ಕೊಡಗು | ವೈದ್ಯಕೀಯ ಶಿಕ್ಷಣಕ್ಕೆ ಸೇರುವಾಗಲೇ ಬಡಜನರ ಸೇವೆ ಮಾಡುವ ಸಂಕಲ್ಪ ಮಾಡಿ : ಶಾಸಕ ಎ ಎಸ್ ಪೊನ್ನಣ್ಣ

Date:

ಮಡಿಕೇರಿಯಲ್ಲಿ ಕೊಡಗು ವೈದ್ಯಕೀಯ ಕಾಲೇಜು ಆಸ್ಪತ್ರೆಯ ಹತ್ತನೇ ವರ್ಷದ ವಾರ್ಷಿಕೋತ್ಸವ ‘ ಅವೆನ್ಸಿಸ್ 2025 ‘ ಬೃಹತ್ ಆರೋಗ್ಯ ಜಾಗೃತಿ ಪ್ರದರ್ಶನ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಶಾಸಕ ಎ ಎಸ್ ಪೊನ್ನಣ್ಣ ಮಾತನಾಡಿ ‘ ವೈದ್ಯಕೀಯ ಶಿಕ್ಷಣಕ್ಕೆ ಸೇರುವಾಗಲೇ ಬಡಜನರ ಸೇವೆ ಮಾಡುವ ಸಂಕಲ್ಪ ಮಾಡುವಂತೆ ‘ ಸಲಹೆ ನೀಡಿದರು.

” ವೈದ್ಯಕೀಯ ವೃತ್ತಿ ಅತ್ಯಂತ ಮಹತ್ವದ್ದಾಗಿದ್ದು ಜನಸೇವೆ ಮಾಡಲು ಸೂಕ್ತವಾಗಿದೆ. ಗ್ರಾಮೀಣ ಭಾಗದಲ್ಲಿ ಒಂದಷ್ಟು ವರ್ಷ ಕಡ್ಡಾಯವಾಗಿ ಬಡಜನರಿಗೆ ಸೇವೆ ನೀಡುವ ಮೌಲ್ಯವನ್ನು ಬೆಳೆಸಿಕೊಳ್ಳಿ. ವೈದ್ಯರಾಗಿ ಜನರ ಸೇವೆ ಮಾಡುವುದು ನಿಜವಾದ ಸಾರ್ಥಕತೆಯ ಕೆಲಸ. ಅಂತಹ ನಿಟ್ಟಿನಲ್ಲಿ ಈಗಲಿಂದಲೇ ಸನ್ನದ್ದರಾಗಿ. ಸಹಜವಾಗಿ ವೈದ್ಯ ವೃತ್ತಿಗೆ ಬರುವವರು ಪಟ್ಟಣ್ಣ, ನಗರಗಳಲ್ಲಿ ಇರಲು ಇಚ್ಚಿಸುತ್ತ ಹಳ್ಳಿಗಳ ಕಡೆಗೆ ಮುಖ ಮಾಡುತ್ತಿಲ್ಲ. ಒಂದು ವೇಳೆ ಗ್ರಾಮೀಣ ಪ್ರದೇಶದ ಕಡೆಗೆ ಬಂದರು ಇರಲು ಇಚ್ಚಿಸುವುದಿಲ್ಲ “.

” ನಗರ, ಪಟ್ಟಣಗಳಿಗಿಂತ ಹೆಚ್ಚಾಗಿ, ತುರ್ತಾಗಿ ವೈದ್ಯರ ನೆರವಿನ ಅಗತ್ಯತೆ ಇರುವುದು ಬಡಜನರಿಗೆ, ಗ್ರಾಮೀಣ ಭಾಗದ ಬಡವರಿಗೆ. ಇದನ್ನೆಲ್ಲಾ ಈಗಿಂದಲೇ ವಿದ್ಯಾರ್ಥಿಗಳು ಮನನ ಮಾಡಿಕೊಂಡು ಉತ್ತಮ ಸೇವೆ ನೀಡುವ ಕಡೆಗೆ ಲಕ್ಷ್ಯ ವಹಿಸಬೇಕು. ಈಗಲೂ ಸಹ ಗ್ರಾಮೀಣ ಭಾಗದ ಸರ್ಕಾರಿ ಪ್ರಾಥಮಿಕ, ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆಯಿದೆ, ಇಂತಹ ಪರಿಸ್ಥಿತಿ ತೊಡೆದು ಹಾಕುವಲ್ಲಿ ನಿಮ್ಮೆಲ್ಲರ ಪಾತ್ರ ದೊಡ್ಡದಿದೆ ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೊಡಗು | ನಾಲ್ವರ ಹತ್ಯೆ ಪ್ರಕರಣ; ಕೇರಳದಲ್ಲಿ ಆರೋಪಿ ಬಂಧನ

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಲೋಕೇಶ್ ಕುಮಾರ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ಪ್ರಾಂಶುಪಾಲ ಡಾ ವಿಶಾಲ್,ಅಡಳಿತ ವಿಭಾಗದ ಮುಖ್ಯಸ್ಥ ಡಾ ಸೋಮಶೇಖರ್,ಡಾ ಕಾಮತ್,ಡಾ ಮಂಜುನಾಥ್,ಡಾ ಪುರುಷೋತ್ತಮ್, ವಿಧ್ಯಾರ್ಥಿಗಳಾದ ಪೂರ್ಣ ಚಂದ್ರ,ಮನೋಜ್ ಶೇಖರ್,ಮಿಥುನ್ ಆರ್,ಪವನ್ ವಶಿಷ್ಠ,ನೇಹಾ,ಪುನೀತ್,ಕಾವ್ಯ ಗುಪ್ತಾ, ಸೂರ್ಯ ವೈ,ಅನುದೀಪ್, ಶಶಾಂಕ್ ವೈ, ನಾಝಿಯಾ ತಸ್ವೀನ್,ಮನು,ಪ್ರಜ್ನಾ,ಜಹರಾ,ಲಿಖಿತ ಬಿ ಟಿ ಐಶ್ವರ್ಯ ರಾಜ್,ಭವಾನಿ ರೆಡ್ಡಿ,ತೃಪ್ತಿ, ಚಂದನಶ್ರೀ ಸೇರಿದಂತೆ ಅಧಿಕಾರಿಗಳು ಸಿಬ್ಬಂದಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...