ಮಂಡ್ಯ | ಹದಗೆಟ್ಟ ರಸ್ತೆ: ಕಬ್ಬು ಸಾಗಿಸಲಾಗದೆ ಹೈರಾಣಾದ ರೈತರು; ಡಾಂಬರೀಕರಣಕ್ಕೆ ಆಗ್ರಹ

Date:

ಮಂಡ್ಯ ಜಿಲ್ಲೆಯ ಮದ್ದೂರಿನಿಂದ ಚನ್ನಸಂದ್ರಕ್ಕೆ ಹೋಗುವ ಕೆಮ್ಮಣ್ಣುನಾಲೆ ರಸ್ತೆ ಮಳೆಯಿಂದಾಗಿ ಗುಂಡಿ ಬಿದ್ದು ವಾಹನಗಳು ಇರಲಿ, ಜನರು ಕೂಡ ಓಡಾಡಲು ಆಗದಂತಹ ಸ್ಥಿತಿ ನಿರ್ಮಾಣವಾಗಿದೆ.

ಹದಗೆಟ್ಟ ರಸ್ತೆಯ ಪರಿಣಾಮ ಬೆಳೆದಿರುವ ಕಬ್ಬನ್ನು ಕಟಾವು ಮಾಡಿ ಕಾರ್ಖಾನೆಗೆ ಸಾಗಾಣಿಕೆ ಮಾಡಲು ಆಗುತ್ತಿಲ್ಲ ಎಂದು ರೈತರು ಹೈರಾಣಾಗಿದ್ದಾರೆ.

“ರಸ್ತೆ ಹದಗೆಟ್ಟಿರುವುದರಿಂದ ಕಬ್ಬು ಜಮೀನಿನಲ್ಲೇ ಒಣಗುತ್ತಿದೆ. ರೈತರಿಗಾಗಿರುವ ನಷ್ಟವನ್ನು ಭರಿಸುವವರು ಯಾರು” ಎಂದು ತೆಂಗು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷರಾದ ಚನ್ನಸಂದ್ರ ಲಕ್ಷ್ಮಣ್ ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
road2 1

ಮದ್ದೂರು ಪಟ್ಟಣದಲ್ಲಿ ಹದಗೆಟ್ಟ ಕೆಮ್ಮಣ್ಣುನಾಲೆ ರಸ್ತೆಯನ್ನು ಸರಿಪಡಿಸಲು ಒತ್ತಾಯಿಸಿ ನಡೆದ ಸಾರ್ವಜನಿಕ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಮೂರು, ನಾಲ್ಕು ವರ್ಷಗಳ ಹಿಂದೆ ಇಲ್ಲಿ ಪಟ್ಟಣದ ಮಿತಿಯಲ್ಲಿ ಡಾಂಬರು ರಸ್ತೆ ಮಾಡಿದ್ದರು. ಕಳಪೆ ಕಾಮಗಾರಿಯ ಕಾರಣ ರಸ್ತೆ ಕಾಣೆಯಾಗಿದೆ. ಇಲ್ಲಿ ರಸ್ತೆ ಇತ್ತೇ ಎಂದು ಈಗ ಭೂತಗನ್ನಡಿ ಹಾಕಿ ಹುಡುಕಬೇಕು. ರಸ್ತೆ ಎಲ್ಲಿ ಹೋಯ್ತು ಹುಡುಕಿಕೊಂಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಜೀಪ್ ಕೊಟ್ಟಿರೋದು ನಾಲೆ ಮೇಲೆ ಓಡಾಡಿಕೊಂಡು ಕೆಲಸ ಮಾಡೋದಕ್ಕೇ ಅಥವಾ ಮನೆಗೆ ಓಡಾಡುವುದಕ್ಕಾ? ಇಂಜಿನಿಯರ್‌ಗಳು ನಾಲೆ ಮೇಲೆ ಬಂದು ಎಷ್ಟು ತಿಂಗಳಾಯ್ತು? ಈ ಮಳೆಗಾಲದಲ್ಲಿ ನಾಲೆ, ರಸ್ತೆ ಕತೆ ಏನಾಗಿದೆ ಎಂದು ತಿರುಗಿಯೂ ನೋಡಿಲ್ಲ ಎಂದು ಆಕ್ರೋಶ ಹೊರಹಾಕಿದರು.

kabbu

ಗೊರವನಹಳ್ಳಿ, ಚನ್ನಸಂದ್ರ, ಮದ್ದೂರು ಗ್ರಾಮಗಳ ನೂರಾರು ರೈತರ ಕೃಷಿ ಚಟುವಟಿಕೆಗಳು ಹದಗೆಟ್ಟ ರಸ್ತೆಯಿಂದಾಗಿ ಸ್ಥಗಿತಗೊಂಡಂತಾಗಿದೆ. ಈ ಕೂಡಲೇ ಕಾವೇರಿ ನೀರಾವರಿ ಇಲಾಖೆಯ ರಸ್ತೆ ಸರಿಪಡಿಸಬೇಕು ಇಲ್ಲದಿದ್ದರೆ ಇಲಾಖೆಯ ಕಚೇರಿಯ ಮುಂದೆ ಪ್ರತಿಭಟಿಸುವ ಎಚ್ಚರಿಕೆ ನೀಡಿದರು.

ಇದನ್ನು ಓದಿದ್ದೀರಾ? ರಾಜ್ಯದ 2 ಜಿಲ್ಲೆಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಈ ಬಗ್ಗೆ ಹೇಳಿಕೆ ಪಡೆಯಲು ನೀರಾವರಿ ಇಲಾಖೆಯ ಎಇಇ ನಾಗರಾಜುರವರಿಗೆ ಕರೆ ಮಾಡಿದಾಗ, ಎಇ ಚೇತನ್ ಸಂಪರ್ಕಿಸಲು ತಿಳಿಸಿದರು. ಎಇಗೆ ಕರೆ ಮಾಡಿದಾಗ ಕೆಮ್ಮಣ್ಣು ನಾಲೆ ರಸ್ತೆ ಎಲ್ಲಿ ಬರುತ್ತದೆ ಎಂದು ವಿಳಾಸವನ್ನು ನಮ್ಮನ್ನೇ ಕೇಳಿದರು. ನಂತರ ಮೇಲಾಧಿಕಾರಿ ಜೊತೆಗೆ ಮಾತನಾಡಿ, ಶೀಘ್ರ ರಸ್ತೆ ಸರಿಪಡಿಸುವ ವ್ಯವಸ್ಥೆ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ರೈತ ಮುಖಂಡರಾದ ರವಿ, ಸಂದೀಪ್, ರಾಘವೇಂದ್ರ, ಜಗದೀಶ್ ಇನ್ನೂ ಹಲವರಿದ್ದರು.

road 3
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...