾಜಕಾರಣವನ್ನು ಕಸುಬು ಮಾಡಿಕೊಡಿರುವವರು ಹೆಚ್ಚಾಗುತ್ತಿದ್ದಾರೆ. ಈ ನಡೆ ಸರಿಯಲ್ಲ ಎಂದು ಕಾಂಗ್ರೆಸ್ ಯುವ ಮುಖಂಡ ಆಶಯ್ ಮಧು ಮಾದೇಗೌಡ ಹೇಳಿದರು.

ಮದ್ದೂರು ತಾಲ್ಲೂಕಿನ ಭಾರತೀನಗರ ಸಮೀಪದ ಗುರುದೇವರಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಭಾರತೀ ಎಜುಕೇಷನ್‌ ಟ್ರಸ್ಟ್, ಶ್ರೀಮತಿ ಪದ್ಮಜಿಮಾದೇಗೌಡ ನರ್ಸಿಂಗ್ ಕಾಲೇಜು, ಬಿಇಟಿ ಹೆಲ್ತ್ ಸೈನ್ಸ್ ಅಂಗಸಂಸ್ಥೆಗಳು, ಆಶಯ್ ಮಧು ಅಭಿಮಾನಿಗಳ ಬಳಗ, ವರ್ಧಮಾನ್ ಜೈನ್ ನೇತ್ರಾಲಯ ಇವರ ಸಂಯುಕ್ತಾಶ್ರಯದಲ್ಲಿ 5 ದಿನಗಳ ಕಾಲ ಬೃಹತ್ ಉಚಿತ ಆರೋಗ್ಯ ತಪಾಸಣೆ, ಉಚಿತ ಕಣ್ಣಿನ ಪೊರೆ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ತಾತ ದಿ.ಜಿ.ಮಾದೇಗೌಡರು ಜನರ ಸೇವೆ ಮಾಡಲು ರಾಜಕೀಯಕ್ಕೆ ಬಂದರು. ಅವರ ಹಾದಿಯಲ್ಲಿ ನಮ್ಮ ಕುಟುಂಬದ ಎಲ್ಲರು ನಡೆಯುತ್ತಿದ್ದೇವೆ. ರಾಜಕಾರಣಿ ಆಗುವುದಕ್ಕೆ ಸಮಾಜದ ಸುಧಾರಣೆಯ ಸೋಗಿನಲ್ಲಿ ರಾಜಕೀಯಕ್ಕೆ ಬರುತ್ತಿರುವ ಕಾಲ ಇದಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಮದ್ದೂರು 2

ಚುನಾವಣೆಗೂ ಒಂದೆರಡು ವರ್ಷಗಳ ಮುಂಚಿತವಾಗಿ ಜನರಿಗೆ ಉಡುಗೊರೆಗಳನ್ನು ಕೊಟ್ಟು ಕಾರ್ಯಕ್ರಮಗಳನ್ನು ಮಾಡಿ ದಿಕ್ಕು ತಪ್ಪಿಸುತ್ತಿರುವ ಬೆಳವಣಿಗೆಗಳು ಇಂದು ಹೆಚ್ಚಾಗಿವೆ. ಇಂತಹ ರಾಜಕಾರಣಿಗಳಿಂದ ಯಾವುದೇ ಏಳಿಗೆ ಕಾಣಲು ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ನಮ್ಮ ಹುಟ್ಟೂರು ಗುರುದೇವರಹಳ್ಳಿಯಲ್ಲಿ ನಮ್ಮ ತಾತ ಜಿ.ಮಾದೇಗೌಡರು ಮೂರುವರೆ ಎಕರೆ ಜಮೀನನ್ನು ಕೊಂಡು ಸುತ್ತಮುತ್ತಲಿನ ಹಳ್ಳಿಗಳ ಜನರ ಆರೋಗ್ಯವನ್ನು ಸುಧಾರಿಸುವ ಸಲುವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಕಟ್ಟಲು ಜಮೀನನ್ನು ಬಿಟ್ಟುಕೊಟ್ಟು ಸೇವೆ ಸಲ್ಲಿಸಿದ್ದಾರೆ. ಮಂಡ್ಯದ ಬಂದೀಗೌಡ ಬಡಾವಣೆಯಲ್ಲಿ ಮನೆ ಹೊರತು ಪಡಿಸಿ ಸ್ವಂತಕ್ಕೆ ಇನ್ಯಾವುದೇ ಆಸ್ತಿ ಮಾಡಿದವರಲ್ಲ ಎಂದರು.

ಭಾರತೀ ಎಜುಕೇಷನ್‌ ಟ್ರಸ್ಟ್ ಕಾರ್ಯದರ್ಶಿ ಬಿ.ಎಂ.ನಂಜೇಗೌಡ ಮಾತನಾಡಿ, ಜಿ.ಮಾದೇಗೌಡರು ಹಾಕಿಕೊಟ್ಟ ದಾರಿಯಲ್ಲೇ ನಡೆಯುತ್ತಿರುವ ಆಶಯ್ ಮಧು ಅವರಿಗೆ ರಾಜಕೀಯ ಬಲ ನೀಡಿ ಬೆಂಬಲಿಸಬೇಕಾಗಿದೆ. ಜನರ ಉದ್ದೇಶಗಳು ನೆರವೇರಬೇಕಾದರೆ ದೂರದೃಷ್ಟಿ ಇರಬೇಕು. ಇದು ಇಲ್ಲದಿರುವವರು ಹೆಚ್ಚಾಗಿರುವುದರಿಂದ ಜನರ ಸೇವೆಯ ಹೆಸರಿನಲ್ಲಿ ಮೋಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಧಾನ ಪರಿಷತ್ ಸದಸ್ಯ ಮಧು ಜಿ ಮಾದೇಗೌಡ ಮಾತನಾಡಿ, ಇಂತಹ ಆರೋಗ್ಯ ತಪಾಸಣಾ ಶಿಬಿರಗಳನ್ನು ಪ್ರತೀ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ನಡೆಸಲು ಆಶಯ್‌ ಅಭಿಮಾನಿಗಳ ಬಳಗ ಯೋಜನೆ ರೂಪಿಸಿದೆ ಎಂದರು.

ಇದನ್ನು ಓದಿದ್ದೀರಾ? ದಕ್ಷಿಣ ಕನ್ನಡ | ಕಾಲೇಜು ಯುವತಿಗೆ ಚೂರಿ ಇರಿತ; ಯುವಕ ಪೊಲೀಸ್ ವಶಕ್ಕೆ

ವೇದಕೆಯಲ್ಲಿ ಟಿಎಚ್‌ಓ ಬಿ.ರವೀಂದ್ರ, ಬಿಇಟಿ ಹೆಲ್ತ್ ಸೈನ್ಸ್ ನಿರ್ದೇಶಕ ಟಿ.ತಮಿಳ್ ಕಣಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಮಲಮ್ಮ, ಜಿ.ಮಾದೇಗೌಡ ಆಸ್ಪತ್ರೆಯ ಆಡಳಿತಾಧಿಕಾರಿ ಪಿ.ಎಸ್.ಗಣೇಶ್ ಪ್ರಭು, ವರ್ಧಮಾನ್ ಜೈನ್ ನೇತ್ರಾಲಯ ವೈದ್ಯಾಧಿಕಾರಿ ಜೆ.ಆಶಾರಾಣಿ, ಪಿಡಿಓ ಎಚ್.ಪಿ.ಶಿವಮಾದಯ್ಯ, ಪದ್ಮ ಜಿ.ಮಾದೇಗೌಡ ನರ್ಸರಿ ಕಾಲೇಜಿನ ಪ್ರೊ.ಮಹೇಶ್ ಕುಮಾರ್, ತಾ.ಪಂ ಮಾಜಿ ಸದಸ್ಯ ಭರತೇಶ್, ಮುಖಂಡರಾದ ಅಣ್ಣೂರು ಸಿದ್ದಪ್ಪ, ಕಾರ್ಕಹಳ್ಳಿ ಸ್ವರೂಪ್ ಚಂದ್ರು, ಗುರುದೇವರಹಳ್ಳಿ ಪುಟ್ಟಸ್ವಾಮಿ, ಚಿಕ್ಕರಸಿನಕೆರೆ ಶಿವಲಿಂಗಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...