ಮಳವಳ್ಳಿ | ತಳಗವಾದಿ ಗ್ರಾಮಕ್ಕೆ ಮೂಲಸೌಕರ್ಯ ಮರೀಚಿಕೆ: ಜನಪ್ರತಿನಿಧಿಗಳ ನಿರ್ಲಕ್ಷ್ಯ

Date:

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತಳಗವಾದಿ ಗ್ರಾಮ, ತಾಲೂಕು ಕೇಂದ್ರದಿಂದ ಕೇವಲ 6 ಕಿಮೀ ಮತ್ತು ರಾಜ್ಯ ಹೆದ್ದಾರಿಯಿಂದ 1.5 ಕಿಮೀ ದೂರದಲ್ಲಿದ್ದರೂ, ರಸ್ತೆಗಳ ದುರವಸ್ಥೆ ಹೇಳತೀರದು. 6,000ಕ್ಕಿಂತಲೂ ಅಧಿಕ ಜನಸಂಖ್ಯೆಯ ಪೈಕಿ 4,000ಕ್ಕೂ ಅಧಿಕ ಮತದಾರರು, ಪದವಿ ಪೂರ್ವ ಕಾಲೇಜು, ಶಾಲೆ, ಬ್ಯಾಂಕ್ ಮತ್ತು ಗ್ರಾಮ ಪಂಚಾಯಿತಿ ಕೇಂದ್ರವಿರುವ ಈ ಗ್ರಾಮದ ಸಂಪರ್ಕ ರಸ್ತೆಗಳು ಕೆಸರು ಗದ್ದೆಯಂತಿವೆ. ವಾಹನ ಸವಾರರು, ಎತ್ತಿನಗಾಡಿಗಳು ಮತ್ತು ರೈತರು ರಸ್ತೆ ಗುಂಡಿಗಳಿಂದ ತೊಡಕು ಅನುಭವಿಸುತ್ತಿದ್ದಾರೆ.

ಮಾಜಿ ಶಾಸಕ ಡಾ. ಕೆ ಅನ್ನದಾನಿ ಕಾಲಾವಧಿಯಲ್ಲಿ ರಸ್ತೆಗಳಿಗೆ ಯಾವುದೇ ಅಭಿವೃದ್ಧಿ ಕಾಣದಿರುವುದರಿಂದ ಗ್ರಾಮಸ್ಥರು 2023ರ ಚುನಾವಣೆಯಲ್ಲಿ ಹಾಲಿ ಶಾಸಕ ಪಿ. ನರೇಂದ್ರಸ್ವಾಮಿಯವರಿಗೆ 600 ಮತಗಳ ಲೀಡ್ ನೀಡಿ ಗೆಲ್ಲಿಸಿದರು. ಆದರೆ, ಎರಡು ವರ್ಷಗಳಾದರೂ ರಸ್ತೆಗಳ ಸ್ಥಿತಿಯಲ್ಲಿ ಸುಧಾರಣೆಯಾಗಿಲ್ಲ. ಕಾಗೇಪುರ-ತಳಗವಾದಿ-ದೇವಿಪುರ ರಸ್ತೆಗೆ ಗುದ್ದಲಿ ಪೂಜೆ ನಡೆದರೂ ಕಾಮಗಾರಿ ಆರಂಭವಾಗಿಲ್ಲ. ಮಳೆಗಾಲದಲ್ಲಿ ಕೆಸರು, ಬೇಸಿಗೆಯಲ್ಲಿ ಧೂಳಿನಿಂದ ಗ್ರಾಮಸ್ಥರಿಗೆ ಕರಾಳತೆ ಎದುರಾಗಿದೆ.

ತಳಗವಾದಿ

“ಹೊಸ ರೋಡು, ಕಾಗೇಪುರ, ದುಗ್ಗನಹಳ್ಳಿ, ಮಾದಹಳ್ಳಿ ಮತ್ತು ದೇವಿಪುರ ಮಾರ್ಗದ ರಸ್ತೆಗಳೆಲ್ಲವೂ ಶೋಚನೀಯ ಸ್ಥಿತಿಯಲ್ಲಿವೆ. ಧೂಳಿನಿಂದ ಬೆಳೆಗಳಿಗೆ ಹಾನಿಯಾಗುತ್ತಿದ್ದು, ರೇಷ್ಮೆ ಬೆಳೆಗಾರರು ಕಣ್ಣೀರಿನ ಜತೆಗೆ ಹಣಕಾಸು ನಷ್ಟವನ್ನು ಅನುಭವಿಸುತ್ತಿದ್ದಾರೆ. ಜನಪ್ರತಿನಿಧಿಗಳ ರಾಜಕೀಯ ದೊಂಬರಾಟ ಮತ್ತು ನಿರ್ಲಕ್ಷ್ಯದಿಂದ ಏಳಿಗೆ ಕುಂಠಿತವಾಗಿದೆ” ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೋಲಾರ | ಗುದ್ದಲಿ ಪೂಜೆಯಾಗಿ ವರ್ಷ ಕಳೆದರೂ ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ: ಸ್ಥಳೀಯರ ಆಕ್ರೋಶ

“ಗ್ರಾಮಸ್ಥರು ಜನಪ್ರತಿನಿಧಿಗಳನ್ನು ತಮ್ಮ ಸೇವಕರಾಗಿ ಆಯ್ಕೆ ಮಾಡಿಕೊಂಡಿರುವುದು, ರಾಜ-ಮಹಾರಾಜರಂತೆ ವರ್ತಿಸಲು ಅಲ್ಲ ಎಂಬುದ ಪ್ರಶ್ನಿಸುವ ಧೈರ್ಯ ತೋರಬೇಕಿದೆ. ರಾಜಕೀಯ ವೈಮನಸ್ಸಿಗೆ ಗ್ರಾಮದ ಏಳಿಗೆಯನ್ನು ಬಲಿಕೊಡದಂತೆ ಜನಪ್ರತಿನಿಧಿಗಳಿಗೆ” ಜನರ ಒತ್ತಾಯವಿದೆ.

ತಳಗವಾದಿ 2
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...