ಉಡುಪಿ | ಮುಂಡೂರು ಗ್ರಾಮದ ರಸ್ತೆ ಅಭಿವೃದ್ಧಿಗೆ ಎರಡು ಬಾರಿ ಅನುದಾನ ಬಿಡುಗಡೆಯಾದರೂ ರಸ್ತೆ ನಿರ್ಮಾಣವಾಗಿಲ್ಲ !

Date:

ಉಡುಪಿ ಜಿಲ್ಲೆಯ ಕಾರ್ಕಳ ವಿಧಾನಸಭಾ ವ್ಯಾಪ್ತಿಯ ಮುಂಡೂರು ಗ್ರಾಮದ ಮುಲ್ಲಡ್ಕದಿಂದ ಪಾದೆಬೆಟ್ಟು, ಬೋಳ ಪದವು ಸಂಪರ್ಕಿಸುವ ರಸ್ತೆ ತೀರಾ ಹದಗೆಟ್ಟಿದ್ದು ಶಾಲೆಗೆ ತೆರಳುವ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಹೊಂಡ ಗುಂಡಿಗಳ ನಡುವೆ ಎದ್ದುಬಿದ್ದು ಸಾಗಬೇಕಾಗಿದೆ. ಈ ರಸ್ತೆ ಅಭಿವೃದ್ಧಿಗೆ ಎರಡು ಬಾರಿ ಅನುದಾನ ಬಿಡುಗಡೆಯಾದರೂ ಜಾಗದ ತಕರಾರಿನಿಂದಾಗಿ ಅಭಿವೃದ್ಧಿ ಸಾಧ್ಯವಾಗಿಲ್ಲ.

ಮುಲ್ಲಡ್ಕ ಶಾಲೆಯ ವರೆಗೆ ಹಿಂದಿನಿಂದಲೇ ಡಾಮರು ಇತ್ತು. ಈ ರಸ್ತೆ ಹದಗೆಟ್ಟಾಗ ಕಾಮಗಾರಿ ನಡೆಸಲು ಮುಂದಾದರು. ಜನರ ಬೇಡಿಕೆಗೆ ಸ್ಪಂದಿಸಿದ ಕಾರ್ಕಳ ಶಾಸಕರಾದ ವಿ.ಸುನಿಲ್ ಕುಮಾರ್‌ರವರು ಎರಡು ಬಾರಿ 25 ಲಕ್ಷ ರೂ.ಗಳ ಅನುದಾನವನ್ನು ಮಂಜೂರು ಮಾಡಿಸಿದರು. ಆದರೆ, ಖಾಸಗಿ ಮಾಲಿಕರ ಜಟಾಜಟಿಯಿಂದ ರಸ್ತೆಗೆ ಡಾಮರು ಭಾಗ್ಯ ದೂರವಾಯಿತು. ಇದೀಗ ಖಾಸಗಿ ಮಾಲಿಕರು ಜಾಗದ ವಿಚಾರವಾಗಿ ಕೋರ್ಟು ಮೆಟ್ಟಿಲೇರಿದ್ದು ಗ್ರಾಮದ ಜನರಿಗೆ ರಸ್ತೆಯಿಲ್ಲದಂತಾಗಿದೆ.

ಮುಲ್ಲಡ್ಕದಿಂದ ಬೋಳ ಪದವು ಭಾಗವನ್ನು ಸಂಪರ್ಕಿಸುವ 6 ಕಿ.ಮೀ ಉದ್ದದ ರಸ್ತೆ ಇದಾಗಿದ್ದು. ಗ್ರಾಮಸ್ಥರು ಕಾಲು ನಡಿಗೆ, ಸ್ವಂತ ವಾಹನ, ಬಾಡಿಗೆ ವಾಹನಗಳಲ್ಲಿ ಸಾಗುತ್ತಾರೆ. ಸಮರ್ಪಕವಾದ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮಳೆಗಾಲದಲ್ಲಿ ಮಳೆ ನೀರು ರಸ್ತೆಯಲ್ಲಿ ಹರಿದು ದೊಡ್ಡ ಗಾತ್ರದಲ್ಲಿ ಹೊಂಡಗಳು ನಿರ್ಮಾಣವಾಗಿ ವಾಹನ ಸವಾರರು ಸಂಚರಿಸಲು ಅಸಾಧ್ಯ ಎಂಬಂತಾಗಿದೆ. ರಸ್ತೆಯಲ್ಲಿಯೇ ದೊಡ್ಡಗಾತ್ರದ ಬಂಡೆಕಲ್ಲು ಎದ್ದು ಬಂದಿದ್ದು ದ್ವಿಚಕ್ರ ವಾಹನ ಸವಾರರು ಪ್ರಯಾಣಿಸಲು ಕಷ್ಟಕರವಾಗಿದೆ. ಈ ಭಾಗದ ರಸ್ತೆಯಲ್ಲಿ ಈಗ ಯಾವುದೇ ಬಾಡಿಗೆ ವಾಹನಗಳು ಬರಲು ಹಿಂದೇಟು ಹಾಕುವಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಲ್ಲಡ್ಕ ಪಾದೆ ಬೆಟ್ಟುವಿನಲ್ಲಿ ಧೂಮಾವತಿ ದೈವಸ್ಥಾನ, ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆ ಇದ್ದು ಇಲ್ಲಿಗೆ ನಿತ್ಯ ನೂರಾರು ವಿದ್ಯಾರ್ಥಿಗಳು ಬರುತ್ತಾರೆ. ವಿದ್ಯಾರ್ಥಿಗಳು, ಅವರನ್ನು ಶಾಲೆಗೆ ಕರೆತರುವ ಆಟೋ ರಿಕ್ಷಾಗಳು, ಶಾಲಾ ವಾಹನಗಳು ಸರ್ಕಸ್ ಮಾಡಿಕೊಂಡು ಸಾಗುವುದು ಮಾಮೂಲಾಗಿದೆ. ಮಳೆಗಾಲದಲ್ಲಿ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೆ ವಾಹನ ಚಾಲನೆ ಮಾಡುವುದು ಕಷ್ಟಕರವಾಗಿದೆ. ಹಲವು ವರ್ಷಗಳಿಂದ ಇದೇ ಸ್ಥಿತಿಯಲ್ಲಿದೆ ಎನ್ನುತ್ತಾರೆ ಶಾಲಾ ವಾಹನ ಚಾಲಕ ಶೇಖ‌ರ್. ಯಾರಿಗಾದರೂ ಅನಾರೋಗ್ಯ ಉಂಟಾದರೆ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಹರಸಾಹಸ ಮಾಡಬೇಕಾಗಿದೆ.

ಈ ಬಗ್ಗೆ ಸ್ಥಳಿಯರಾದ ರಾಜೇಶ್ ಪ್ರತಿಕ್ರಿಯಿಸಿದ್ದು, ರಸ್ತೆಯ ಸಮಸ್ಯೆಯಿಂದ ದಿನ ನಿತ್ಯದ ಗೋಳು ತಪ್ಪಿದ್ದಿಲ್ಲ, ಜನಪ್ರತಿನಿಧಿಗಳು ಹೆಸರಿಗೆ ಮಾತ್ರ ಯಾವುದೇ ಉಪಕಾರಕ್ಕಿಲ್ಲ, ಸಮಸ್ಯೆ ಎಂದು ಬಂದಾಗ ಯಾರ ಬಳಿ ಹೋಗುವುದು ಸಂಬಂಧಪಟ್ಟ ಇಲಾಖೆಯವರು ಆದಷ್ಟು ಬೇಗ ಇದಕ್ಕೊಂದು ‌ಪರಿಹಾರ ನೀಡಬೇಕು ಎಂದು ಹೇಳಿದರು.

ಈ ಬಗ್ಗೆ ಮುಂಡೂರು ಗ್ರಾ.ಪಂ ಸದಸ್ಯರಾದ ಲೋಕೇಶ್ ಪೂಜಾರಿ ಪ್ರತಿಕ್ರಿಯೆಸಿದ್ದು, ದುರವಸ್ಥೆಯಲ್ಲಿರುವ ಮುಲ್ಲಡ್ಕ ರಸ್ತೆಯ ಅಭಿವೃದ್ಧಿಗಾಗಿ ಶಾಸಕರು ಎರಡು ಬಾರಿ ಅನುದಾನ ಮಂಜೂರುಗೊಳಿಸಿದರೂ ಖಾಸಗಿ ಜಮೀನು ಮಾಲಿಕರ ಸಮಸ್ಯೆಯಿಂದ ಕಾಮಗಾರಿಗೆ ತೊಡಕಾಗಿದೆ. ಜಾಗದ ವಿಚಾರ ನ್ಯಾಯಾಲಯದಲ್ಲಿದ್ದು ಅಭಿವೃದ್ಧಿಗೆ ತೊಡಕಾಗಿದೆ. ರಸ್ತೆ ಡಾಮರೀಕರಣಕ್ಕೆ ಪ್ರಯತ್ನಗಳು ನಡೆಯುತ್ತಿದೆ ಎಂದು ಹೇಳಿದರು.

ಒಟ್ಟಿನ ಕೇವಲ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿಗಳಿಗೆ ಮಾತ್ರವಲ್ಲದೆ ಗ್ರಾಮೀಣ ಪ್ರದೇಶ ಮೂಲೆ ಮೂಲೆಗೂ ಅತ್ಯುತ್ತಮ ರಸ್ತೆ ಸಂಪರ್ಕ ಕಲ್ಪಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಆದಷ್ಟು ಬೇಗ ಮುಂಡೂರು ಗ್ರಾಮದ ಜನರಿಗೆ ರಸ್ತೆ ವ್ಯವಸ್ಥೆ ಮಾಡುವ ಮೂಲಕ‌ ಗ್ರಾಮೀಣ ನಾಗರಿಕ ಸಮಸ್ಯೆಗಳಿಗೆ ಪರಿಹಾರ ನೀಡಬೇಕಾಗಿದೆ.

WhatsApp Image 2023 08 22 at 3.23.15 PM
ಶಾರೂಕ್ ತೀರ್ಥಹಳ್ಳಿ
+ posts

ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಶಾರೂಕ್ ತೀರ್ಥಹಳ್ಳಿ
ಶಾರೂಕ್ ತೀರ್ಥಹಳ್ಳಿ
ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...