ರಾಜ್ಯ ಉಚ್ಛನ್ಯಾಯಾಲಯದ ಮಧ್ಯಂತರ ಆದೇಶ ಹಾಗೂ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ಆದೇಶ ಅನ್ವಯ ಅವೈಜ್ಞಾನಿಕ ಬೆಳಕು ಮೀನುಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದ್ದು, ಜಿಲ್ಲೆಯ ಮೀನುಗಾರರು ಬೆಳಕು ಮೀನುಗಾರಿಕೆಗಾಗಿ ದೋಣಿಗಳಲ್ಲಿ ಜನರೇಟರ್ಗಳನ್ನು ಯಾವುದೇ ಕಾರಣಕ್ಕೂ ಬಳಸುವಂತಿಲ್ಲ ಹಾಗೂ ಬೆಳಕು ಮೀನುಗಾರಿಕೆ ನಡೆಸುವಂತಿಲ್ಲ.
ರಾಜ್ಯ ಉಚ್ಛನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಬೆಳಕು ಮೀನುಗಾರಿಕೆ ನಡೆಸುವುದು ಕಂಡುಬಂದಲ್ಲಿ ಅಂತಹ ಮೀನುಗಾರಿಕಾ ದೋಣಿಗಳ ಪರವಾನಗಿಯನ್ನು ರದ್ದುಗೊಳಿಸಲಾಗುವುದು ಜೊತೆಗೆ ಸದರಿ ದೋಣಿಯ ಡೀಸಿಲ್ ಸರಬರಾಜನ್ನು ತಡೆಹಿಡಿಯಲಾಗುವುದು ಎಂದು ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.




