ಯಾದಗಿರಿ | ಮತದಾನದಿಂದ ವಂಚಿತರಾಗದಂತೆ ಕೂಲಿ ಕಾರ್ಮಿಕರಿಗೂ ವ್ಯವಸ್ಥೆ ಮಾಡಿ

Date:

  • ಭರದಿಂದ ಸಾಗಿದ ಠಾಣಾಗುಂದಿ ಗೇಟ್ ಕೆಳ ಸೇತುವೆ ಕಾಮಗಾರಿ
  • ಸ್ಥಳಕ್ಕೆ ಭೇಟಿ ನೀಡಿ ಮತದಾನ ಜಾಗೃತಿ ಮೂಡಿಸಿದ ಉಮೇಶ ಮುದ್ನಾಳ

ಅವೈಜ್ಞಾನಿಕ ರೈಲ್ವೆ ಕೆಳ ಸೇತುವೆಯಿಂದಾಗಿ ಯಾದಗಿರಿ-ಮುದ್ನಾಳ ಮಾರ್ಗವಾಗಿ ಸಂಚರಿಸಲು ಉಂಟಾಗಿದ್ದ ಸಮಸ್ಯೆ ಸರಿಪಡಿಸಬೇಕೆಂದು ಹೋರಾಟ ನಡೆಸಿದ್ದರ ಹಿನ್ನೆಲೆ 22 ಲಕ್ಷ ರೂ. ಅನುದಾಣ ಮಂಜೂರು ಮಾಡಿದ್ದು, ಕಾಮಗಾರಿ ಪ್ರಗತಿಯಲ್ಲಿದೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ ಮುದ್ನಾಳ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಯಾದಗಿರಿಯಿಂದ ಮುದ್ನಾಳ ಮಾರ್ಗವಾಗಿ ತೆರಳುವ ರಸ್ತೆಯ ಮಧ್ಯೆ (ಎಲ್‌ ಸಿ 230 ಹಳೆ ಠಾಣಾಗುಂದಿ ಗೇಟ್) ಠಾಣಾಗುಂದಿ ಬಳಿಯ ಚೌಕಿ ತಾಂಡಾದ ರೈಲ್ವೆ ಹಳಿಗಳ ಕೆಳಗೆ ನಿರ್ಮಿಸಲಾದ ಸೇತುವೆ ತೀರ ಅವೈಜ್ಞಾನಿಕವಾಗಿತ್ತು ಎಂದು ಹೋರಾಟ ನಡೆಸಿದ್ದರ ಫಲವಾಗಿ ಇಂದು ಅಧಿಕಾರಿಗಳು ಸ್ಪಂದಿಸಿದ್ದಾರೆ. ಇದು ನಮ್ಮ ಹೋರಾಟಕ್ಕೆ ಸಂದ ಜಯ” ಎಂದಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಗುಂತಕಲ್ ವಿಭಾಗೀಯ ನಿಯಂತ್ರಣಾಧಿಕಾರಿ ಡಿ ಎನ್ ಕೃಷ್ಣಪ್ಪ ಮತ್ತು ರಾಯಚೂರು ಕಚೇರಿಯ ಸಹಾಯಕ ವಿಭಾಗಿಯ ಎಂಜಿನಿಯರ್ (ಎಡಿಎನ್) ಸೈಯದ್ ಮಹಮ್ಮದ್‌ದುಲ್ಲಾ, 22 ಲಕ್ಷ ರೂ. ವೆಚ್ಚದ ಕಾಮಗಾರಿ ಮಾಡಿಕೊಡುವುದಾಗಿ ಭರವಸೆ ನೀಡಿದ್ದರು. ಅಲ್ಲದೇ ಕಳಪೆ ಕಾಮಗಾರಿ ಆಗಬಾರದು, ಗುಣಮಟ್ಟದಿಂದ ಮಾಡುವಂತೆ ಸಂಬಂಧಿಸಿದವರಿಗೆ ಸೂಚಿಸಿದರು ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಯಾದಗಿರಿ

ಮತದಾನ ಕುರಿತು ಜಾಗೃತಿ

ಇದೇ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಕಾರ್ಮಿಕರಿಗೆ ಮತದಾನದ ಕುರಿತು ಜಾಗೃತಿ ಮೂಡಿಸಿದ ಉಮೇಶ, ಪ್ರತಿಯೊಬ್ಬರು ಮತದಾನ ಮಾಡಬೇಕು. ಕೆಲಸ ನಡೆದಿರುವ ಹಿನ್ನೆಲೆ ಮತದಾನ ಬಿಡಬಾರದು ಎಂದು ಸಲಹೆ ನೀಡಿದರು.

ಬೇಸಿಗೆ ಇರುವುದರಿಂದ ಕೃಷಿ ಕಾಯಕ ಇರುವುದಿಲ್ಲ, ಮಕ್ಕಳಿಗೆ ಶಾಲೆ ಇರುವುದಿಲ್ಲ ಹೀಗಾಗಿ ಈ ಭಾಗದ ಕೃಷಿಕರು ಮಹಾನಗರಗಳಿಗೆ ಗುಳೆ ಹೋಗಿರುತ್ತಾರೆ. ಅವರನ್ನು ಚುನಾವಣೆಗೆ ಕರೆಸಲು ರಾಜಕಾರಣಿಗಳು ಹಣ ಕೊಡುವ ವ್ಯವಸ್ಥೆ ಮಾಡುತ್ತಿದ್ದಾರೆ ಎಂದರು.

ಈ ಸುದ್ದಿ ಓದಿದ್ದೀರಾ? ಬೇಲೂರು | ಮೋದಿ ಭಾಷಣ ಏನಿದ್ದರೂ ಕೇಂದ್ರಕ್ಕೆ ಸೀಮಿತ: ಶಾಸಕ ಲಿಂಗೇಶ್

ಆದ್ದರಿಂದ ಚುನಾವಣಾ ಆಯೋಗ ಮತದಾರರನ್ನು ಕರೆ ತರಲು ಹೆಚ್ಚುವರಿ ರೈಲುಗಳ ವ್ಯವಸ್ಥೆ ಮಾಡಬೇಕು, ಇಲ್ಲವೇ ಕೂಲಿ ಕಾರ್ಮಿಕರು ಇರುವ ಸ್ಥಳದಲ್ಲಿಯೇ ಡಿಜಿಟಲ್ ಮತದಾನ ವ್ಯವಸ್ಥೆ ಮಾಡಿ ಅವರು ಮತದಾನದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಸಂಘದ ಪದಾಧಿಕಾರಿಗಳು ಮತ್ತು ಕಾರ್ಮಿಕರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...