ಮುಂಗಾರು ವಿಫಲವಾಗಿದ್ದು ಕೃಷಿ ಭೂಮಿಯಲ್ಲಿ ಬಿತ್ತನೆಯಾಗದೆ ರೈತರು ಉದ್ಯೋಗ ಆರಿಸಿ ನಗರಕ್ಕೆ ವಲಸೆ ಹೋಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಧುಗಿರಿ ತಾಲೂಕನ್ನು ಶಾಶ್ವತ ಬರಗಾಲ ಪೀಡಿತ ಪ್ರದೇಶ ಎಂದು ಘೋಷಿಸುವಂತೆ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಂಕರಪ್ಪ ಒತ್ತಾಯಿಸಿದರು
ಮಧುಗಿರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಹೇಮಾವತಿ ನೀರಿನ ಯೋಜನೆ ಅಡಿಯಲ್ಲಿ ಕನಿಷ್ಠ ಮೂರು ಟಿಎಂಸಿ ನೀರು ಹಂಚಿಕೆ ಮಾಡಿ ಕೊಡಬೇಕು.ಬೆಸ್ಕಾಂ ವತಿಯಿಂದ ಕಾನೂನು ಬಾಹಿರವಾಗಿ ಹೆಚ್ಚಿನ ಮೊತ್ತ ನಿಗದಿಪಡಿಸಿ ವಸೂಲಿ ಮಾಡುತ್ತಿದ್ದು ಅದನ್ನು ನಿಲ್ಲಿಸಿ ಹೆಚ್ಚುವರಿ ಬಿಲ್ ಹಣ ವಾಪಸ್ ನೀಡಬೇಕು.ಎತ್ತಿನಹೊಳೆ ಯೋಜನೆ ಅಡಿಯಲ್ಲಿ ಎರಡು ಟಿಎಂಸಿ ನೀರು ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿದರು
ರೈತ ಸಂಘದ ವತಿಯಿಂದ ತಾಲೂಕಿನಲ್ಲಿ ಸದಸ್ಯತ್ವ ಅಭಿಯಾನ ನಡೆಸಲಾಗುತ್ತಿದೆ ಸದಸ್ಯರಾದವರಿಗೆ ಅಧ್ಯಯನ ಶಿಬಿರ ಹಮ್ಮಿಕೊಳ್ಳಲಾಗುವುದು ಎಂದರು
ರೈತ ಸಂಘದ ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ಮಾತನಾಡಿ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಮಳೆಯ ಬಾವದಿಂದ ಹೆಚ್ಚು ಬಿತ್ತನೆ ಆಗಿಲ್ಲ ಆದ್ದರಿಂದ ಬರಗಾಲ ಕಾಮಗಾರಿ ಕೈಗೊಳ್ಳಬೇಕು ಮತ್ತು ಹೆಕ್ಟೇರ್ ಗೆ 20,000 ಪರಿಹಾರ ನೀಡಬೇಕು ಲಿಂಕ್ ಕೆನಾಲ್ ದೊಡ್ಡ ಪ್ರಮಾಣದಲ್ಲಿ ಕುಡಿಯುವ ನೀರಿನ ಯೋಜನೆ ಅಪಾಯವಿದೆ ಎಂದರು
ಇದೇ ಸಂದರ್ಭದಲ್ಲಿ ಮೃತರಾದ ರೈತರದ ಹನುಮಂತರಾಯಪ್ಪ ತಿರುಪತಪ್ಪ ರವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.
ರೈತ ಸಂಘದ ಸಂಘಟನಾ ಕಾರ್ಯದರ್ಶಿ ದೊಡ್ಡಮಾಳಯ್ಯತಾಲೂಕು ಅಧ್ಯಕ್ಷ ರಾಜಶೇಖರ್ ಜಿಲ್ಲಾ ಮಹಿಳಾ ಅಧ್ಯಕ್ಷೆ ನಾಗರತ್ನಮ್ಮ ಕಾರ್ಯದರ್ಶಿ ನಾಗರಾಜು ಹಾಜರಿದ್ದರು.





