ಮಧುಗಿರಿ | ದಲಿತ ಯುವಕನಿಗೆ ದೇವಾಲಯ ಪ್ರವೇಶ ನಿರಾಕರಣೆ; ವಿಡಿಯೋ ವೈರಲ್

Date:

ದೇವಾಲಯ ಪ್ರವೇಶಸಿದ್ದಕ್ಕೆ ಪರಿಶಿಷ್ಟ ಜಾತಿಯ ಯುವಕನೊಬ್ಬನನ್ನು ದೇವಾಲಯದಿಂದ ಹೊರ ಹಾಕಿರುವ ಘಟನೆ ತುಮಕೂರಿನ ಮಧುಗಿರಿ ತಾಲೂಕು ದೊಡ್ಡೇರಿ ಹೋಬಳಿ ಕವಣದಾಲ ಗ್ರಾಮದಲ್ಲಿ ನಡೆದಿದೆ.

ಶನಿವಾರ ಸಂಜೆ ಯುವಕ ಸ್ವಾಮಿನಾಥ್ ಪೂಜೆ ಮಾಡಿಸಲೆಂದು ಗ್ರಾಮದಲ್ಲಿರುವ ರಾಮಾಂಜನೇಯ ದೇವಾಲಯಕ್ಕೆ ಹೋಗಿದ್ದರು. ಈ ವೇಳೆ ಸ್ಥಳದಲ್ಲಿದ್ದ ಒಕ್ಕಲಿಗ ಸಮುದಾಯದವರು ಯುವಕನನ್ನು ಈ ಬಗ್ಗೆ ಪ್ರಶ್ನಿಸಿದ್ದಾರೆ. ಅನಾದಿ ಕಾಲದಿಂದ ನಿಮ್ಮ ಜಾತಿಯವರು (ಪರಿಶಿಷ್ಟ ಜಾತಿಯವರು) ದೇಗುಲದ ಒಳಗೆ ಬಂದಿಲ್ಲ. ಈಗಲೂ ಬರುವುದು ಬೇಡ. ನೀನ್ಯಾಕೆ ಬಂದೆ? ಎಂದು ಹೊರ ನಡೆಯಲು ತಾಕೀತು ಮಾಡಿದ್ದಾರೆ.

ಈ ಕುರಿತು ಯುವಕ ಮತ್ತು ಸ್ಥಳೀಯರ ನಡುವೆ ಮಾತಿನ ಚಕಮಕಿ ನಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಊರಿನ ಜನರೆಲ್ಲ ಒಳಗಡೆ ಕುಳಿತಿರುವಾಗ ನಾನೇಕೆ ಹೊರಗಡೆ ನಿಲ್ಲಬೇಕು. ಒಳಗಡೆ ಹೋಗಿದ್ದು ತಪ್ಪು ಹೇಗಾಗುತ್ತದೆ? ನೀವು ಒಳಗೆ ಹೋಗುವುದಾದರೇ ನಾನೇಕೆ ಹೋಗಬಾರದು? ಸಂವಿಧಾನಕ್ಕೆ ಗೌರವ ಇಲ್ಲವೆ?” ಎಂದು ಯುವಕ ಪ್ರಶ್ನಿಸಿರುವುದು ವಿಡಿಯೋದಲ್ಲಿ ಸೇರೆಯಾಗಿದೆ.

ಆಗ ಸ್ಥಳೀಯರು ನಿಮ್ಮವರು (ಪರಿಶಿಷ್ಟ ಜಾತಿ) ಯಾರು ಒಳಗೆ ಬಂದಿಲ್ಲ. ಒಬ್ಬರಿಗೆ ಹೇಳಿದರೆ ಉಳಿದವರು ಅರ್ಥ ಮಾಡಿಕೊಳ್ಳಬೇಕು. ನೀನು ಒಳಗಡೆ ಹೋಗಬೇಡ ಎಂದು ಆಗ್ರಹಿಸಿದ್ದಾರೆ. ಇದರಿಂದ ಕೆಲ ವೇಳೆ ದೇವಾಲಯದ ಬಳಿ ಗೊಂದಲದ ವಾತಾವರಣ ಸೃಷ್ಟಿಯಾಗಿದೆ.

ಇದನ್ನೂ ಓದಿ: ರಾಸಲೀಲೆ ಪ್ರಕರಣ | ಮಧುಗಿರಿ ಡಿವೈಎಸ್​ಪಿ ರಾಮಚಂದ್ರಪ್ಪಗೆ 14 ನ್ಯಾಯಾಂಗ ಬಂಧನ

ಘಟನೆ ಸಂಬಂಧ ಯುವಕ ಭಾನುವಾರ ಬಡವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ನಂತರ ಗ್ರಾಮಸ್ಥರ ಒತ್ತಾಯದ ಮೇರೆಗೆ ದೂರು ವಾಪಸ್ ಪಡೆದಿದ್ದಾರೆ. ಈ ಬೆಳೆವಣಿಗೆ ನಂತರ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ. ಗೋಪಲ್ ಡಿವೖಎಸ್‌ಪಿ ಮಂಜುನಾಥ್, ತಹಶೀಲ್ದಾರ್ ಶಿರೀನ್ ತಾಜ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ದಿನೇಶ್ ಅವರು ಸ್ಥಳಕ್ಕೆ ಭೇಟಿನೀಡಿ ಶಾಂತಿಸಭೆ ನಡೆಸಿದರು. ಶಾಂತಿಸಭೆಯಲ್ಲಿ ಸಂತ್ರಸ್ತ ಯುವಕ, ಒಕ್ಕಲಿಗ ಸಮುದಾಯದವರು ಹಾಗೂ ಗ್ರಾಮಸ್ಥರು ಇದ್ದರು.

ಮುಂದಿನ ದಿನಗಳಲ್ಲಿ ದೇವಸ್ಥಾನ ಪ್ರಶೇಶಿಸಲು ಯಾರಿಗೂ ಅಡ್ಡಿಪಡಿಸಬಾರದು ಎಂದು ಅಧಿಕಾರಿಗಳು ಸೂಚನೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...