ಮಾಲೂರು | ವರ್ಗಾ ಅಟ್ಯಾಚ್ಮೆಂಟ್ ಕಾರ್ಖಾನೆ ಮುಚ್ಚದಂತೆ ಸಿಐಟಿಯು ಒತ್ತಾಯ

Date:

ಕೋಲಾರ ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದ ವರ್ಗಾ ಅಟ್ಯಾಚ್ಮೆಂಟ್ ಕಾರ್ಖಾನೆಯಲ್ಲಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ನಷ್ಟವನ್ನು ತೋರಿಸಿ ಅಕ್ರಮವಾಗಿ ಕಾರ್ಖಾನೆಯನ್ನು ಮುಚ್ಚಲು ಹೊರಟಿದ್ದಾರೆ. ಕೂಡಲೇ ಕಾರ್ಮಿಕ ಇಲಾಖೆ, ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಯಾವುದೇ ಕಾರಣಕ್ಕೂ ಕಾರ್ಖಾನೆ ಮುಚ್ಚದಂತೆ ಕ್ರಮ ಕೈಗೊಳ್ಳಬೇಕು ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷ ಹೆಚ್ ಎನ್ ಗೋಪಾಲಗೌಡ ಒತ್ತಾಯಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಸುಮಾರು 20 ವರ್ಷದಿಂದ ಕಾರ್ಮಿಕರಾಗಿ ವರ್ಗಾ ಕಾರ್ಖಾನೆಯಲ್ಲಿ ದುಡಿಯುತ್ತಿದ್ದ ಕಾರ್ಮಿಕರನ್ನು ಮಾಲೀಕ ವರ್ಗವು ಏಕಾಏಕಿ ಹೊರಹಾಕಲು ಮುಂದಾಗಿದೆ. ನಷ್ಟದ ನೆಪದಲ್ಲಿ ಕೈಗಾರಿಕೆ ಮುಚ್ಚಲು ಹೊರಟಿದ್ದಾರೆ. ಸುಮಾರು 81 ಖಾಯಂ ಕಾರ್ಮಿಕರನ್ನು ಕೆಲಸದಿಂದ ಹೊರಹಾಕಲು ಮುಂದಾಗಿದ್ದು ಇದು ಕಾರ್ಮಿಕ ವಿರೋಧಿಯಾಗಿದೆ. ಕೂಡಲೇ ಕಾರ್ಖಾನೆಯನ್ನು ಮುಚ್ಚುವ ಆದೇಶವನ್ನು ವಾಪಸು ಪಡೆದು ಕಾರ್ಮಿಕರ ಹಿತ ಕಾಪಾಡುವಂತೆ ಸಂಬಂಧಿಸಿದವರು ಮಾಲೀಕರನ್ನು ಒತ್ತಾಯಿಸಬೇಕಾಗಿದೆ” ಎಂದರು.

ಈ ಕೈಗಾರಿಕೆಯಲ್ಲಿ ಬುಲ್ಡೋಜರ್ಗೆ ಬೇಕಾಗುವ ಬಿಡಿ ಭಾಗಗಳನ್ನು ತಯಾರಿಸಿ ವಿದೇಶಕ್ಕೆ ಕಳಸಲಾಗುತ್ತದೆ. ಇದರಿಂದ ಕಂಪನಿ ಲಾಭದಾಯಕವಾಗಿಯೇ ನಡೆಯುತ್ತಿದೆ. ಕಂಪನಿಯನ್ನು ಮೂರು ಹೆಸರಿನಲ್ಲಿ ವಿಂಗಡಿಸಲಾಗಿದೆ ವರ್ಗಾ, 1 ವರ್ಗಾ, 2 ವೀರ್ಯ ಎಂದು ನಾಮಕಾರಣ ಮಾಡಿಕೊಂಡು ಖಾಯಂ ಕಾರ್ಮಿಕರನ್ನು ಕೆಲಸಕ್ಕೆ ರಾಜೀನಾಮೆ ಕೊಡಿಸಿ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಹುನ್ನಾರಗಳಾಗಿವೆ. ಈ ಮೂರು ಕೈಗಾರಿಕೆಗಳ ಮಾಲೀಕರು ಒಂದೇ ಕುಟುಂಬದವರು ಪಾಲುದಾರಿಕೆಯಲ್ಲಿ ನಡೆಯುತ್ತಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕೋಲಾರ | ವ್ಯಸನಮುಕ್ತ ಸಮಾಜಕ್ಕೆ ಎಲ್ಲರೂ ಕೈ ಜೋಡಿಸಿ: ಜಿಲ್ಲಾಧಿಕಾರಿ ಎಂ ಆರ್ ರವಿ

“ಈಗಾಗಲೇ ಕಂಪನಿಯನ್ನು ಮುಚ್ಚದಂತೆ ಕ್ರಮ ವಹಿಸಿ ಕಾರ್ಮಿಕರ ರಕ್ಷಣೆ ಮಾಡುವಂತೆ ಮನವಿ ಹೋರಾಟಗಳನ್ನು ನಡೆಸಲಾಗಿದೆ. ಕೂಡಲೇ ಜಿಲ್ಲಾಧಿಕಾರಿ ಮಾಲೀಕ ವರ್ಗವನ್ನು ಕರೆಸಿ ವರ್ಗ ಕಾರ್ಖಾನೆಯಲ್ಲಿ ದುಡಿಯುತ್ತಿರುವ ಖಾಯಂ ಕಾರ್ಮಿಕರಿಗೆ ಕೈಗಾರಿಕೆಯಲ್ಲಿ ಕೆಲಸದಲ್ಲಿ ಮುಂದುವರೆಸುವಂತೆ ಕ್ರಮ ವಹಿಸಬೇಕು ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ವಿವಿಧ ಸಂಘಸಂಸ್ಥೆಗಳ ನೇತೃತ್ವದಲ್ಲಿ ಉಗ್ರ ಹೋರಾಟ ನಡೆಯಲಿದೆ” ಎಂದು ಎಚ್ಚರಿಕೆ ನೀಡಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ, ಕಾರ್ಖಾನೆಯ ಕಾರ್ಮಿಕರ ಸಂಘದ ಪದಾಧಿಕಾರಿಗಳಾದ ಪ್ರಭಾಕರ್, ಶ್ರೀಧರ್ ರಾವ್, ಅಂಜನಪ್ಪ, ಹರೀಶ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...