ಮೈಸೂರು | ಏ. 5 ಮತ್ತು 6 ರಂದು ‘ ಮಾನವ ಮೈತ್ರಿ ಬೌದ್ಧ ಸಮ್ಮೇಳನ ‘

Date:

ಮೈಸೂರಿನ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಉರಿಲಿಂಗ ಪೆದ್ದಿ ಮಠದ ಜ್ಞಾನ ಪ್ರಕಾಶ ಸ್ವಾಮೀಜಿ ಮಾತನಾಡಿ ಏಪ್ರಿಲ್ 5 ಮತ್ತು 6 ರಂದು ಸಾಹಿತ್ಯ ಅಕಾಡೆಮಿ, ವಿಶ್ವ ಮೈತ್ರಿ ಬುದ್ಧ ವಿಹಾರ , ತಥಾಗತ ಬುದ್ಧ ವಿಹಾರ ನಂಜನಗೂಡು, ಮೈಸೂರು ವಿಶ್ವವಿದ್ಯಾಲಯದ ಸಂಶೋಧಕರ ಸಂಘ ಮತ್ತು ದಲಿತ ವಿದ್ಯಾರ್ಥಿ ಒಕ್ಕೂಟದ ಸಹಯೋಗದಲ್ಲಿ ‘ ಮಾನವ ಮೈತ್ರಿ ಬೌದ್ಧ ಸಮ್ಮೇಳನ ‘ ಮಾನಸ ಗಂಗೋತ್ರಿವಿಶ್ವ ವಿದ್ಯಾಲಯದ ವಿಜ್ಞಾನ ಭವನದಲ್ಲಿ ನಡೆಯಲಿದೆ ಎಂದರು.

ಮಾನವ ಮೈತ್ರಿ ಬೌದ್ಧ ಸಮ್ಮೇಳನ ‘ Ambedkarites buddhist conference ‘ ಮೂಲಕ ‘ ಮಾನವ ಮೈತ್ರಿ ‘ ಕಮ್ಮಟವನ್ನು ಏರ್ಪಡಿಸಲಾಗಿದೆ. ವೇದಿಕೆಯಲ್ಲಿ ನಾಡಿನ ಹೆಸರಾಂತ ಚಿಂತಕರು, ಹೋರಾಟಗಾರರು, ಬರಹಗಾರರು, ರಂಗಕರ್ಮಿಗಳು, ಗಾಯಕರು ಜನ ಚಳುವಳಿಯಲ್ಲಿ ತೊಡಗಿಸಿಕೊಂಡ ನಾಡಿನ ಹಿರಿಯರು, ಮಹಿಳೆಯರು, ಯುವಕ, ಯುವತಿಯರು ಹಾಗೂ ಜನಪ್ರತಿನಿದಿಗಳು ಭಾಗಿಯಾಗಲಿದ್ದಾರೆ.

ಅಂಬೇಡ್ಕರ್ ಸಾಹಿತ್ಯ ಅಕಾಡೆಮಿಯು 2024 ರ ಅಕ್ಟೋಬರ್ 3 ರಂದು ಆರಂಭಿಸಿದ ‘ ಅಂಬೇಡ್ಕರ್ ಅರಿವಿನ ಮಾರ್ಗದಲ್ಲಿ ಧಮ್ಮ ಪಯಣ ‘ ಎಂಬ ವಿನೂತನ ಅರಿವಿನ ಪಯಣವನ್ನು ಹಳ್ಳಿ ಹಳ್ಳಿಗಳಲ್ಲಿ ಎಲ್ಲಾ ಜನ ಸಮೂಹಗಳನ್ನು ಒಳಗೊಂಡಂತೆ, ನಾಡಿನ ವಿವಿಧ ಭಾಗಗಳಲ್ಲಿ ಸಂಚರಿಸಿ, 10,000 ಕಿಮೀಗಳ ಪಯಣವನ್ನು ಪೂರ್ಣಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೀಗೆ, 150 ಗ್ರಾಮ, 35,000 ಕುಟುಂಬ, 3 ಲಕ್ಷಕ್ಕೂ ಅಧಿಕ ಜನರನ್ನು ನೇರವಾಗಿ ಸಂಪರ್ಕಿಸುತ್ತಾ, ಪ್ರತಿ ಮನೆ ಮನೆಯ ಮುಂದೆ ಸಾಗುತ್ತಾ , ಲಕ್ಷಾಂತರ ಅರಿವಿನ ದೀಪಗಳನ್ನು ಹಚ್ಚಲಾಗಿದೆ. ಮಹಿಳೆಯರು, ಮಕ್ಕಳು ಹಾಗೂ ದುಡಿಯುವ ವರ್ಗವನ್ನು ಒಳಗೊಳ್ಳುತ್ತಾ, ಈ ಅರಿವಿನ ಮಾರ್ಗವನ್ನು ಸಾಮಾನ್ಯ ಜನರೆಡೆಗೆ ಕೊಂಡಯ್ಯಲಾಗಿದೆ.

ಬಹು ಮುಖ್ಯವಾಗಿ ” ಮಾನವ ಪ್ರೇಮವನ್ನೇ ತನ್ನ ವಸ್ತುವನ್ನಾಗಿಸಿಕೊಂಡು, ಹಳ್ಳಿಗಳಲ್ಲಿ ವ್ಯಾಪಕವಾಗಿರುವ ಅಸ್ಪೃಶ್ಯತೆ, ಜಾತಿಯತೆ, ಕುಡಿತ, ಜೂಜು, ಮಾನವ ಸಂಬಂಧದ ಬಿರುಕುಗಳು, ಕಲಹಗಳು, ದ್ವೇಷ, ವೈಷಮ್ಯಗಳ ವಿರುದ್ಧ ಜನಜಾಗೃತಿಯನ್ನು ಮೂಡಿಸುತ್ತಾ, ಬುದ್ಧನ ಶಾಂತಿ ಕರುಣೆ ಮೈತ್ರಿಗಳನ್ನು ಸಮುದಾಯಗಳ ನಡುವೆ ಬಿತ್ತುತ್ತಾ, ಸಾಮಾಜಿಕ ಸಾಮರಸ್ಯದ ಹಾದಿಯಲ್ಲಿ ನೈಜ ಸತ್ಯಗಳು, ಭವಿಷ್ಯದಲ್ಲಿ ಮಾನವ ಪ್ರೇಮದ ಹಾಜರಿ, ಹಿರಿಯ ತಲೆಮಾರಿನಿಂದ ಕಿರಿಯ ತಲೆಮಾರಿಗೆ ಆಲೋಚನೆಗಳನ್ನು ಹಸ್ತಾಂತರಿಸುವ ಬಗೆ, ನೈಜ ಜನ ಚಳುವಳಿಗಳ ಜೀವಂತಿಕೆಯ ಬಗೆ, ಬುದ್ಧ ಮತ್ತು ಆಲೋಚನೆಗಳು, ಅಂಬೇಡ್ಕರ್ ರವರ ದೃಷ್ಟಿ ಕೋನ ಹೀಗೆ ಜನ ಸಾಮಾನ್ಯರಲ್ಲಿ ಸದಾ ಜಾಗೃತಿಯನ್ನು ಬಿತ್ತುವುದೇ ಈ ಕಾರ್ಯಕ್ರಮದ ಧ್ಯೇಯವಾಗಿದೆ ” ಎಂದರು.

150 ಗ್ರಾಮಗಳಲ್ಲಿ ನಮ್ಮೊಟ್ಟಿಗೆ ನಿರಂತರವಾಗಿ ಹೆಜ್ಜೆ ಹಾಕಿದ, ಏಳು ಬೀಳುಗಳಲ್ಲಿ ಜೊತೆ ಇದ್ದ, ತಮ್ಮ ಕುಟುಂಬ ಸಮೇತರಾಗಿ ದುಡಿದ. ಹಸಿದಾಗ ಅನ್ನ ಹಾಕಿದ ಸಾಮಾನ್ಯ ಜನರೇ ರೂಪಿಸಿರುವ ಕಾರ್ಯಕ್ರಮ ಇದಾಗಿದ್ದು ಮಾನವ ಜಗತ್ತಿಗೆ ತಮ್ಮ ಚಿಂತನೆಗಳನ್ನು ಬಿತ್ತಬೇಕಿದೆ. ಹಾಗಾಗಿ, ಸಹಸ್ರಾರು ಸಂಖ್ಯೆಯಲ್ಲಿ ಜನ ಭಾಗವಹಿಸಬೇಕಾಗಿ ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ರೈತ ಕುಟುಂಬಗಳಿಗೆ ಅನ್ಯಾಯ; ಅಹೋರಾತ್ರಿ ಧರಣಿ

ಸಮ್ಮೇಳನದ ಪೋಸ್ಟರ್ ನ್ನು ಉರಿಲಿಂಗ ಪೆದ್ದಿ ಮಠದ ಜ್ಞಾನ ಪ್ರಕಾಶ ಸ್ವಾಮೀಜಿ, ಮಾಜಿ ಮೇಯರ್ ಪುರುಷೋತ್ತಮ, ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ ದೀಪಕ್, ಅಹಿಂದ ಜವರಪ್ಪ, ಸಂಯೋಜಕ ಮಲ್ಕುಂಡಿ ಮಹಾದೇವ ಸ್ವಾಮಿ ಬಿಡುಗಡೆ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...