ಮಲ್ಪೆ | ‘ನಮಗೆ ಲಾಠಿ ಏಟು ಬಿದ್ದಾಗ ಪ್ರಮೋದ್ ಮಧ್ವರಾಜ್ ಬೆಂಬಲ ನೀಡಿರಲಿಲ್ಲ’ ಎಂದ ಕಾಂಗ್ರೆಸ್ ಮುಖಂಡ; ಭಾಷಣಕ್ಕೆ ಅಡ್ಡಿ

Date:

ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಮೀನುಗಾರರ ಮೇಲೆ ಕೇಸು ದಾಖಲಿಸಿರುವುದನ್ನು ಖಂಡಿಸಿ ಶನಿವಾರ ಮಲ್ಪೆ ಮೀನುಗಾರರ ಸಂಘದ ವತಿಯಿಂದ ಮಲ್ಪೆ ಬಂದರು ಪ್ರದೇಶದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಉಡುಪಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಮಾತನಾಡುತ್ತಿದ್ದಾಗ ರಾಜಕೀಯ ಮಾತನ್ನಾಡಿದ್ದಾರೆ ಎಂದು ಆರೋಪಿಸಿ ಪ್ರತಿಭಟನಾಕಾರರು, ಭಾಷಣ ನಡೆಸಲು ಅಡ್ಡಿಪಡಿಸಿದ ಬೆಳವಣಿಗೆ ನಡೆದಿದೆ.

ಪ್ರತಿಭಟನೆಯಲ್ಲಿ ಮಾತನಾಡಿದ ರಮೇಶ್ ಕಾಂಚನ್, ವೇದಿಕೆಯಲ್ಲಿ ಕೂತಿದ್ದ ಬಿಜೆಪಿ ಮುಖಂಡ, ಮಾಜಿ ಶಾಸಕ ಪ್ರಮೋದ್ ಮಧ್ವರಾಜ್‌ ಅವರನ್ನು ಉಲ್ಲೇಖಿಸಿ, ‘ಕೆಲವು ವರ್ಷಗಳ ಹಿಂದೆ ನಮ್ಮ ಜಿಲ್ಲೆಯಲ್ಲಿ ಇದೇ ರೀತಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಮೀನುಗಾರರರಿಗೆ ಸಮಸ್ಯೆಯಾಗುತ್ತಿದೆ ಎಂದು ಆಗಿನ ಶಾಸಕರಾಗಿದ್ದ ಪ್ರಮೋದ್ ಮಧ್ವರಾಜ್ ಅವರನ್ನು ನಂಬಿಕೊಂಡು ಪ್ರತಿಭಟನೆ ನಡೆಸಿದ್ದೆವು. ಆವಾಗ ಅಂದಿನ ಎಸ್‌ಪಿಯವರು ನಮ್ಮ ಮೇಲೆ ಲಾಠಿ ಚಾರ್ಜ್‌ ನಡೆಸಿದ್ದರು. ಇವತ್ತು ಕೂಡ ಆ ಕೇಸಿನ ಹಿಂದೆ ಓಡಾಡುತ್ತಿದ್ದೇವೆ. ಆವಾಗ ಪ್ರಮೋದ್ ಮಧ್ವರಾಜ್ ಈವಾಗಿನ ಆಕ್ರೋಶ ತೋರಿಸಲೇ ಇಲ್ಲ. ಹಾಗಾಗಿ, ನನ್ನನ್ನೂ ಸೇರಿದಂತೆ ಯಾವುದೇ ರಾಜಕೀಯ ಮುಖಂಡರ ಮಾತುಗಳನ್ನು ನಂಬಬೇಡಿ. ಮೀನುಗಾರರ ಸಮಸ್ಯೆಗಳಿಗೆ ಸ್ಪಂದಿಸುವವರ ಮಾತುಗಳನ್ನಷ್ಟೇ ನಂಬಿ’ ಎಂದು ಹೇಳಿ, ಮಾತು ಮುಗಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಆಕ್ರೋಶಗೊಂಡ ಕೆಲವು ಪ್ರತಿಭಟನಾಕಾರರು ವೇದಿಕೆಯ ಕಡೆಗೆ ನುಗ್ಗಿ ಬಂದು, ‘ರಾಜಕೀಯ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು. ಈ ವೇಳೆ ವೇದಿಕೆಯಲ್ಲಿದ್ದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಸೇರಿದಂತೆ ಮೀನುಗಾರರ ಸಂಘದ ಮುಖಂಡರು, ಸಮಾಧಾನಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಬಿಜೆಪಿ ಶಾಸಕ ರಘುಪತಿ ಭಟ್, “ಮಲ್ಪೆ ಬಂದರಿನಲ್ಲಿ ಘಟನೆ ನಡೆದಿದ್ದು ದುರದೃಷ್ಟಕರ ಸಂಗತಿ. ದುಡಿದು ಕಷ್ಟ ಪಟ್ಟು ತಂದ ಮೀನು ಅದನ್ನು ಕದ್ದು ಹೋಗುವುದು ದೊಡ್ಡ ತಪ್ಪು. ಕದ್ದು ಸಿಕ್ಕಿ ಬಿದ್ದ ಮಹಿಳೆಯನ್ನು ಕಟ್ಟಿ ಹಾಕಿದ್ದು ವೈರಲ್ ಆದದ್ದು ದುರದೃಷ್ಟಕರ. ಆದರೆ ಸರಕಾರ ನಡೆದುಕೊಂಡ ರೀತಿಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿದರು.

“ಪಿಕ್ ಪಾಕೆಟ್ ಮಾಡಿದವರನ್ನು, ಚಿನ್ನ ಕದ್ದವರಿಗೆ ಪ್ರಥಮ ಪ್ರಕ್ರಿಯೆ ಥಳಿತವೇ ಆಗಿರುತ್ತದೆ. ಆದರೆ ಇಲ್ಲಿ ವ್ಯವಸ್ಥೆ ಇದೆ. ಈ ರೀತಿಯ ಘಟನೆಯಾಗಿಲ್ಲ. ಸಂಘ ಸಂಸ್ಥೆ ಗಳು ರಾಜಿ ಪಂಚಾಯತ್ ಮಾಡಿದ ವೀಡಿಯೋ ಇದೆ. ಪೊಲೀಸ್ ಠಾಣೆ ರಾಜಿಯಾದ ವಿಚಾರದ ಮೇಲೆ ಅಟ್ರಾಸಿಟಿ ಕೇಸ್ ಹೇಗೆ ಹಾಕಿದ್ದೀರ? ಇಲ್ಲಿ ಎಲ್ಲೂ ಜಾತಿ ನಿಂದನೆಯಾಗಿಲ್ಲ. ಕಟ್ಟಿ ಹೊಡೆಯುವಾಗ ಜಾತಿ ನಿಂದನೆ ಮಾಡಿಲ್ಲ. ಪೊಲೀಸರು ಅಟ್ರೋಸಿಟಿ ಕೇಸನ್ನು ವಾಪಸು ಪಡೆಯಬೇಕು” ಎಂದು ಆಗ್ರಹಿಸಿದರು.

ಪ್ರತಿಭಟನಾ ಸಭೆಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಭಾಗವಹಿಸಿ ಮೀನುಗಾರರಿಗೆ ಅದ ಅನ್ಯಾಯಕ್ಕೆ ನ್ಯಾಯ ಒದಗಿಸಲು ಸದಾ ಜೊತೆಗಿರುವ ಭರವಸೆ ನೀಡಿದರು. ಪ್ರತಿಭಟನೆಯ ಬಳಿಕ ಅಪರ ಜಿಲ್ಲಾಧಿಕಾರಿ ಆಬಿದ್ ಗದ್ಯಾಳ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.

ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ದಯಾನಂದ ಸುವರ್ಣ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್, ವಿವಿಧ ಮೀನುಗಾರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸಾವಿರಾರು ಮೀನುಗಾರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...