ಮಂಡ್ಯ | ಬ್ಯಾಂಕ್ ದರೋಡೆಗೆ ಯತ್ನ; ಸೆಕ್ಯೂರಿಟಿ ಗಾರ್ಡ್‌ಗೆ ಇರಿದ ದುಷ್ಕರ್ಮಿಗಳು

Date:

ಬ್ಯಾಂಕ್ ದರೋಡೆಗೆ ಬಂದ ಗುಂಪನ್ನು ತಡೆಯಲು ಯತ್ನಿಸಿದ ಸೆಕ್ಯೂರಿಟಿ ಗಾರ್ಡ್‌ಗೆ ಮಾರಕಾಸ್ತ್ರದಿಂದ ಇರಿದು ಗಾಯಗೊಳಿಸಿರುವ ಘಟನೆ ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಹರಿಹರಪುರ ಗ್ರಾಮದಲ್ಲಿ ಭಾನುವಾರ ಮದ್ಯರಾತ್ರಿ ನಡೆದಿದೆ.

ಬ್ಯಾಂಕ್ ಸೆಕ್ಯೂರಿಟಿ ಗಾರ್ಡ್ ಮನು(30) ಇರಿತದಿಂದ ಗಾಯಗೊಂಡಿರುವ ಕರ್ತವ್ಯನಿರತ ನೌಕರ. ಇವರು ಡಿಸಿಸಿ ಬ್ಯಾಂಕ್ ಹಾಗೂ ವಿಎಸ್‌ಎಸ್‌ಎನ್ ನೌಕರ ಎಂದು ತಿಳಿದುಬಂದಿದೆ.

ಘಟನೆ ವಿವರ:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹರಿಹರಪುರ ಗ್ರಾಮದಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಗೆ ಮುಸುಕುದಾರಿಗಳಾಗಿದ್ದ ಮೂವರು ದರೋಡೆಕೋರರು ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಕರ್ತವ್ಯನಿರತನಾಗಿದ್ದ ಬ್ಯಾಂಕ್ ಸೆಕ್ಯೂರಿಟಿ ಗಾರ್ಡ್ ಮನು(30) ದರೋಡೆಕೋರರನ್ನು ತಡೆದು, ಕಿರುಚಿಕೊಂಡಿದ್ದಾರೆ. ಇದರಿಂದ ವಿಚಲಿತರಾದ ದರೋಡೆಕೋರರು ಬ್ಯಾಂಕ್ ಬೀಗ ಒಡೆಯಲು ಸಾಧ್ಯವಾಗದೇ ಇದ್ದಾಗ ಸೆಕ್ಯೂರಿಟಿ ಗಾರ್ಡ್‌ನ ಹೊಟ್ಟೆಯ ಭಾಗಕ್ಕೆ ಮಾರಕಾಸ್ತ್ರದಿಂದ ಇರಿದು ಹತ್ಯೆಗೆ ಯತ್ನಿಸಿದ್ದಾರೆ. ಅಷ್ಟರಲ್ಲಿ ಸಾರ್ವಜನಿಕರು ಜಮಾಯಿಸುತ್ತಿರುವುದನ್ನು ಅರಿತ ದರೋಡೆಕೋರರು ಸ್ಥಳದಿಂದ ಪರಾರಿಯಾಗಿದ್ದಾರೆ.

ಮಾರಕಾಸ್ತ್ರದ ಇರಿತದಿಂದ ಗಾಯಗೊಂಡು ಅಸ್ವಸ್ಥಗೊಂಡಿದ್ದ ಸೆಕ್ಯೂರಿಟಿ ಗಾರ್ಡ್ ಮನು ಅವರನ್ನು ಗ್ರಾಮಸ್ಥರು ಕೆ ಆರ್ ಪೇಟೆ ಪಟ್ಟಣದ ದುಂಡಶೆಟ್ಟಿ-ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಸಮರ್ಪಕ ವಿದ್ಯುತ್ ಪೂರೈಕೆಗೆ ರೈತರ ಆಗ್ರಹ

ಪ್ರಾಣಾಪಾಯದಿಂದ ಪಾರಾಗಿರುವ ಸೆಕ್ಯೂರಿಟಿ ಗಾರ್ಡ್ ಮನು ಅವರನ್ನು ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಹೆಚ್ ಕೆ ಅಶೋಕ್‌, ಹರಿಹರಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕ್ ಅಧ್ಯಕ್ಷ ಮೋಹನ್, ಸಿಇಒ ಕಾಂತರಾಜು, ಮಾಜಿ ಅಧ್ಯಕ್ಷರುಗಳಾದ ನಿಂಗರಾಜು, ಕೃಷ್ಣೇಗೌಡ, ಬಾಲಗಂಗಾಧರತಿಲಕ್, ರೇವಣ್ಣ, ಡೇರಿ ಅಧ್ಯಕ್ಷ ನಾಗೇಶ್ ಸೇರಿದಂತೆ ಇತರರು ಗಾಯಾಳುವನ್ನು ಭೇಟಿ ಮಾಡಿ ಧೈರ್ಯ ತುಂಬಿದರು. ಬಳಿಕ ಕೆ ಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿ, ದುಷ್ಕರ್ಮಿಗಳನ್ನು ಪತ್ತೆ ಮಾಡಿ ಡಿಸಿಸಿ ಬ್ಯಾಂಕ್ ಮತ್ತು ವಿಎಸ್‌ಎಸ್‌ಎನ್ ಬ್ಯಾಂಕ್ ಶಾಖೆಗಳಿಗೆ ಸೂಕ್ತ ಪೊಲೀಸ್ ಗಸ್ತು ಭದ್ರತೆ ಒದಗಿಸಿಕೊಡಬೇಕೆಂದು ಮನವಿ‌ ಮಾಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...