ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

Date:

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್ ಮೆರವಣಿಗೆ ನಡೆಸಿ ವರ್ಗಾ ಕಂಪನಿ ಮುಂಭಾಗದಲ್ಲಿ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ. ನಮಗೆ ಕೆಲಸ ನೀಡಬೇಕು, ಇಲ್ಲದಿದ್ದರೆ ವಿಷ ಸೇವಿಸಿ ಅತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಕಾರ್ಮಿಕರು ಎಚ್ಚರಿಕೆ ನೀಡಿದ್ದಾರೆ.

ವರ್ಗಾ ಅಟ್ಯಾಚ್ಮೆಂಟ್ ಪ್ರೈ . ಲಿಮಿಟೆಡ್ ನಲ್ಲಿ ಸುಮಾರು 81 ಖಾಯಂ ಕಾರ್ಮಿಕರು 19 ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ, ಅವರೆಲ್ಲರೂ ಮಾಲೂರು, ಕೆಜಿಎಫ್, ಕೋಲಾರ, ಬಂಗಾರಪೇಟೆ, ನರಸಾಪುರ, ಮಾಸ್ತಿ ಮತ್ತು ಮುಳಬಾಗಿಲಿನವರು. ಈ ಕಂಪನಿಯು 19 ವರ್ಷಗಳಿಂದ ಬುಲ್ಡೋಜರ್ ಗಳಿಗೆ ಸಂಬಂಧಿಸಿದ ಬಿಡಿಭಾಗಗಳನ್ನು ತಯಾರಿಸುತ್ತಿದೆ ಮತ್ತು ಯುಎಸ್, ನ್ಯೂಜಿಲೆಂಡ್, ನೆದರ್‌ಲ್ಯಾಂಡ್‌, ಯುಕೆ, ನಾರ್ವೆ ಇತ್ಯಾದಿಗಳಿಗೆ ರಫ್ತು ಮಾಡುತ್ತಿದೆ. ಆದಾಗ್ಯೂ, ಈ ಕಾರ್ಮಿಕರಿಗೆ ಸರಿಯಾದ ವೇತನ ಇಲ್ಲ. ವರ್ಗಾ ಅಟ್ಯಾಚ್‌ಮಂಟ್ ಯೂನಿಟ್ -1 ರಿಂದ ಗಳಿಸಿದ ಲಾಭದಿಂದ ಈ ಕಂಪನಿಯ ಆಡಳಿತ ಮಂಡಳಿಯು ಇನ್ನೂ ಎರಡು ಹೊಸ ಘಟಕಗಳನ್ನು (ಯೂನಿಟ್ -2 ಮತ್ತು ಯೂನಿಟ್ -3) ತೆರೆಯಲು ಸಾಧ್ಯವಾಯಿತು, ಇದನ್ನು ಈ ಕಂಪನಿಯ ಕಾರ್ಮಿಕರು ಸಕ್ರಿಯಗೊಳಿಸಿದರು. ಆದರೆ ಇದೀಗ ಕಂಪನಿ 81 ಕಾರ್ಮಿಕರನ್ನು ಹೊರಹಾಕಿರುವುದು ಅಷ್ಟೂ ಕಾರ್ಮಿಕರ ಜೀವನವನ್ನು ಸಂಕಷ್ಟಕ್ಕೆ ಈಡು ಮಾಡಿದಂತಾಗಿದೆ ಎಂದು ಕಾರ್ಮಿಕರು ಅಳಲು ತೋಡಿಕೊಂಡರು.

IMG 20250822 WA0005

ಸಿಐಟಿಯು ತಾಲೂಕು ಸಂಚಾಲಕ ವೀರಭದ್ರ ಮಾತನಾಡಿ, “ನಿರಂತರವಾಗಿ ಕಾನೂನು ರೀತಿಯಲ್ಲಿ ನಾವು ಪ್ರತಿಭಟನೆ ಮಾಡಕತ್ತಿದ್ದೇವೆ, ಮಾಲೂರು ಶಾಸಕ ಹಾಗೂ ಜಿಲ್ಲಾಧಿಕಾರಿಗಳ ಗಮನಕ್ಕೂ ಸಹ ತಂದಿದ್ದೇವೆ. ವರ್ಗಾ ಕಂಪನಿ 81 ಕಾರ್ಮಿಕರನ್ನು ಹೊರ ಹಾಕಿದ್ದು ಸರಿಯಲ್ಲ ಇದರ ವಿರುದ್ಧ ನಾವು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕೋಲಾರ | ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರಾಜೀವ್ ಗಾಂಧಿ, ದೇವರಾಜ ಅರಸು ಜನ್ಮ ದಿನಾಚರಣೆ

ವರ್ಗಾ ಕಂಪನಿಯ ಕಾರ್ಮಿಕ ಮಾತಾನಾಡಿ, “ನಾವು ರಾತ್ರಿ ಹಗಲು ಕೆಲಸ ಮಾಡಿ ಕಂಪನಿ ಬೆಳೆಸಿದ್ದೇವೆ. ಆದ್ರೆ ವರ್ಗಾ ನ ವೀರ್ಯ ಅಂತ ಮಾಡಿ ನಮಗೆ ನೋಟಿಸ್ ನೀಡಿ ಹೊರಹಾಕಿದ್ದಾರೆ, ನಾವು ನಮ್ಮ ಬೆವರು ಸುರಿಸಿ ಕೆಲಸ ಮಾಡಿದ್ದೇವೆ, ನಮಗೆ ನ್ಯಾಯ ಸಿಗಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡ್ತೇವೆ” ಎಂದು ತಿಳಿಸಿದರು.

20 ವರ್ಷದಿಂದ ದುಡಿದ ಕಾರ್ಮಿಕರನ್ನೂ ಹೊರ ಹಾಕಿದ್ದು ಸರಿಯಲ್ಲ. ಕೂಡಲೇ ಶಮಾಲೂರು ಶಾಸಕರು ಹಾಗೂ ಕೋಲಾರ ಜಿಲ್ಲಾಧಿಕಾರಿಗಳು ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ಕೆಲಸ ಕೊಡಿಸಬೇಕು, ನಾವು ಸರ್ಕಾರ ಹಾಗೂ ಕಾರ್ಮಿಕ ಸಚಿವರ ಗಮನಕ್ಕೆ ತಂದಿದ್ದೇವೆ ಕೂಡಲೇ ಸಮಸ್ಯೆ ಬಗೆಹರಿಸಿ ಎಂದು ಹೇಳಿದ ಸಿಐಟಿಯು ರಾಜ್ಯ ಮುಖಂಡ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...