ಭಾರತೀಯ ವಿದ್ಯಾಭವನ ಮತ್ತು ಬೆಂಗಳೂರಿನ ವಿ. ಕೃ ಗೋಕಾಕ್ ವಾಜ್ಙಯ ಟ್ರಸ್ಟ್ ಬೆಂಗಳೂರು ಸಹಯೋಗದೊಂದಿಗೆ 2025ರ ವಿ.ಕೃ. ಗೋಕಾಕ್ ಪ್ರಶಸ್ತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಬಾಲ ಸಾಹಿತ್ಯ ಪುರಸ್ಕೃತ ಮಕ್ಕಳ ಸಾಹಿತಿ ಆನಂದ ಪಾಟೀಲ ಅವರನ್ನು ಆಯ್ಕೆ ಮಾಡಿದೆ.
ವಿ. ಕೃ. ಗೋಕಾಕ್ ಟ್ರಸ್ಟ್ ಅಧ್ಯಕ್ಷ ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ, ಅನಿಲ್ ಗೋಕಾಕ್, ಸುನೀಲ್ ಗೋಕಾಕ್, ಪ್ರೊ. ನಾಗರಾಜ ಹೆಗಡೆ ಅಪಗಾಲ, ನಿಶಾ ಗೋಕಾಕ್, ಅಭಿನವ ರವಿಕುಮಾರ್ ಹಾಗೂ ಭಾರತೀಯ ವಿದ್ಯಾಭವನದ ನಿರ್ದೇಶಕ ಎಚ್. ಎನ್. ಸುರೇಶ್ ಅವರುಗಳಿದ್ದ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ವಿ.ಕೃ. ಗೋಕಾಕ್ ಪ್ರಶಸ್ತಿಯು 25,000 ನಗದು ಮತ್ತು ಫಲಕವನ್ನು ಒಳಗೊಂಡಿದೆ. ಸೆಪ್ಟೆಂಬರ್ 7ರಂದು ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಭಾರತೀಯ ವಿದ್ಯಾಭವನದ ಕೆಆರ್ ಸಭಾಂಗಣದಲ್ಲಿ ಬೆಳಗ್ಗೆ 10.30ಕ್ಕೆ ರಾಯಚೂರಿನ ಮಹರ್ಷಿ ಆದಿಕವಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಕುಲಪತಿಗ ಪ್ರೊ. ಶಿವಾನಂದ ಕೆಳಗಿನಮನಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ ಪ್ರಾಸ್ತಾವಿಕ ನುಡಿ, ಅಂಕೋಲದ ಕವಯಿತ್ರಿ ಶ್ರೀದೇವಿ ಕೆರೆಮನೆ ಅವರಿಂದ ಅಭಿನಂದನಾ ನುಡಿ, ಭಾರತೀಯ ವಿದ್ಯಾಭವನದ ಅಧ್ಯಕ್ಷರೂ ಆಗಿರುವ ಹಿರಿಯ ನ್ಯಾಯವಾದಿ ಕೆ ಜಿ ರಾಘವನ್ ಮುಖ್ಯ ಅತಿಥಿಗಳಾಗಿ ಭಾವಹಿಸಲಿದ್ದಾರೆ. ಟ್ರಸ್ಟಿನ ಗೌರವಾಧ್ಯಕ್ಷ ಉನಿಲ್ ಗೋಕಾಕ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಈ ಕುರಿತು ಭಾರತೀಯ ವಿದ್ಯಾಭವನದ ನಿರ್ದೇಶಕ ಎಚ್ ಎನ್ ಸುರೇಶ್ ಹಾಗೂ ಕಾರ್ಯದರ್ಶಿ ನ. ರವಿಕುಮಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಈ ದಿನ ಸಂಪಾದಕೀಯ | ಸದನದ ಘನತೆಯನ್ನು ಮಣ್ಣುಪಾಲು ಮಾಡಿದ ಮಹನೀಯರು





