ಕರ್ನಾಟಕದ ಕರಾವಳಿ ಪ್ರದೇಶವು ಒಟ್ಟು 328.54 ಕಿಲೋಮೀಟರ್ ವಿಸ್ತಾರ ಹೊಂದಿದ್ದು, ಅದರಲ್ಲಿ ಉಡುಪಿ ಜಿಲ್ಲೆ ಮಾತ್ರವೇ 98 ಕಿಲೋಮೀಟರ್ ಕರಾವಳಿ ತೀರವನ್ನು ವ್ಯಾಪಿಸಿಕೊಂಡಿದೆ. ಈ ಕರಾವಳಿ ಪ್ರದೇಶ ರಾಜ್ಯದ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಅದರ ಹೃದಯವೆಂದರೆ ಮಲ್ಪೆ ಮೀನುಗಾರಿಕೆ ಬಂದರು.

ಉಡುಪಿ ತಾಲ್ಲೂಕಿನ ಮಲ್ಪೆಯಲ್ಲಿ, ಉದ್ಯಾವರ ನದಿಯಿಂದ ರೂಪುಗೊಂಡ ಅರಬ್ಬೀ ಸಮುದ್ರದ ತೀರದಲ್ಲಿರುವ ಮಲ್ಪೆ ಬಂದರು, ಉಡುಪಿಯಿಂದ ಕೇವಲ 5 ಕಿಲೋಮೀಟರ್ ದೂರದಲ್ಲಿದೆ. 1976ರಲ್ಲಿ ಬಂದರಿನ ನಿರ್ಮಾಣ ಕಾರ್ಯ ಪ್ರಾರಂಭವಾಗಿ 1986ರಲ್ಲಿ ಪೂರ್ಣಗೊಂಡಿತು. ಪ್ರಾರಂಭಿಕ ಹಂತದಲ್ಲಿ 279 ಮೀನುಗಾರಿಕೆ ದೋಣಿಗಳಿಗೆ ನಿಲುಗಡೆ ವ್ಯವಸ್ಥೆ ಕಲ್ಪಿಸಲಾಯಿತು. 1996ರಲ್ಲಿ ಎರಡನೇ ಹಂತದ ವಿಸ್ತರಣೆ ಪೂರ್ಣಗೊಂಡ ನಂತರ ಬಂದರಿನ ವ್ಯಾಪಾರ ಚಟುವಟಿಕೆಗಳು ವೇಗ ಪಡೆದವು. ಇಂದಿಗೆ ಮಲ್ಪೆ ಬಂದರು ಉಡುಪಿ ಜಿಲ್ಲೆಯಲ್ಲಿನ ಅತಿದೊಡ್ಡ ಮೀನುಗಾರಿಕೆ ಕೇಂದ್ರವಾಗಿದ್ದು, ವರ್ಷಪೂರ್ತಿ ಮೀನುಗಾರಿಕೆ ವಹಿವಾಟು ನಡೆಯುವ ಸರ್ವ ಋತು ಬಂದರಾಗಿ ಖ್ಯಾತಿ ಗಳಿಸಿದೆ.

ಮಲ್ಪೆ ಮೀನುಗಾರಿಕೆ ಬಂದರು ಇದೀಗ ಹೊಸ ರೂಪ ಪಡೆಯುತ್ತಿದೆ. ಬಂದರಿನ ಆಧುನೀಕರಣ ಕಾರ್ಯಗಳು ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ (PMMSY) ಅಡಿಯಲ್ಲಿ ಜಾರಿಯಾಗುತ್ತಿದ್ದು, ಆಧುನಿಕ ಸೌಲಭ್ಯಗಳೊಂದಿಗೆ ಮೀನುಗಾರರ ಜೀವನೋಪಾಯವನ್ನು ಸುಧಾರಿಸುವ ಗುರಿಯಿದೆ. ಈ ಯೋಜನೆಯಡಿ ಮಲ್ಪೆ ಬಂದರಿನಲ್ಲಿ ಹಳೆಯ ಮೂಲಸೌಕರ್ಯವನ್ನು ನವೀಕರಿಸಿ, ಬಂದರಿನ ಕಾರ್ಯಾಚರಣೆಗಳನ್ನು ಸುಗಮಗೊಳಿಸಲು ವಿವಿಧ ಹೊಸ ಸೌಲಭ್ಯಗಳನ್ನು ನಿರ್ಮಿಸಲಾಗುತ್ತಿದೆ.

ಇದರಡಿ 60,000 ಲೀಟರ್ ಸಾಮರ್ಥ್ಯದ ಸಂಪ್ ಟ್ಯಾಂಕ್, 1,25,000 ಲೀಟರ್ ಸಾಮರ್ಥ್ಯದ ಓವರ್ಹೆಡ್ ಟ್ಯಾಂಕ್, ಭದ್ರತಾ ಗಾರ್ಡ್ ಹೌಸ್, ಶೀತೀಕರಣ ಘಟಕಗಳು, ಬಯೋಮೆಡಿಕಲ್ ತ್ಯಾಜ್ಯ ನಿರ್ವಹಣಾ ಘಟಕ, ಪಾರ್ಕಿಂಗ್ ಪ್ರದೇಶ, ಡ್ರೆನೇಜ್ ವ್ಯವಸ್ಥೆ, ಸೌರ ಬೆಳಕುಗಳು, ಮತ್ತು ಹೈಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ನಡೆಯುತ್ತಿರುವ ಆಧುನೀಕರಣ ಕಾರ್ಯಗಳು ಬಂದರಿನ ಸಾಮರ್ಥ್ಯವನ್ನು ವೃದ್ಧಿಸಿ, ಮೀನುಗಾರರ ಜೀವನೋಪಾಯದಲ್ಲಿ ಹೊಸ ಚೈತನ್ಯ ತುಂಬಲಿವೆ. ಆಧುನಿಕ ಸೌಲಭ್ಯಗಳು, ಶುದ್ಧತೆ, ತಂತ್ರಜ್ಞಾನ ಹಾಗೂ ಸುರಕ್ಷತೆಗಳ ಸಂಯೋಜನೆಯಿಂದ ಮಲ್ಪೆ ಬಂದರು ರಾಜ್ಯದ ಇತರೆ ಬಂದರುಗಳಿಗೆ ಮಾದರಿಯಾಗುವ ಸಾಧ್ಯತೆ ಇದೆ. ಈ ಯೋಜನೆಯಿಂದ ಉಡುಪಿ ಜಿಲ್ಲೆಯ ಮೀನುಗಾರಿಕೆ ಕ್ಷೇತ್ರವು ಆರ್ಥಿಕವಾಗಿ ಮತ್ತಷ್ಟು ಬಲ ಪಡೆದು, ಕರಾವಳಿ ಅಭಿವೃದ್ಧಿಯ ಹೊಸ ಅಧ್ಯಾಯವನ್ನು ಆರಂಭಿಸಲಿದೆ ಎಂಬುದು ಮೀನುಗಾರರ ಆಶೆಯಾಗಿದೆ.ಜೀನ್ ಮೀನು ಸಂಸ್ಕರಣಾ ಕೇಂದ್ರಗಳು ನಿರ್ಮಾಣ ಹಂತದಲ್ಲಿವೆ.

ಮೀನುಗಾರರ ಸುರಕ್ಷತೆ, ಮೀನು ಸಂಗ್ರಹಣೆಯ ಗುಣಮಟ್ಟ ಮತ್ತು ವ್ಯಾಪಾರ ಚಟುವಟಿಕೆಗಳಿಗೆ ಸೂಕ್ತ ವಾತಾವರಣ ಕಲ್ಪಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಆಧುನಿಕ ತಂತ್ರಜ್ಞಾನ ಬಳಕೆ, ಸ್ಮಾರ್ಟ್ ಮೀನುಗಾರಿಕೆ ವ್ಯವಸ್ಥೆ, ಮತ್ತು ಶುದ್ಧತೆಯ ಮೇಲೆ ಒತ್ತು ನೀಡುವ ಮೂಲಕ ಬಂದರಿನ ಸಾಮರ್ಥ್ಯವನ್ನು ಹೆಚ್ಚಿಸುವ ಕಾರ್ಯ ನಡೆಯುತ್ತಿದೆ. ಈ ಯೋಜನೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಂಯುಕ್ತ ಯೋಜನೆ ಆಗಿದ್ದು, ಇದರಡಿ 60% ಅನುದಾನವನ್ನು ಕೇಂದ್ರ ಸರ್ಕಾರ ಮತ್ತು 40% ಅನುದಾನವನ್ನು ರಾಜ್ಯ ಸರ್ಕಾರ ನೀಡುತ್ತಿದೆ. ಉಡುಪಿ ಜಿಲ್ಲೆಯ ಮೀನುಗಾರಿಕೆ ಕ್ಷೇತ್ರಕ್ಕೆ ಇದು ಮಹತ್ವದ ಪ್ರೋತ್ಸಾಹ ನೀಡಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೀನುಗಾರಿಕೆ ಇಲಾಖೆ ವತಿಯಿಂದ ಮಲ್ಪೆಯ ಮೀನುಗಾರಿಕಾ ಬಂದರು ಆವರಣದಲ್ಲಿ ಮೀನುಗಾರಿಕಾ ಬಂದರಿನ ಆಧುನೀಕರಣ ಕಾಮಗಾರಿಯ ಶಂಕುಸ್ಥಾಪನೆಯನ್ನು ಕರ್ನಾಟಕ ಸರ್ಕಾರದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಾಂಕಾಳ ವೈದ್ಯ ನೆರವೇರಿಸಿ ಮಾತನಾಡಿ, ಮೀನುಗಾರರು ಮೀನುಗಾರಿಕಾ ಚಟುವಟಿಕೆಗಳನ್ನು ಉತ್ತಮ ರೀತಿಯಲ್ಲಿ ಕೈಗೊಳ್ಳಲು ಅಗತ್ಯವಿರುವ ಮೂಲ ಸೌಕರ್ಯಗಳನ್ನು ಕಲ್ಪಿಸಲು ಸರ್ಕಾರ ಬದ್ದವಾಗಿದೆ. ಅದಕ್ಕೆ ಅಗತ್ಯವಿರುವ ಎಲ್ಲ ರೀತಿಯ ಅನುದಾನವನ್ನು ಸರ್ಕಾರವು ಕಲ್ಪಿಸಲಿದೆ. ಜಿಲ್ಲೆಯಲ್ಲಿ 50 ಸಾವಿರಕ್ಕೂ ಹೆಚ್ಚು ಜನ ಮೀನುಗಾರಿಕೆ ಸೇರಿದಂತೆ ಅದಕ್ಕೆ ಪೂರಕವಾಗಿರುವ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನನ್ನ ಕ್ಷೇತ್ರದ 20 ಸಾವಿರಕ್ಕೂ ಹೆಚ್ಚು ಜನ ಇಲ್ಲಿನ ಮೀನುಗಾರಿಕಾ ಚಟುವಟಿಕೆಗಳನ್ನು ಅವಲಂಬಿಸಿದ್ದಾರೆ. ಮಲ್ಪೆಯು ದೇಶದಲ್ಲಿಯೇ ಅತಿ ಹೆಚ್ಚು ಮೀನುಗಾರಿಕಾ ಉತ್ಪನ್ನಗಳನ್ನು ಮಾಡುವ ಬಂದರಾಗಿದ್ದು ಇಲ್ಲಿನ ಅಗತ್ಯ ಮೂಲಭೂತ ಸೌಕರ್ಯಗಳನ್ನು ಮೀನುಗಾರಿಕಾ ಚಟುವಟಿಕೆಗಳನ್ನು ಕೈಗೊಳ್ಳಲು ಅನುಕೂಲವಾಗುವ ರೀತಿಯಲ್ಲಿ ನಿರ್ಮಿಸಲು ನಮ್ಮ ಸರ್ಕಾರ ಬದ್ದವಾಗಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನವನ್ನು ಬಳಕೆ ಮಾಡುವುದರೊಂದಿಗೆ ಇಲ್ಲಿನ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲಾಗುವುದು. ಇದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು. ಒಂದೊಮ್ಮೆ ಕೇಂದ್ರ ಸರ್ಕಾರ ಅನುದಾನ ನೀಡದಿದ್ದಲ್ಲಿ ನಮ್ಮ ಸರ್ಕಾರವೇ ಅನುದಾನ ಭರಿಸುವುದರೊಂದಿಗೆ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳುವುದು. ಕಳೆದ ಸಾಲುಗಳಲ್ಲಿ ಬಂದರುಗಳ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲು ಬಂದಿರುವ ಅನುದಾನವು ಸಿ.ಆರ್.ಜೆಡ್ ನ ಕೆಲವು ನಿಯಮಾವಳಿಗಳಿಂದಾಗಿ ಬಳಕೆ ಮಾಡಿಕೊಳ್ಳಲು ಕಷ್ಟಸಾಧ್ಯವಾಗಿ ವಾಪಾಸು ಹೋಗಿದೆ. ರಾಜ್ಯ ಸರ್ಕಾರವು ಸಿ.ಆರ್.ಜೆಡ್.ನ ನಿಯಮಾವಳಿಗಳನ್ನು ನೆರೆಯ ರಾಜ್ಯಗಳಾದ ಗೋವಾ ಮತ್ತು ಕೇರಳದಲ್ಲಿ ಇರುವ ಹಾಗೆ ಮಾಡಿಕೊಟ್ಟಲ್ಲಿ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲು ಅನುಕೂಲವಾಗುತ್ತದೆ. ದೇಶದಲ್ಲಿ ಎಲ್ಲಾ ರಾಜ್ಯಗಳಲ್ಲಿ ಒಂದೇ ಥರದ ನಿಯಮಾವಳಿಗಳು ಇರುವುದು ಒಳಿತು. ರಾಜ್ಯ ಸರ್ಕಾರವು ರಾಜ್ಯದಲ್ಲಿರುವ ಸಿ.ಆರ್.ಜೆಡ್ ನ ನಿಯಮಾವಳಿಗಳನ್ನು ಬದಲಾಯಿಸಲು ಮನವಿ ಮಾಡಿದೆ. ಇದಕ್ಕೆ ಎಲ್ಲರೂ ಸ್ಪಂದಿಸಬೇಕು ಇದರಿಂದ ಮೀನುಗಾರಿಕೆ ಚಟುವಟಿಕೆ ಹಾಗೂ ಪ್ರವಾಸೋದ್ಯಮಕ್ಕೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

ಮಲ್ಪೆಯು ಸರ್ವಋತು ಬಂದರಾಗಿದ್ದು ಹೆಚ್ಚು ಮೀನುಗಾರರು ಮೀನುಗಾರಿಕಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಮೀನುಗಾರಿಕಾ ದೋಣಿಗಳು ಹೆಚ್ಚಾದ ಕಾರಣ ಮೀನುಗಾರಿಕಾ ಬೋಟ್ಗಳ ನಿಲುಗಡೆಗೆ ವಿಸ್ತರಣೆ ಅಗತ್ಯವಿದೆ. ಇದರ ಜೊತೆಗೆ ಬಂದರಿನ ಸ್ವಚ್ಚತೆಗೆ ಆದ್ಯತೆ ನೀಡಬೇಕು, ಮಾನ್ಯ ಮೀನುಗಾರಿಕಾ ಮಂತ್ರಿಗಳು ಸ್ಥಳೀಯ ಮೀನುಗಾರರ ಸಮಸ್ಯೆಗಳನ್ನು ಆಲಿಸಿ ಸ್ಪಂದಿಸಲು ಅನುಕೂಲವಾಗುವ ರೀತಿ ಸಭೆ ನಡೆಸಲು ಅವಕಾಶ ಮಾಡಿಕೊಡಬೇಕು ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದ್ದಾರೆ.

ಮತ್ಸ್ಯ ಸಂಪದಾ ಯೋಜನೆಯು ಮೀನುಗಾರರಿಗೆ ಶಕ್ತಿ ತುಂಬಿದೆ. ಈ ಯೋಜನೆಯ ಅನುದಾನವು ಸಮರ್ಪಕವಾಗಿ ಬಳಕೆಯಾಗಬೇಕು. ಹೆಜಮಾಡಿ ಮೀನುಗಾರಿಕಾ ಬಂದರಿನ ಕಾಮಗಾರಿಯನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿದಲ್ಲಿ ಮೀನುಗಾರಿಕಾ ಚಟುವಟಿಕೆಗಳನ್ನು ಕೈಗೊಳ್ಳಲು ಅನುಕೂಲವಾಲಿದೆ ಎಂದ ಅವರು, ಜಿಲ್ಲೆಯಲ್ಲಿ ಜಟ್ಟಿಗಳ ನಿರ್ಮಾಣ ಹಾಗೂ ಹೂಳೆತ್ತುವುದಕ್ಕೂ ಹೆಚ್ಚು ಗಮನ ನೀಡಬೇಕು ಎಂದು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.
ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಪ್ರಸ್ತುತ ಕೊರತೆಯಿರುವ ಅಗತ್ಯ ಸೌಲಭ್ಯವನ್ನು ನಿರ್ವಹಿಸಲು ಈ ಕೆಳಗಿನಂತೆ ಅವಕಾಶ ಕಲ್ಪಿಸಲಾಗಿದೆ.
ಬಂದರಿನಲ್ಲಿರುವ ಹಳೆಯ ಮೂಲಸೌಕರ್ಯ ಸೌಲಭ್ಯಗಳನ್ನು ನವೀಕರಿಸಿ ಬಂದರಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಸೇರ್ಪಡೆಗೊಳಿಸುವುದು.
ಮೀನುಗಾರರ ಜೀವನೊಪಾಯದ ಸ್ಥಿತಿಯನ್ನು ಸುಧಾರಿಸುವುದು
ಬಂದರನ್ನು ಪರಿಸರ ಸ್ನೇಹಿಯಾಗಿ ಹಾಗೂ ಪ್ರವಾಸೋದ್ಯಮ ಬೆಂಬಲಿಸುವ ರೀತಿಯಲ್ಲಿ ಆಧುನೀಕರಣಗೊಳಿಸುವುದು
ಮೀನಿನ ಗುಣಮಟ್ಟ ಮತ್ತು ಮೌಲ್ಯವನ್ನು ಹೆಚ್ಚಿಸಿ ಬಂದರಿನ ಆದಾಯವನ್ನು ವೃದ್ಧಿಸುವುದು.
ಮಲ್ಪೆ ಮೀನುಗಾರಿಕೆ ಬಂದರಿನ ಆಧುನೀಕರಣಗೊಳಿಸಲು ಪ್ರಧಾನಮಂತ್ರಿ ಮತ್ತ್ವಸಂಪದ ಯೋಜನೆಯಡಿ ನಿಗದಿಪಡಿಸಿದ 12.52 ಕೋಟಿ

ಮಲ್ಪೆ ಮೀನುಗಾರಿಕೆ ಬಂದರನ್ನು ಆಧುನೀಕರಣಗೊಳಿಸಲು ಈ ಕೆಳಗಿನ ಸೌಲಭ್ಯಗಳನ್ನು ಅಂದಾಜುಪಟ್ಟಿಯಲ್ಲಿ ಅಳವಡಿಸಿಕೊಳ್ಳಲಾಗಿರುತ್ತದೆ.
60,000 ಲೀ. ಸಾಮರ್ಥ್ಯದ ಸಂಪ್ ಟ್ಯಾಂಕ್
1,25,000 ಲೀ ಸಾಮರ್ಥ್ಯ ಓವರ್ ಹೆಡ್ ಟ್ಯಾಂಕ್
ಪ್ರವೇಶ ದ್ವಾರದೊಂದಿಗೆ ಭದ್ರತಾ ಗಾರ್ಡ್ ಹೌಸ್ (75.00 ಚ.ಮೀ)
ಸಿ.ಸಿ ಟಿವಿ ಅಳವಡಿಸುವುದು
ಕಾಂಕ್ರೀಟ್ ಸರ್ಫೇಸ್ (190.00×25.00=4750.00 sqm)
600 KLD ETP ಹಾಗೂ ಕಾಂಕ್ರೀಟ್ ಚರಂಡಿಯನ್ನು ನಿರ್ಮಿಸುವುದು (2450.00 ಮೀ.ಉದ್ದ)
RO ಪ್ಲಾಂಟ್ ನೊಂದಿಗೆ ಫಿಶ್ ಹ್ಯಾಂಡ್ಲಿಂಗ್ ವ್ಯವಸ್ಥೆ
2.5MT /ಗಂಟೆ ಸಾಮರ್ಥ್ಯದ ಕನ್ವೇಯರ್ ವ್ಯವಸ್ಥೆ
ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ನಡೆಯುತ್ತಿರುವ ಆಧುನೀಕರಣ ಕಾರ್ಯಗಳು ಬಂದರಿನ ಸಾಮರ್ಥ್ಯವನ್ನು ವೃದ್ಧಿಸಿ, ಮೀನುಗಾರರ ಜೀವನೋಪಾಯದಲ್ಲಿ ಹೊಸ ಚೈತನ್ಯ ತುಂಬಲಿವೆ. ಆಧುನಿಕ ಸೌಲಭ್ಯಗಳು, ಶುದ್ಧತೆ, ತಂತ್ರಜ್ಞಾನ ಹಾಗೂ ಸುರಕ್ಷತೆಗಳ ಸಂಯೋಜನೆಯಿಂದ ಮಲ್ಪೆ ಬಂದರು ರಾಜ್ಯದ ಇತರೆ ಬಂದರುಗಳಿಗೆ ಮಾದರಿಯಾಗುವ ಸಾಧ್ಯತೆ ಇದೆ. ಈ ಯೋಜನೆಯಿಂದ ಉಡುಪಿ ಜಿಲ್ಲೆಯ ಮೀನುಗಾರಿಕೆ ಕ್ಷೇತ್ರವು ಆರ್ಥಿಕವಾಗಿ ಮತ್ತಷ್ಟು ಬಲ ಪಡೆದು, ಕರಾವಳಿ ಅಭಿವೃದ್ಧಿಯ ಹೊಸ ಅಧ್ಯಾಯವನ್ನು ಆರಂಭಿಸಲಿದೆ ಎಂಬುದು ಮೀನುಗಾರರ ಆಶೆಯಾಗಿದೆ.

ಶಾರೂಕ್ ತೀರ್ಥಹಳ್ಳಿ
ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.




