ಉಡುಪಿ | ಕ್ಷೇತ್ರದಲ್ಲಿ ನಡೆದ ತಪ್ಪನ್ನು ಅಧಿಕಾರಗಳ ತಲೆಗೆ ಕಟ್ಟಲು ಶಾಸಕರ ಪ್ರಯತ್ನ – ಕೋಟ ನಾಗೇಂದ್ರ ಪುತ್ರನ್

Date:

ಕೈಲಾದವನ ಕೊನೆಯ ಅಸ್ತ್ರ ಶಾಸಕ ಯಶ್ಫಾಲ್ ಸುವರ್ಣ ಹೇಳಿಕೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಕೋಟ ನಾಗೇಂದ್ರ ಪುತ್ರನ್ ಮಲ್ಪೆಯಲ್ಲಿ ನಡೆದ ದಲಿತ ಮಹಿಳೆ ಮೇಲಿನ ಹಲ್ಲೆಯನ್ನು ಖಂಡಿಸಿ ಉಡುಪಿ‌ ಶಾಸಕ ಯಶ್ಫಾಲ್ ಸುವರ್ಣರವರು ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

IMG 20250307 194228

ತನ್ನ ಕ್ಷೇತ್ರದಲ್ಲಿ ಆಗಿರುವ ತಪ್ಪನ್ನು ಅಧಿಕಾರಿಗಳ ತಲೆಗೆ ಹೋರಿಸುವ ಪ್ರಯತ್ನ ಶಾಸಕರಿಂದ ಆಗುತ್ತಿದೆ. ಇದೆ ತಪ್ಪು ಮುಸ್ಲಿಂ ಸಮುದಾಯ ಯಾರಾದರೂ ಮಾಡಿದ್ದರೆ‌ ಶಾಸಕರ ಹೇಳಿಕೆ ಯಾವ ರೀತಿಯಲ್ಲಿ ಇರುತ್ತಿತ್ತು. ನಿಮಗೆ ಬೇಕುಬೇಕಾದ ಹಾಗೆ ಹೇಳಿಕೆ ನೀಡಿ ಅಭ್ಯಾಸ ಆಗಿದೆ, ಜಿಲ್ಲೆಯಲ್ಲಿ ಬೆಂಕಿ ಹಚ್ಚುವ ಮನೋಭಾವ ಇರುವ ನಿಮ್ಮಲ್ಲಿ ಒಳ್ಳೆಯದನ್ನು ಜನತೆ ನಿರೀಕ್ಷಿಸಲು ಸಾಧ್ಯವಿಲ್ಲ. ನಿರಂತರ ಕೊಳ್ಳೆ ಹೊಡೆದು ಜನ ನಾಯಕ ಅದರೆ ಒಪ್ಪೋಕೆ ಆಗೋಲ್ಲ, ಶೋಷಿತರ ಕುಟುಂಬಕ್ಕೆ ಅನ್ಯಾಯ ಆದಾಗ ಜೊತೆ ನಿಲ್ಲಬೇಕು, ಆಗ ಮಾತ್ರ ಒಬ್ಬ ಉತ್ತಮ ಜನ ನಾಯಕ ಆಗಲು ಸಾಧ್ಯ ಎಂದು ಹೇಳಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಉಡುಪಿಯ ಮಲ್ಪೆಯಲ್ಲಾದ ಘಟನೆಗೆ ಸ್ಪಂದಿಸಿದ ಬಳಿಕ ಉಡುಪಿ ಶಾಸಕರಿಗೆ ಘಟನೆಯ ನೆನಪಾಯಿತೋ ? – ಅರುಣ್ ಕುಂದರ್ ಕಲ್ಗದ್ದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1004765294

ರಾಜ್ಯದ ಮೂಲೆ ಮೂಲೆಗಳಲ್ಲಿ ನಡೆದ ಘಟನೆಗಳ ಬಗ್ಗೆ ಸ್ಪಂದಿಸುವ ಶಾಸಕರು ತಮ್ಮ ಕಾಲ ಬುಡದಲ್ಲಿ ನಡೆದ ಘಟನೆಗೆ ಸ್ಪಂದಿಸಲು ಇಷ್ಟು ವಿಳಂಬ ನೀತಿ ಏಕೆ ? ಮಹಿಳೆಗೆ ಮಾಡಿದ ಹಲ್ಲೆಯನ್ನ ನೀವು ಖಂಡಿಸಿರುವುದು ಸ್ವಾಗತಾರ್ಹ, ಅದರ ಜೊತೆಗೆ ಮೀನುಗಾರಿಕಾ ಬಂದರಿನ ಸಮಸ್ಯೆ ಈ ಘಟನೆಯ ಬಳಿಕ ನಿಮಗೆ ಕಂಡಿರುವುದು ಹಾಸ್ಯಾಸ್ಪದ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಮಾಜಿ ಸದಸ್ಯ, ನ್ಯಾಯವಾದಿ ಅರುಣ್ ಕುಂದರ್ ಕಲ್ಗದ್ದೆ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಮಲ್ಪೆ ಸರ್ವ ಋತು ಬಂದರಿನ ಸ್ವಾಗತ ಕಮಾನಿ ಬಳಿ ಹಲವು ದಶಕಗಳಿಂದ ಕೊಳಚೆ ತುಂಬಿ ಗಬ್ಬು ನಾರುತ್ತಿದೆ. ಬಂದರಿಗೆ ಸ್ವಾಗತ ಕೋರುವ ಸ್ವಾಗತ ಗೋಪುರದ ಬಳಿ ಇಷ್ಟು ಸಾಂಕ್ರಾಮಿಕ ರೋಗ ಹರಡುವ ರೀತಿಯಲ್ಲಿ ಕೊಳಚೆ ನಿಂತಿದ್ದರು. ಅದೇ ದಾರಿಯಲ್ಲಿ ನಿತ್ಯ ಸಂಚರಿಸುವ ಶಾಸಕರು ಗಮನಿಸಿಲ್ಲವೇ ? ಹಲವು ಬಾರಿ ಮಲ್ಪೆ ಬಂದರಿನಲ್ಲಿ ಅಗ್ನಿ ಆಕಸ್ಮಿಕಗಳು ಸಂಭವಿಸಿದಾಗ ಸೂಕ್ತ ಅಗ್ನಿಶಾಮಕ ವಾಹನದ ವ್ಯವಸ್ಥೆ ಇಲ್ಲದೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಪರದಾಡುತ್ತಿರುವುದು ಗಮನಿಸಿಯೂ ಕೂಡ ಕಣ್ಣು ಮುಚ್ಚಿ ಕುಳಿತಿದ್ದ ಶಾಸಕರು, ಮಾಧ್ಯಮಗಳ ವರದಿಯ ಬಳಿಕ ಅಗ್ನಿಶಾಮಕ ಕಚೇರಿಗೆ ಹೊಸ ವಾಹನ ಮಂಜೂರಾದ ಬಳಿಕ ಬ್ಯಾನರ್ ಹಾಕಿ ತಮ್ಮದೇ ಸಾಧನೆ ಎನ್ನುವಂತೆ ಬಿಂಬಿಸುತ್ತೀರಿ.

1004753394 1

ಹಾಗಾದರೆ ಮೀನುಗಾರಿಕಾ ಸಮುದಾಯದಲ್ಲಿ ಹುಟ್ಟಿ ಮೀನುಗಾರಿಕಾ ಸಮುದಾಯದ ನಾಯಕರಾಗಿ ಗುರುತಿಸಿಕೊಂಡಿರುವ ನಿಮಗೆ ಮೀನುಗಾರರ ಸಮಸ್ಯೆ ಕಾಣಿಸುತ್ತಿಲ್ಲವೇ ಸದನದಲ್ಲಿ ಕೋಳಿ ಅಂಕದ ವಿಚಾರ ಪ್ರಸ್ತಾಪಿಸಲು ತೋರಿದ ಆಸಕ್ತಿ, ಮೀನುಗಾರಿಕಾ ಸಮುದಾಯದ ಸಮಸ್ಯೆಗಳ ಪರಿಹಾರದ ಕುರಿತು ನೀವು ತೋರಿಸಿಲ್ಲ. ಒಂದು ಕ್ಷೇತ್ರದ ಸಂಪೂರ್ಣ ಜವಾಬ್ದಾರಿ ನಿಮ್ಮ ಮೇಲೆ ಇರುವಾಗ ಇಂತಹ ಘಟನೆಗಳು ನಡೆದಾಗ ತಕ್ಷಣ ಅನ್ಯಾಯಕ್ಕೆ ಒಳಗಾದವರ ಪರ ನಿಲ್ಲಬೇಕಾಗಿದ್ದ ನೀವು ಇಷ್ಟು ವಿಳಂಬ ನೀತಿ ಅನುಸರಿಸಿರುವುದು ನೋಡಿದರೆ ಇಲ್ಲಿ ನಿಮ್ಮ ಪಕ್ಷದ ಅಥವಾ ನಿಮ್ಮವರು ಯಾರಾದರು ಪ್ರಕರಣದಲ್ಲಿ ಭಾಗಿಯಾಗಿದ್ದರೆ ? ಎನ್ನುವ ಪ್ರಶ್ನೆ ಮೂಡುತ್ತಿದೆ. ಮುಖಭಂಗವಾಗುದನ್ನು ತಪ್ಪಿಸಲು ಕೊನೆಯಲ್ಲಿ ಹೇಳಿಕೆ ನೀಡಿದಂತಿದೆ. ಶಾಸಕರಾಗಿ ಇನ್ನಾದರೂ ಸದನದಲ್ಲಿ ಜಿಲ್ಲೆ ಹಾಗೂ ಕ್ಷೇತ್ರಕ್ಕೆ ಪೂರಕವಾದ ಯೋಜನೆಗಳನ್ನು ತರುವ ಕುರಿತು ನಿಮ್ಮ ಆಸಕ್ತಿ ಬೆಳೆಸಿಕೊಳ್ಳಿ ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...