ಉಡುಪಿ | ಮಳೆಗಾಲದ ಅವಧಿಯಲ್ಲಿ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

Date:

ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ರಾಜ್ಯ ಸರಕಾರದ ಅಧಿಸೂಚನೆಯಂತೆ ಜಿಲ್ಲೆಯಲ್ಲಿ ಯಾವುದೇ ಬಲೆಗಳನ್ನು/ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು 2025 ರ ಜೂನ್ 1 ರಿಂದ ಜುಲೈ 31 ರ ವರೆಗೆ ಒಟ್ಟು 61 ದಿನಗಳ ಕಾಲ ನಿಷೇಧಿಸಿದ್ದು, ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ/ ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ ಹಾಗೂ ಹವಾಮಾನದ ವೈರ‍್ಯತೆಯ ಮುನ್ಸೂಚನೆ ನೀಡಿದಲ್ಲಿ ಎಲ್ಲಾ ಮೀನುಗಾರರು ಕಡ್ಡಾಯವಾಗಿ ಪಾಲಿಸಬೇಕು.

ಮೀನುಗಾರಿಕೆ ನಿಷೇಧ ಹಿನ್ನೆಲೆ, ಕಡ್ಡಾಯವಾಗಿ ಎಲ್ಲಾ ಬೋಟುಗಳು ಮೇ 31 ರ ಒಳಗಾಗಿ ಬಂದರು ಪ್ರವೇಶ ಮಾಡಬೇಕು. ತದನಂತರ ಬಂದರು ಪ್ರವೇಶ ಮಾಡುವ ದೋಣಿಗಳ ಮೇಲೆ ಕಾನೂನು ಕ್ರಮಕೈಗೊಳ್ಳಲಾಗುವುದು.

ಮೀನುಗಾರಿಕೆ ನಿಷೇಧಿಸಿದ ಸರಕಾರಿ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ 1986 ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ, ಒಂದು ವರ್ಷದ ಅವಧಿಗೆ ಡೆಲಿವರಿ ಪಾಯಿಂಟ್‌ನಲ್ಲಿ ರಾಜ್ಯ ಮಾರಾಟಕರ ರಹಿತ ಡೀಸೆಲ್ ಪಡೆಯಲು ಅನರ್ಹರಾಗುತ್ತಾರೆ. ಈ ಆದೇಶವನ್ನು ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರು ಪಾಲಿಸುವಂತೆ ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...