ಮಲ್ಪೆ ಮಹಿಳೆ ಮೇಲೆ ಹಲ್ಲೆ; ಘಟನೆ ಬಗ್ಗೆ ಸಂತ್ರಸ್ತೆ ಹೇಳಿದ್ದೇನು?

Date:

ಮೀನು ಕದ್ದ ಆರೋಪದ ಮೇಲೆ ಮಲ್ಪೆ ಮಹಿಳೆ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಲಕ್ಕೀಬಾಯಿ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದು, ʼನಾನು ಸ್ವಲ್ಪ ಮೀನು ತೆಗೆದಿದ್ದೆ. ಅದಕ್ಕೆ ಮೀನು ಕದ್ದಿದ್ದು ಎಂದು ಹೇಳಿ ಅವರೆಲ್ಲ ಹೊಡೆದರು. ನನಗೆ ಅವರ ಮೇಲೆ ಏನೂ ದ್ವೇಷವಿಲ್ಲ. ಅವರಿಗೆ ನನ್ನ ಮೇಲೆ ದ್ವೇಷವಿಲ್ಲ. ಅವರನ್ನು ಬಂದರಿನಲ್ಲಿ ನಾನು ನೋಡಿ ಪರಿಚಯವಿದೆʼ ಎಂದು ಹೇಳಿದರು.

ಸಂತ್ರಸ್ತೆ ಸುದ್ದಿಗಾರರೊಂದಿಗೆ ಮಾತನಾಡಿದ್ದು, “ನಾನು ಮಲ್ಪೆಯಲ್ಲಿ ಆರೇಳು ವರ್ಷದಿಂದ ಕೆಲಸ ಮಾಡುತ್ತಿದ್ದೇನೆ‌. ಯಾರಿಗೆ ಏನೂ ಶಿಕ್ಷೆ ಕೊಡುವುದು ಬೇಡ. ಅವರ ಪಾಡಿಗೆ ಅವರು ನಮ್ಮ ಪಾಡಿಗೆ ನಾವು ಇರುತ್ತೇವೆ. ಈ ಘಟನೆಯಾದ ಮೇಲೆ ನಾನು ಬಂದರಿಗೆ ಹೋಗಿಲ್ಲ. ಮೊನ್ನೆಯ ಘಟನೆ ಬಗ್ಗೆ ಹೇಳಲು ಏನೂ ಇಲ್ಲ” ಎಂದು ಹೇಳಿದರು.

“ಅವರು ಮೇಲಿಂದಲೇ ಕಂಪ್ಲೇಂಟ್ ಕೊಡಲು ಹೇಳಿ, ಕಂಪ್ಲೇಂಟ್ ಕೊಡಲು ಬನ್ನಿ ಎಂದು ಕರೆದುಕೊಂಡು ಹೋದರು. ಅವರು ಹೇಳಿದ್ದಕ್ಕೆ ನಾನು ಸಹಿ ಮಾಡಿದ್ದೇನೆ ಅಷ್ಟೇ. ಘಟನೆಯಾದ ರಾತ್ರಿಯೇ ರಾಜಿ ಮಾಡಿಕೊಂಡಿದ್ದೇವೆ. ಕೇಸ್ ಮಾಡುವುದು ಬೇಡವೆಂದು ಮಾತನಾಡಿ ಬಂದಿದ್ದೆವು. ಆಮೇಲೆ ಮೇಲಿಂದ ಇದು ಆಯ್ತು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯಾರಿಗೂ ಶಿಕ್ಷೆ ಆಗೋದು ಬೇಡ ಅವರ ಪಾಡಿಗೆ ಅವರು ನಮ್ಮ ಪಾಡಿಗೆ ನಾವು ದುಡಿದು ತಿನ್ನುತ್ತೇವೆ. ಇನ್ನು ಇಲ್ಲಿ ಕೆಲಸ ಮಾಡೋದು ಕಷ್ಟ ಊರಿಗೆ ಹೋಗುತ್ತೇನೆ. ಮೀನುಗಾರರು ನನಗೆ ಸಹಾಯ ಮಾಡಿದ್ದಾರೆ. ಈಗ ಇರೋಕೆ ಒಂಥರಾ ಮುಜುಗರವಾಗುತ್ತದೆ. ಅದುಬಿಟ್ಟರೆ ನನಗೆ ಬೇರೆ ಏನೂ ತೊಂದರೆ ಕೊಟ್ಟಿಲ್ಲ. ಸ್ವಲ್ಪ ಮೀನು ತೆಗೆದದ್ದು ಹೌದು. ಬಂದರಿನಲ್ಲಿ ಆ ಥರ ತೆಗೆಯೋದು ಸಹಜ.‌ ಎಲ್ಲರೂ ಹಾಗೆ ಮಾಡುತ್ತಾರೆ. ಆಗರೆ ಆವತ್ತು ಏನೋ ನನ್ನ ಗ್ರಹಚಾರ ಸರಿ ಇರಲಿಲ್ಲ. ಏನೂ ಮಾಡೋಕೆ ಆಗಲ್ಲ” ಎಂದು ಹೇಳಿದರು.

ಕರಾವಳಿ ಭಾಗದಲ್ಲಿ ಈ ಹಿಂದೆ ವಿದ್ಯಾರ್ಥಿಯೊಬ್ಬ ಕಾಣೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಬಿಜೆಪಿ ಶಾಸಕರು ಇದನ್ನು ಮತೀಯ ಬಣ್ಣಕ್ಕೆ ತಿರುಗಿಸಿ, ಸರ್ಕಾರದ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಆತನ ನಿಗೂಢ ನಾಪತ್ತೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು.‌ ಮಂಗಳೂರಿನ ಫರಂಗಿಪೇಟೆಯ ಅಂಗಡಿ ಮುಂಗಟ್ಟನ್ನು ಬಂದ್ ಮಾಡಬೇಕೆಂದು ಹಿಂದುತ್ವ ಸಂಘಟನೆಗಳು ಕರೆ ಕೊಟ್ಟಿದ್ದವು. ಎಲ್ಲರೂ ಜಾತಿ ಧರ್ಮವೆನ್ನದೆ ಅಂಗಡಿ ಮುಂಗಟ್ಟನ್ನು ಬಂದ್ ಮಾಡಿ ಪ್ರತಿಭಟನೆಗೆ ಬೆಂಬಲ ನೀಡಿದ್ದರು. ಮುಸ್ಲಿಮರು ಹೆಚ್ಚಾಗಿರುವ ಫರಂಗಿಪೇಟೆಗೆ ಕೋಮು ಬಣ್ಣ ಹಚ್ಚಲು ಹಾಗೂ ಇಡೀ ಊರಿಗೆ ಕ್ರಿಮಿನಲ್ ಹಣೆಪಟ್ಟಿ ಕಟ್ಟಲು ಮುಂದಾಗಿದ್ದ ಬಿಜೆಪಿ ಹಾಗೂ ಸಂಘ ಪರಿವಾರದ ನಾಯಕರು ಪ್ರಚೋದನಕಾರಿ ಹೇಳಿಕೆಗಳನ್ನೂ ಕೊಟ್ಟಿದ್ದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ದಲಿತ ಮಹಿಳೆ ಮೇಲೆ ಹಲ್ಲೆ ಪ್ರಕರಣ: ಇಬ್ಬರು ಪೊಲೀಸರು ಅಮಾನತು

ಪೊಲೀಸ್ ಇಲಾಖೆಗೆ ಎಲ್ಲ ಸಂಘಟನೆಯವರು ಸೇರಿಕೊಂಡು ಒಂದು ದಿನಾಂಕ ಹೇಳಿದ್ದೇವೆ. ಯುವಕನ ಸುಳಿವನ್ನು ಪತ್ತೆಹಚ್ಚಬೇಕು, ಇಲ್ಲದಿದ್ದರೆ ಮುಂದಿನ ದಿನದಲ್ಲಿ ಇಡೀ ರಾಜ್ಯವ್ಯಾಪಿ ನಾವು ರಸ್ತೆಗಿಳಿದು ಹೋರಾಟ ಮಾಡಬೇಕಾಗುತ್ತದೆಂದು ಶಾಸಕ ಹರೀಶ್ ಪೂಂಜಾ ಪೊಲೀಸರನ್ನು ಬೆದರಿಸಿದ್ದರು.

ಇದೀಗ ಮಲ್ಪೆಯಲ್ಲಿ ಮೀನು ಕದ್ದ ಆರೋಪದ ಮೇಲೆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ ಮಾಡಿ, ಅವಮಾನಿಸಿದರೂ ಕೂಡ ಅಲ್ಲಿಯ ಯಾವುದೇ ಜನಪ್ರತಿನಿಧಿಗಳಾಗಲೀ ಸಂಘಪರಿವಾರದವರಾಗಲಿ, ಬಿಜೆಪಿ ಮುಖಂಡರಾಗಲಿ ಆ ಕುರಿತು ಯಾವುದೇ ಚಕಾರವೆತ್ತಿಲ್ಲ. ʼಬೇಟಿ ಬಚಾವೋ, ಬೇಟಿ ಪಡಾವೋʼ ಎಂದು ಪುಂಗುವ ಬಿಜೆಪಿಗರು‌, ಮೀನು ಕದ್ದ ಆರೋಪದ ಮೇಲೆ ಮಲ್ಪೆಯಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ ಮಾಡಿರುವುದಕ್ಕೆ ಸಂಬಂಧಿಸಿದಂತೆ ಬೀದಿಗಿಳಿಯುವುದಿರಲಿ, ನಾಲಿಗೆಯನ್ನು ಹೊರಚಾಚಲು ತುಟಿಗಳನ್ನೂ ಬಿಚ್ಚುತ್ತಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...