ಮಂಡ್ಯ | 21 ವರ್ಷಗಳ ಬಳಿಕ ಪಿಯುಸಿ ಪಾಸ್‌ ಮಾಡಿದ ಅಂಗನವಾಡಿ ಶಿಕ್ಷಕಿ

Date:

21 ವರ್ಷಗಳ ಹಿಂದೆ ಪಿಯು ವ್ಯಾಸಂಗವನ್ನು ಅರ್ಧಕ್ಕೆ ಕಡಿತಗೊಳಿಸಿದ್ದ ಅಂಗನವಾಡಿ ಶಿಕ್ಷಕಿಯೊಬ್ಬರು ಇದೀಗ ಪಿಯುಸಿ ಪರೀಕ್ಷೆ ಬರೆದು, ಪಾಸ್‌ ಆಗಿದ್ದಾರೆ. ಆ ಮೂಲಕ ಶಿಕ್ಷಣವನ್ನು ಅರ್ಧಕ್ಕೆ ಕಡಿತಗೊಳಿಸಿದ್ದ ಹಲವಾರು ಮಹಿಳೆಯರು ಮತ್ತೆ ಪರೀಕ್ಷೆ ಬರೆಯಲು ಪ್ರೇರಣೆಯಾಗಿದ್ದಾರೆ. ಮಾತ್ರವಲ್ಲದೆ, ತಾವು ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಕೇಂದ್ರವನ್ನು ಮಾದರಿ ಕೇಂದ್ರವನ್ನಾಗಿ ಮಾಡಲು ಮುಂದಾಗಿದೆ.

ಮಂಡ್ಯ ಜಿಲ್ಲೆಯ ಡಣಾಯಕನಪುರ ಗ್ರಾಮದ ಅಂಗನವಾಡಿ ಶಿಕ್ಷಕಿ ಡಿ ಉಷಾ ಅವರು ಪಿಯುಸಿ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದಾರೆ. ಅವರು 2004ರಲ್ಲಿ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಆದರೆ, ಅವರಿಗೆ ಪೋಷಕರು ವಿವಾಹ ನಿಶ್ಚಯ ಮಾಡಿ, ಪಿಯುಸಿ ಪರೀಕ್ಷೆಗೆ ಒಂದು ತಿಂಗಳಿರುವಾಗಲೇ ಅವರನ್ನು ಕಾಲೇಜು ಬಿಡಿಸಿದ್ದರು. ಮದುವೆ ಮಾಡಿದ್ದರು. ಹೀಗಾಗಿ, ಅವರು ಪಿಯುಸಿ ಪರೀಕ್ಷೆ ಬರೆಯಲು ಆಗಿರಲಿಲ್ಲ ಎಂದು ತಿಳಿದುಬಂದಿದೆ.

ಮದುವೆಯ ಬಳಿಕ, 2007ರಲ್ಲಿ ಅವರು ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕಿಯಾಗಿ ಸೇರಿದರು. ನಾಲ್ಕು ವರ್ಷಗಳ ಹಿಂದೆ ಅಜೀಂ ಪ್ರೇಮ್‌ಜೀ ಫೌಂಡೇಷನ್ ನೀಡಿದ ತರಬೇತಿ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿದ್ದರು. ಕಾರ್ಯಗಾರದಲ್ಲಿ ನೀಡಲಾದ ತರಬೇತಿಯಿಂದ ಪ್ರೇರಣೆಗೊಂಡ ಉಷಾ ಅವರು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ನಿರ್ಧರಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರ್ಷ ಪರೀಕ್ಷೆ ಕಟ್ಟಿದ್ದ ಪರೀಕ್ಷೆ ಬರೆದು, ಒಟ್ಟು 600 ಅಂಕಗಳಲ್ಲಿ 341 ಅಂಕಗಳನ್ನು ಗಳಿಸಿದ್ದಾರೆ. ದ್ವಿತೀಯ ದರ್ಜೆಯಲ್ಲಿ ಪಾಸಾಗಿದ್ದಾರೆ. ಅವರು ಕನ್ನಡ – 83, ಇಂಗ್ಲಿಷ್‌ – 43, ಇತಿಹಾಸ – 72, ಅರ್ಥಶಾಸ್ತ್ರ – 43, ಸಮಾಜಶಾಸ್ತ್ರ – 50 ಹಾಗೂ ರಾಜಶಾಸ್ತ್ರದಲ್ಲಿ 50 ಅಂಕಗಳನ್ನು ಪಡೆದಿದ್ದಾರೆ.

ತಮ್ಮ ಶಿಕ್ಷಣವನ್ನು ಮುಂದುವರೆಸಿರುವುದು ಮಾತ್ರವಲ್ಲದೆ, ಅವರು ಅಂಗನವಾಡಿಯ ಅಭಿವೃದ್ಧಿಗೂ ಶ್ರಮಿಸುತ್ತಿದ್ದಾರೆ. ತಮಗೆ ಬರುವ ಕಡಿಮೆ ಗೌರವಧನದ ಹಣವನ್ನೂ ಸಂಗ್ರಹಿಸಿಟ್ಟು, ಅದೇ ಹಣದಲ್ಲಿ ಅಂಗನವಾಡಿಗೆ ಬಣ್ಣ ಬಳಿದಿದ್ದಾರೆ. ಮಾತ್ರವಲ್ಲದೆ, ಅಂಗನವಾಡಿ ಗೋಡೆಗಳಿಗೆ ಆಕರ್ಷಣೀಯ ಚಿತ್ರಗಳನ್ನೂ ಬಿಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...