ಬಾಗೇಪಲ್ಲಿ:- ತುಳಿತಕ್ಕೊಳಗಾಗಿರುವ ಮಾದಿಗ ಸಮುದಾಯವನ್ನು ಸಂಘಟಿಸಿ, ಶಿಕ್ಷಣ ಜಾಗೃತಿ ಮೂಡಿಸಿ ಅವರು ಸಮಾಜದ ಮುಖ್ಯವಾಹಿನಿಯಲ್ಲಿ ಸ್ವಾಭಿಮಾನದಿಂದ ಬಾಳುವಂತೆ ಅರಿವು ಮೂಡಿಸುವ ಉದ್ದೇಶದಿಂದ ಹಳ್ಳಿ ಹಳ್ಳಿಗಳಿಗೂ ಹೋಗಿ ಸಮಾಜ ಬಾಂಧವರಿಗೆ ಮಾರ್ಗದರ್ಶನ ಮಾಡುವ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಕರ್ನಾಟಕ ಮಾದರ ಮಹಾಸಭಾದ ಜಿಲ್ಲಾಧ್ಯಕ್ಷ ಕೃಷ್ಣಪ್ಪ ಹೇಳಿದರು.
ಅವರು ಪಟ್ಟಣದ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ತಾಲ್ಲೂಕು ಮಾದರ ಮಹಾಸಭಾ ಪದಾಧಿಕಾರಿಗಳು ನೂತನ ಪಟ್ಟಿ ಬಿಡುಗಡೆ ಮಾಡಿ ಮಾತನಾಡಿ ತಾಲ್ಲೂಕು ಸಮಿತಿಯ ಪದಾಧಿಕಾರಿಗಳು ಎಲ್ಲ ಊರುಗಳಲ್ಲೂ ಪ್ರವಾಸ ಮಾಡಿ ಮಾಹಾಸಭಾದ ಆಶಯಗಳನ್ನು ತಿಳಿಸಿ ಸದಸ್ಯತ್ವ ಅಭಿಯಾನ ನಡೆಸಿ ಸಂಘಟಿಸಬೇಕು ಸಮುದಾಯದ ಸಮಸ್ಯೆಗಳಿಗೆ ಸ್ಪಂದಿಸಿ ಅವರಲ್ಲಿ ಶಿಕ್ಷಣದ ಅರಿವು ಮೂಡಿಸಿ ಇದು ಮಾಹಾಸಭಾದ ಆಶಯವಾಗಿದೆ ಎಂದರು.
ನೂತನ ಕರ್ನಾಟಕ ಮಾದರ ಮಹಾಸಭಾ ಅದ್ಯಕ್ಷ ಅ.ನಾ.ಮೂರ್ತಿ ಮಾತಮಾಡಿ ಇಡೀ ರಾಜ್ಯದಲ್ಲಿ ಹೋರಾಟದಲ್ಲಿ ಮುಂಚೂಣಿಯಲ್ಲಿರುವುದು ಮಾದಿಗ ಸಮುದಾಯ ಆ ನಿಟ್ಟಿನಲ್ಲಿ ಮಾದಿಗ ಸಮುದಾಯವನ್ನು ವ್ಯವಸ್ಥಿತವಾಗಿ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಮುಂಚೂಣಿಗೆ ತರುವ ನಿಟ್ಟಿನಲ್ಲಿ ನಮ್ಮ ಸಮುದಾಯದ ರಾಜ್ಯ ನಾಯಕರಾದ ಕೆ. ಎಚ್. ಮುನಿಯಪ್ಪ, ನಾರಾಯಣಸ್ವಾಮಿ ಆಂಜನೇಯ ಗೋವಿಂದ ಕಾರಜೋಳ ಸೇರಿದಂತೆ ಸಮುದಾಯದ ಎಲ್ಲ ಮುಖಂಡರು ಪಕ್ಷಾತೀತವಾಗಿ ಒಗ್ಗಟ್ಟಿನಿಂದ ಸೇರಿ ಕರ್ನಾಟಕ ಮಾದರ ಮಹಾಸಭಾವನ್ನು ಕಟ್ಟಿ ಬೆಳೆಸಿದ್ದಾರೆ ಅವರ ಮಾರ್ಗದರ್ಶನದಲ್ಲಿ ಸಮುದಾಯವನ್ನು ಕಟ್ಟುವ ಕೆಲಸಕ್ಕೆ ಮಾಡುತ್ತೇನೆ ಸಮುದಾಯದ ಬಂಧುಗಳು ಒಕ್ಕೊರಲಿನಿಂದ ಸದಸ್ಯತ್ವ ತೆಗೆದುಕೊಳ್ಳುವ ಮೂಲಕ ಸಂಘವನ್ನು ಸದೃಢವನ್ನಾಗಿ ಮಾಡೋಣ ಎಂದು ಹೇಳಿದರು.
ಇದನ್ನು ಓದಿದ್ದೀರಾ..? ಅಪಘಾತ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪೊಲೀಸ್ ವಾಹನ
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಎ.ವಿ. ಪೂಜಪ್ಪ,ಕಿರಣ್ ಕುಮಾರ್,ಬುಲೆಟ್ ಬಾಬು,ಚಿನ್ನಪೂಜಪ್ಪ, ಜೀವಿಕವ ನಾರಾಯಣ ಸ್ವಾಮಿ, ಎಲ್.ಎನ್.ನರಸಿಂಹಯ್ಯ,ನಾಗರಾಜು,ನಂದೀಶ ಹಾಗೂ ಕರ್ನಾಟಕ ಮಾದರ ಮಹಾಸಭಾ ಜಿಲ್ಲಾ ಹಾಗೂ ತಾಲ್ಲೂಕು ಪದಾಧಿಕಾರಿಗಳು ಹಾಜರಿದ್ದರು




