ಮಂಡ್ಯ | ಕೆಆರ್‌ಎಸ್‌ನಿಂದ ನದಿಗೆ 90,000 ಕ್ಯೂಸೆಕ್ ನೀರು ಬಿಡುಗಡೆ; ರಂಗನತಿಟ್ಟು ಮುಳುಗಡೆ

Date:

ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಹೇಮಾವತಿ, ಕಾವೇರಿ, ಕಬಿನಿ ನದಿಗಳು ತುಂಬಿ ಹರಿಯುತ್ತಿವೆ. ಗೊರೂರು ಜಲಾಶಯದಿಂದ ಹೇಮಾವತಿ ನದಿಗೆ ಹೆಚ್ಚಿನ ನೀರು ಹರಿಬಿಡಲಾಗಿದೆ. ಕೆಆರ್‌ಎಸ್‌ ಕೂಡ ಭರ್ತಿಯಾಗಿದ್ದು, 90,000 ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಹರಿಸಲಾಗುತ್ತಿದೆ. ಪರಿಣಾಮ, ನದಿ ತುಂಬಿ ಹರಿಯುತ್ತಿದ್ದು, ನದಿ ತೀರದ ಕೃಷಿ ಪ್ರದೇಶ ಜಲಾವೃತಗೊಂಡಿದೆ. ಹಲವೆಡೆ ಪ್ರವಾಹ ಭೀತಿ ಎದುರಾಗಿದೆ.

ಕಾವೇರಿ ನದಿಗೆ ಹೆಚ್ಚಿನ ಹರಿ ಹರಿಸಿರುವುದರಿಂದ ಶ್ರೀರಂಗಪಟ್ಟಣ ರಂಗನತಿಟ್ಟು ಪಕ್ಷಿಧಾಮ ಜಲಾವೃತಗೊಂಡಿದೆ. ಅಲ್ಲಿನ, ಅರಣ್ಯ ಇಲಾಖೆ ಕಚೇರಿಗೂ ಜಲಾವೃತಗೊಂಡಿದ್ದು, ಪ್ರವಾಸಿಗರ ಭೇಟಿಯನ್ನು ನಿರ್ಬಂಧಿಸಲಾಗಿದೆ. ಬೋಂಟಿಂಗ್ಅನ್ನು ನಿಷೇಧಿಸಲಾಗಿದೆ.

ಇನ್ನು, ಗಂಜಾಂನಲ್ಲಿರುವ ನಿಮಿಷಾಂಬ ದೇಗುಲದ ಸ್ನಾನಘಟ್ಟವೂ ಮುಳುಗಡೆಯಾಗಿದೆ. ಭಕ್ತರು ನದಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ. ಕಾವೇರಿ ನದಿ ತಂಡೆಯಲ್ಲಿನ ಹಳ್ಳಿಗಳ ಜನರು ಎಚ್ಚರಿಕೆಯಿಂದಿರಬೇಕು. ನದಿಗೆ ಜಾನುವಾರುಗಳನ್ನು ಇಳಿಸಬಾರದು ಎಂದು ಕಾವೇರಿ ನೀರು ನಿಗಮ ಮನವಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಆರ್‌ಎಸ್‌ ಮಾತ್ರವಲ್ಲದೆ, ಕಬಿನಿ ಜಲಾಶಯದಿಂದಲೂ 30,000 ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗಿದ್ದು, ಟಿ ನರಸೀಪುರದಲ್ಲಿ ಕಬಿನಿ ನೀರು ಕಾವೇರಿ ಜೊತೆ ಸೇರುವುದರಿಂದ ಕೊಳ್ಳೇಗಾಲ ತಾಲೂಕಿನಲ್ಲಿ ಪ್ರವಾಹ ಭೀತಿ ಎದುರಾಗಿದೆ. ತಾಲೂಕಿನ ಹಳೇ ಹಂಪಾಪುರ, ಮುಳ್ಳೂರು, ಹಳೇ ಅಣಗಳ್ಳಿ, ದಾಸನಪುರ ಸೇರಿದಂತೆ ಒಂಬತ್ತು ಗ್ರಾಮಗಳು ಪ್ರವಾಹ ಭೀತಿ ಎದುರಿಸುತ್ತಿವೆ. ಈ ಗ್ರಾಮಗಳ ನೂರಾರು ಎಕರೆ ಕೃಷಿ ಭೂಮಿ ಜಲಾವೃತಗೊಂಡಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...