‘ಮನಸ್ಸಾಕ್ಷಿ ಮದುವೆ’ ಪ್ರಮಾಣವಚನ ಸ್ವೀಕರಿಸಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಅಂತರ್ಜಾತಿ ಜೋಡಿ

Date:

ಇತ್ತೀಚೆಗೆ ಅಂತರ್‌ ಜಾತಿ ಜೋಡಿಯೊಂದು ‘ಮನಸ್ಸಾಕ್ಷಿ ಮದುವೆ’ ಪ್ರಮಾಣವಚನ ಸ್ವೀಕರಿಸಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದೆ. ಜೂನ್ 12ರಂದು ಗುರುವಾರ ಹಾಸನದ ಪಾಲಿಕ ಕನ್ವೆನ್ಷನ್ ಹಾಲ್‌ನಲ್ಲಿ ನಡೆದ ಅಂತರ್ಜಾತಿ ಸರಳ ವಿವಾಹ ಸಮಾರಂಭದಲ್ಲಿ ವೀಕ್ಷಿತಾ ಮತ್ತು ಲೋಕಕಿರಣ್ ಇಬ್ಬರೂ ‘ಮನಸ್ಸಾಕ್ಷಿ ಮದುವೆ’ ಪ್ರಮಾಣವಚನ ಸ್ವೀಕರಿಸಿದರು.

ವೀಕ್ಷಿತಾ ಚನ್ನರಾಯಪಟ್ಟಣ ಮೂಲದವರಾಗಿದ್ದು, ಲೋಕಕಿರಣ್ ಹಾಸನದವರಾಗಿದ್ದಾರೆ. ಪರಸ್ಪರ ಪ್ರೇಮಿಸುತ್ತಿದ್ದ ಈ ಜೋಡಿ ಬಾಳ ಸಂಗಾತಿಗಳಾಗಲು ನಿಶ್ಚಯಿಸಿ ಅಂತರ್ ಜಾತಿ ವಿವಾಹವಾಗಿ ದಾಂಪತ್ಯ ಜೀವನಕ್ಕೆ ಕಾಲಿಡಲು ತೀರ್ಮಾನಿಸಿದ್ದರು. ಈ ಸರಳ ಮದುವೆ ಸಮಾರಂಭದಲ್ಲಿ ವಧು ವರರಿಬ್ಬರಿಗೂ ಲೇಖಕಿ, ಸಾಮಾಜಿಕ ಕಾರ್ಯಕರ್ತೆ ರೂಪಾ ಹಾಸನ ‘ಮನಸ್ಸಾಕ್ಷಿ ಮದುವೆ ಪ್ರಮಾಣ ವಚನ’ ಬೋಧಿಸುವ ಮೂಲಕ ಶುಭ ಹಾರೈಸಿ ಮಾತನಾಡಿದರು.

ಇದನ್ನು ಓದಿದ್ದೀರಾ? ಸಾಂವಿಧಾನಿಕ ಪ್ರತಿಜ್ಞೆಯಡಿ ಮದುವೆ; ಸ್ಥಳೀಯರ ಚಿತ್ತ, ಹೊಸಮನಿ ಕುಟುಂಬದ ಸುತ್ತ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಸ್ಕೃತಿ ಚಿಂತಕರಾದ ಪ್ರೊ. ಕಾಳೇಗೌಡ ನಾಗವಾರ ಮಾತನಾಡಿ, “ಇಂತಹ ಸರಳ ಮದುವೆಗಳು ಎಲ್ಲರಿಗೂ ಮಾದರಿಯಾಗಬೇಕು. ದುಬಾರಿ ವೆಚ್ಚದ ಆಡಂಬರದ ಮದುವೆ ಸಮಾರಂಭಗಳು ಸಮಾಜದಲ್ಲಿ ಅಸಮಾನತೆಗಳನ್ನು ಸೃಷ್ಟಿಸುತ್ತವೆ” ಎಂದರು.

ಇನ್ನು ಅಂತರ್ಜಾತಿ ವಿವಾಹದ ಬಗ್ಗೆ ಮಾತನಾಡಿದ ಸಿಪಿಐ(ಎಂ) ಮುಖಂಡ ಧರ್ಮೇಶ್, “ಸಮಾಜದಲ್ಲಿ ಇಂತಹ ಅಂತರ್ಜಾತಿ ವಿವಾಹಗಳು ಹೆಚ್ಚಾಗಬೇಕು. ಪ್ರಜ್ಞಾವಂತರಾದ ನಾವುಗಳು ಮತ್ತು ಸಮಾಜ ಅಂತರ್ಜಾತಿ ಜೋಡಿಗಳ ಬೆಂಬಲಕ್ಕೆ ನಿಂತು ಅವರಲ್ಲಿ ಬದುಕಿನ ಭರವಸೆ ಮೂಡಿಸಬೇಕಿದೆ” ಎಂದು ಹೇಳಿದರು.

ಮನಸ್ಸಾಕ್ಷಿ ಮದುವೆ1

“ಸಮಾಜದಲ್ಲಿ ಮಾತ್ರವಲ್ಲದೆ ದಾಂಪತ್ಯದಲ್ಲಿಯೂ ಗಂಡು-ಹೆಣ್ಣು ಮೇಲುಕೀಳು‌ ಭಾವನೆ ಇರದೆ, ಕುಟುಂಬದಲ್ಲಿಯೂ ಪ್ರಜಾಪ್ರಭುತ್ವ ಭಾವನೆ ನೆಲೆಸಬೇಕಿದೆ. ಪ್ರೀತಿಸಿ ಮದುವೆಯಾದವರು ಅತ್ಯಂತ ಜವಾಬ್ದಾರಿಯಿಂದ ಮಾದರಿಯಾಗಿ ಬದುಕಬೇಕು” ಎಂದು ಕಿವಿಮಾತು ಹೇಳಿದರು.

ಅಂತಾರಾಷ್ಟ್ರೀಯ ಚಿತ್ರಕಲಾವಿರಾದ ಕೆ.ಟಿ ಶಿವಪ್ರಸಾದ್, ಮಹದೇವಮ್ಮ ಮತ್ತು ಸರೋಜಮ್ಮ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಲೋಕಕಿರಣ್ ತಂದೆ, ಸಾಹಿತಿಗಳಾದ ಹರೀಶ್ ಕಟ್ಟೆ ಬೆಳಗುಲಿ ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿದರು. ಡಿವೈಎಫ್ಐ ಪೃಥ್ವಿ ಎಂ.ಜಿ ನಿರ್ವಹಿಸಿದರು.

ಮನಸ್ಸಾಕ್ಷಿ ಮದುವೆ2

ಸಾಹಿತಿ ಜ.ನಾ ತೇಜಶ್ರೀ, ದಲಿತ ಮುಖಂಡ ಕೃಷ್ಣದಾಸ್, ಎಂ.ಬಿ ಪುಟ್ಟಸ್ವಾಮಿ, ಡಾ. ಸೋಮಣ್ಣ ಸೇರಿದಂತೆ ಅನೇಕರು ವಧು-ವರರಿಗೆ ಶುಭ ಹಾರೈಸಿ ಮಾತನಾಡಿದರು. ಡಾ.ಹಂಪನಹಳ್ಳಿ ತಿಮ್ಮೇಗೌಡ, ಡಾ. ಜಯಶಂಕರ್ ಹಲಗೂರ್, ಎಚ್.ಕೆ ಸಂದೇಶ್, ಟಿ.ಆರ್ ವಿಜಯ್ ಕುಮಾರ್ ಸೇರಿದಂತೆ ಹಲವು ಗಣ್ಯರು, ಸಂಬಂಧಿಕರು ವಿವಾಹಕ್ಕೆ ಸಾಕ್ಷಿಯಾದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...