ಮಂಡ್ಯ | ಜಾತಿ ಜನಗಣತಿ ವರದಿ ಅಂಗೀಕರಿಸಿ, ಶೀಘ್ರ ಅನುಷ್ಠಾನಗೂಳಿಸಿ: ಗುರುಪ್ರಸಾದ್ ಕೆರಗೋಡು ಆಗ್ರಹ

Date:

ರಾಜ್ಯ ಸರ್ಕಾರವು ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ, ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಜಾತಿ ಜನಗಣತಿ ವರದಿ ಸ್ವೀಕರಿಸಿದ್ದನ್ನು ದಲಿತ ಸಂಘರ್ಷ ಸಮಿತಿ ಸ್ವಾಗತಿಸಿ, ಅಭಿನಂದಿಸುತ್ತದೆ. ಜತೆಗೆ ಕೂಡಲೇ ಜಾತಿ ಜನಗಣತಿ ವರದಿ ಅಂಗೀಕರಿಸಿ, ಶೀಘ್ರ ಅನುಷ್ಠಾನಗೂಳಿಸಬೇಕು ಎಂದು ದಸಂಸ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು ಒತ್ತಾಯಿಸಿದರು.

ಮಂಡ್ಯ ನಗರದಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಜಾತಿಗಣತಿ ವರದಿ ಅಂಗೀಕರಿಸಿ ಕೂಡಲೇ ಅನುಷ್ಠಾನಗೊಳಿಸುವಂತೆ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು. ಬಳಿಕ ದಲಿತ, ಹಿಂದುಳಿದ ವರ್ಗಗಳ ಮೀಸಲಾತಿ ಮಿತಿ ಪ್ರಮಾಣವನ್ನು ಶೇ.50 ರಿಂದ ಶೇ.75ಕ್ಕೆ ಹೆಚ್ಚಳ ಮಾಡಲು ಅಗತ್ಯ ಕ್ರಮ ಕೈಗೊಳ್ಳಲು ಒತ್ತಾಯಿಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಮಾಡಿದರು.

“ರಾಜ್ಯದ ಜನಸಂಖ್ಯೆಯ ಬಹುಭಾಗವಾಗಿರುವ ಆದಿವಾಸಿಗಳು, ಅಲೆಮಾರಿಗಳು, ದಲಿತರು, ಹಿಂದುಳಿದವರು ಅಲ್ಪಸಂಖ್ಯಾತರು ಮುಂತಾದ ಶೋಷಿತ ಸಮುದಾಯಗಳು ಹಲವು ದಶಕಗಳಿಂದ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮಾಡುತ್ತ ಬಂದಿದ್ದವು. ಆದರೆ ಜಾತಿ ಕೇಂದ್ರಿತ ಪಕ್ಷ ರಾಜಕಾರಣವು ಈ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ಔದ್ಯೋಗಿಕ ಸ್ಥಿತಿಗತಿಗಳನ್ನು ಉತ್ತಮಪಡಿಸುವ ಹೊಣೆಗಾರಿಕೆಯಿಂದ ನುಣುಚಿಕೊಳ್ಳುತ್ತಿದ್ದವು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಮಾಜದಲ್ಲಿ ಅಸಮಾನತೆಯ ಕಂದಕಗಳು ಮತ್ತಷ್ಟು ಹೆಚ್ಚಾಗುತ್ತಲೇ ಬರುತ್ತಿವೆ. ಈ ನಿಟ್ಟಿನಲ್ಲಿ ‘ಸಾಮಾಜಿಕ ನ್ಯಾಯʼದ ಗುರಿಗಳನ್ನು ತಲುಪಲು ಕಾಲಕಾಲಕ್ಕೆ ಜಾತಿ ಜನಗಣತಿಯ ನಿಖರ ವಿವರಗಳನ್ನು ಆಧರಿಸಿ ಮೀಸಲಾತಿ ಹೆಚ್ಚಳ ಹಾಗೂ ಹಿಂದುಳಿದ ದುರ್ಬಲ ತಳಸಮುದಾಯಗಳ ಉನ್ನತಿಗಾಗಿ ಇನ್ನಿತರ ಯೋಜನೆ, ಕಾರ್ಯಕ್ರಮಗಳನ್ನು ರೂಪಿಸುವುದು ಅನಿವಾರ್ಯ. ಈ ಕೊರತೆಯನ್ನು ತಮ್ಮ ಸರ್ಕಾರವು ನೀಗಿಸಲೊರಟಿರುವುದು ನಿಜಕ್ಕೂ ಅಭಿನಂದನಾರ್ಹವಾದುದು” ಎಂದರು.

“ಜಾತಿ ಜನಗಣತಿ ವರದಿ ಸ್ವೀಕಾರಗೊಂಡ ಕೂಡಲೇ ಕೆಲವು ಪಟ್ಟಭದ್ರ ಜಾತಿವಾದಿ ವ್ಯಕ್ತಿಗಳು ಹಾಗೂ ರಾಜಕೀಯ ಪಕ್ಷಗಳು, ಸಂಘ ಸಂಸ್ಥೆಗಳು ತೀವ್ರ ಅಸಮಧಾನ ಹೊರಹಾಕಿ ವಿರೋಧ ವ್ಯಕ್ತಪಡಿಸುತ್ತಿರುವುದು ಕಳವಳಕಾರಿ ಸಂಗತಿ. ಈ ಪಟ್ಟಭದ್ರ ಜಾತಿವಾದಿಗಳು ಜಾತಿ ಜನಗಣತಿ ವರದಿಯನ್ನು ತಿರಸ್ಕರಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರುತ್ತಿರುವುದು” ಖಂಡನೀಯ ಎಂದರು.

“ಸಾಮಾಜಿಕ ನ್ಯಾಯ ವಿರೋಧಿಯಾದ ಅಸಮಾಧಾನಗಳನ್ನು, ವಿರೋಧ ಪ್ರತಿಭಟನೆಗಳನ್ನು ತಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸದೆ ‘ಸಾಮಾಜಿಕ ನ್ಯಾಯ’ದ ಪರವಾಗಿ ದೃಢ ನಿಲುವು ತಾಳಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಗೌರಿ ಹಂತಕರಿಗೆ ಸನ್ಮಾನ; ಜಾಮೀನು ವಜಾಕ್ಕೆ ಆಗ್ರಹ

“ಜಾತಿ ಜನಗಣತಿ ವರದಿಯ ಅಂಕಿ ಅಂಶಗಳ ಪ್ರಕಾರ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗ ಹಾಗೂ ಇತರ ಹಿಂದುಳಿದ ವರ್ಗಗಳ ಈಗಿರುವ ಶೇ.50ರಷ್ಟು ಶೈಕ್ಷಣಿಕ, ಔದ್ಯೋಗಿಕ ಮೀಸಲಾತಿ ಮಿತಿಯ ಪ್ರಮಾಣವನ್ನು ಶೇ.75ಕ್ಕೆ ಹೆಚ್ಚಳ ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದರ ಮೂಲಕ ಕರ್ನಾಟಕ ರಾಜ್ಯದ ‘ಸಾಮಾಜಿಕ ನ್ಯಾಯ’ದ ಪರಂಪರೆಯನ್ನು ತಾವು ಮತ್ತು ತಮ್ಮ ಸರ್ಕಾರ ಮತ್ತೊಮ್ಮೆ ಎತ್ತಿ ಹಿಡಿದು ದೇಶಕ್ಕೇ ಮಾದರಿ ಆಡಳಿತ ನೀಡಬೇಕು” ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಹುಲ್ಕೆರೆ ಮಹಾದೇವ, ಕೆ ನಾಗರಾಜ್, ವೈ ರಾಜಶೇಖರ್, ಬಿ ಜೆ ನಾಗರಾಜ್, ಎಂ ಮಹದೇವಪ್ಪ, ಸೋಮಶೇಖರ್ ಹೆಚ್ ಪಿ, ಮಂಚಯ್ಯ ಚಂದ್ರಶೇಖರ್ ಸೇರಿದಂತೆ ಮೊದಲಾದವರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...