ʼವ್ಯಸನ ಮುಕ್ತ ಸಮಾಜಕ್ಕಾಗಿ ದುಶ್ಚಟಗಳ ಭಿಕ್ಷೆ ಬೇಡಿದ ಮಹಾಂತ ಶಿವಯೋಗಿʼ

Date:

ಮಠಗಳ ಸ್ವಾಮೀಜಿಗಳು ತಮ್ಮ ಜೋಳಿಗೆಯಲ್ಲಿ ಭಕ್ತರ ಮನೆಗಳಿಗೆ ಭೇಟಿ ನೀಡಿ ಸಂಗ್ರಹಿಸಿ ದೊರೆತ ಧವಸ ಧಾನ್ಯಗಳಿಂದ ಮಠಗಳಲ್ಲಿ ಓದುವ ಬಡ ಮಕ್ಕಳಿಗೆ ಪ್ರಸಾದ ನೀಡುವ ಕಾರ್ಯ ಸಾಮಾನ್ಯ. ಆದರೆ, ಇದಕ್ಕೆ ವಿರುದ್ದವಾಗಿ ಸಮಾಜ ಹಾಗೂ ದೇಶವನ್ನು ಹಾಳು ಮಾಡುವ ದುರ್ವ್ಯಸನಗಳು, ದುಶ್ಚಟಗಳು ಹಾಗೂ ದುರಾಚಾರಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಮನಪರಿವರ್ತಿಸಿ, ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಡಾ. ಮಹಾಂತ ಶಿವಯೋಗಿಗಳು.

ಬಾಗಲಕೋಟೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ 1930ರ ಆಗಸ್ಟ್1ರಂದು ಜನಿಸಿದ ಮಹಾಂತ ಶಿವಯೋಗಿಗಳು ತಮ್ಮ 10ನೇ ವಯಸ್ಸಿಗೆ ಸವದಿಯ ವಿರಕ್ತಮಠದ ಕಿರಿಯ ಸ್ವಾಮೀಜಿಗಳಾದರು. ಕಾಶಿಯಲ್ಲಿ ಸಂಸ್ಕೃತ, ಹಿಂದಿ, ಯೋಗ, ಶಾಸ್ತ್ರೀಯ ಸಂಗೀತದಲ್ಲಿ ವಿಶೇಷ ಪರಿಣಿತಿ ಸಾಧಿಸಿದರು. ಉತ್ತರ ಕರ್ನಾಟಕದಲ್ಲಿ ಭೀಕರ ಬರಗಾಲ ಬಂದ ಕಾರಣ ಕಾಶಿಯಿಂದ ಆಗಮಿಸಿ, ಗ್ರಾಮಗಳ ಜಮೀನುದಾರರು, ಶ್ರೀಮಂತರನ್ನು ವಿನಂತಿಸಿ, ಧವಸ ಧಾನ್ಯ ಸಂಗ್ರಹಿಸಿ, ಗ್ರಾಮಗಳಲ್ಲಿ ಗಂಜಿ ಕೇಂದ್ರ ಆರಂಭಿಸಿದರು. ದಾಸೋಹ ಮಾಡಿದ್ದು ಮಾತ್ರವಲ್ಲದೇ ಜಾನುವಾರುಗಳಿಗಾಗಿ ಪಶುಶಾಲೆ, ಗೋಶಾಲೆಗಳನ್ನು ಆರಂಭಿಸಿ ಮೇವು ಮತ್ತು ನೀರಿನ ವ್ಯವಸ್ಥೆ ಮಾಡಿದರು.

1970ರಲ್ಲಿ ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನ ಮಠದ 19ನೇ ಪೀಠಾಧಿಕಾರಿಯಾಗಿ ನೇಮಕಗೊಂಡ ನಂತರ 2018ರ ವರೆಗೆ 48 ವರ್ಷಗಳ ಕಾಲ ಅವರ ಸಾಧನೆ ಅಪಾರವಾದುದು. ಇದರಲ್ಲಿ ಸ್ವಾಮೀಜಿಯವರು ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ 1975ರಿಂದ ಕೈಗೊಂಡ ಮಹಾಂತ ಜೋಳಿಗೆ ಕಾರ್ಯಕ್ರಮ ಅತ್ಯಂತ ವಿಶಿಷ್ಠವಾದದ್ದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕುಡಿತದ ಚಟದಿಂದ ಪರಿಶಿಷ್ಟ ಜಾತಿಯ ಯುವಕನೊಬ್ಬ ನಿಧನ ಹೊಂದಿದ ಸುದ್ದಿ ಕೇಳಿ ಅವನ ಕೇರಿಗೆ ಸಾಂತ್ವನ ಹೇಳಲು ತೆರಳಿದ್ದ ಸ್ವಾಮಿಗಳಿಗೆ ಆತನ ಪತ್ನಿ ಮತ್ತು ಮಕ್ಕಳು ಉಪವಾಸದಿಂದ ದು:ಖಿಸುವುದನ್ನು ಕಂಡರು. ಇಂತಹ ಸಾವಿರಾರು ಕುಟುಂಬಗಳು ಕುಡಿತ ಮತ್ತು ಇತರೆ ದುಶ್ಚಟಗಳಿಂದ ಹಾಳಾಗಿರುವುದನ್ನು ಅರಿತು, ಇಂತಹ ದುಶ್ಚಟಗಳಿಗೆ ಒಳಗಾಗಿರುವವನ್ನು ಇದರಿಂದ ಮುಕ್ತಿಗೊಳಿಸುವ ಉದ್ದೇಶದಿಂದ ಮಹಾಂತ ಜೋಳಿಗೆ ಆಂದೋಲನ ಆರಂಭಿಸಿದರು. ಮಹಾಂತ ಎಂದರೆ ಧರ್ಮಾಧಿಕಾರಿ, ಧರ್ಮದ ಗುರು ಅಥವಾ ಸ್ವಾಮೀಜಿ, ಜೋಳಿಗೆ ಎಂದರೆ ಬಟ್ಟೆಯ ಚೀಲ.

ಜಾತಿ-ಮತ-ಪಂಗಡ-ಧರ್ಮ-ಭಾಷೆೆ-ದೇಶವೆನ್ನದೆ 42 ವರ್ಷಗಳ ಕಾಲ ಭಾರತ ದೇಶದಲ್ಲಿ ಮಾತ್ರವಲ್ಲದೇ ಇಂಗ್ಲೆಂಡ್ ಸೇರಿದಂತೆ ವಿದೇಶದಲ್ಲೂ ತಮ್ಮ ಮಹಾಂತ ಜೋಳಿಗೆ ಹಿಡಿದು ಜನರಲ್ಲಿನ ದುಶ್ಟಟಗಳ ಭಿಕ್ಷೆ ಬೇಡಿದ ಮಹಾಂತ ಶಿವಯೋಗಿಗಳು ವ್ಯಸನ ಮುಕ್ತ ವ್ಯಕ್ತಿ-ಕುಟುಂಬ-ಸಮಾಜ- ಗ್ರಾಮಗಳ ನಿರ್ಮಾಣ ಮಾಡಿದರು. ತಮ್ಮ ಜೋಳಿಗೆ ಕಾರ್ಯಕ್ರಮದಲ್ಲಿ ನಾಡಿನ ಪ್ರಖ್ಯಾತ ವೈದ್ಯರು, ಸಮಾಜ ವಿಜ್ಞಾನಿಗಳು, ಸಾಹಿತಿಗಳು, ಸಮಾಜ ಕಳಕಳಿಯ ಕವಿಗಳು, ಧರ್ಮ ಗುರುಗಳನ್ನು ಆಹ್ವಾನಿಸಿ ಅವರಿಂದ ಉಪನ್ಯಾಸಗಳನ್ನು ಮಾಡಿಸುವ ಮೂಲಕ ಚಟಗಳಿಗೆ ವ್ಯಸನಗಳಿಗೆ ದಾಸರಾದವರನ್ನು ಪರಿವರ್ತನೆ ಮಾಡಿದರು. ಮಕ್ಕಳು, ವಿದ್ಯಾರ್ಥಿಗಳು, ಯುವ ಜನಾಂಗ ಇಂತಹ ಚಟಗಳಿಗೆ ಬಲಿಯಾಗದಂತೆ ಎಚ್ಚರ ಮೂಡಿಸಿದ ಪರಿಣಾಮ, ಲಕ್ಷಾಂತರ ಜನ ವ್ಯಸನಗಳಿಂದ ಮುಕ್ತರಾಗಿ ಅವರ ಕುಟುಂಬಗಳು ಇಂದು ನೆಮ್ಮದಿಯ ಜೀವನ ಸಾಗಿಸುತ್ತಿವೆ.

ಇದನ್ನೂ ಓದಿ: ಬಾಗಲಕೋಟೆ | ಎಸ್ಐಟಿ ತನಿಖೆಗೆ ಸಂಪೂರ್ಣ ಅಧಿಕಾರ ನೀಡುವಂತೆ ಒತ್ತಾಯಿಸಿ ಕರವೇ ಪ್ರತಿಭಟನೆ

ಮಹಾಂತ ಜೋಳಿಗೆಯ ಶಿವಶಿಲ್ಪಿ, ವ್ಯಸನ ಮುಕ್ತ ಆಂದೋಲನದ ಹರಿಕಾರರು ಆಗಿದ್ದ ಡಾ.ಮಹಾಂತ ಶಿವಯೋಗಿ ಅವರ ಜನ್ಮದಿನವಾದ ಆಗಸ್ಟ್ 1 ನ್ನು, ರಾಜ್ಯ ಸರ್ಕಾರವು ರಾಜ್ಯಾದ್ಯಂತ ವ್ಯಸನ ಮುಕ್ತ ದಿನವನ್ನಾಗಿ ಆಚರಿಸಲು ನಿರ್ಧರಿಸಿ ಆದೇಶಿಸಿದ್ದು, ಕರ್ನಾಟಕ ರಾಜ್ಯವನ್ನು ವ್ಯಸನ ಮುಕ್ತ ರಾಜ್ಯವಾಗಿ ಮಾಡಲು ಹಾಗೂ ಸಾರ್ವಜನಿಕರು ಹಾಗೂ ಯುವಜನತೆ ವ್ಯಸನಗಳಿಂದ ಮುಕ್ತವಾಗಲು ಈ ದಿನಾಚರಣೆಯು ಪ್ರೇರಣೆಯಾಗಲಿದೆ.

987638ca8c89079659d0147ec8165bb4e02be67aff4a7af8f502ae66e86a5a1e?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...