ಮಂಡ್ಯ | ಅತಿಥಿ ಶಿಕ್ಷಕರ ಬೇಡಿಕೆ ಈಡೇರಿಸದ ಸರ್ಕಾರ, ಅನ್ಯಾಯ ಧೋರಣೆ ತೋರುತ್ತಿದೆ: ಬಿ ಎಸ್ ಮಹೇಶ್ ಕುಮಾರ್

Date:

ಅತಿಥಿ ಶಿಕ್ಷಕರ ಬೇಡಿಕೆ ಈಡೇರಿಸದ ಸರ್ಕಾರ, ಅನ್ಯಾಯ ಧೋರಣೆ ತೋರುತ್ತಿದ್ದು, ರಾಜ್ಯದಲ್ಲಿರುವ ಸುಮಾರು 43 ಸಾವಿರಕ್ಕೂ ಅಧಿಕ ಮಂದಿ ಅತಿಥಿ ಶಿಕ್ಷಕರಿಗೆ ದ್ರೋಹ ಬಗೆಯುತ್ತಿದೆ ಎಂದು ಸಂಘದ ಅಧ್ಯಕ್ಷ ಬಿ ಎಸ್ ಮಹೇಶ್ ಕುಮಾರ್ ಆರೋಪಿಸಿದರು.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದಿಂದ ಪಟ್ಟಣದ ಭಕ್ತ ಕನಕದಾಸ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದರು.

“ರಾಜ್ಯಾದ್ಯಂತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 10-12 ವರ್ಷಗಳಿಂದ ಸೇವಾಭಧ್ರತೆಯಿಲ್ಲದೆ, ಕನಿಷ್ಠ ವೇತನವೂ ಇಲ್ಲದೆ ಖಾಯಂ ಶಿಕ್ಷಕರಿಗೆ ಸರಿಸಮನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇವೆ. ಆದರೂ ಸರ್ಕಾರ ಅತಿಥಿ ಶಿಕ್ಷಕರ ಬೇಡಿಕೆ ಈಡೇರಿಸದೆ ಅನ್ಯಾಯ ಧೋರಣೆ ತೋರುತ್ತಿದೆ ಎಂದು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸರ್ಕಾರಕ್ಕೆ ಹಲವಾರು ವರ್ಷಗಳಿಂದ ಮನವಿ ನೀಡುತಿದ್ದರೂ ಕೂಡ ನಮ್ಮ ಬೇಡೀಕೆಗಳನ್ನಾಗಲಿ ಹಕ್ಕೊತ್ತಾಯಗಳನ್ನಾಗಲಿ ಈಡೇರಿಸಿರುವುದಿಲ್ಲ. ಸಂವಿಧಾನದ ಆರ್ಟಿಕಲ್ 311ರಲ್ಲಿ ಖಾಯಂ ನೌಕರರಿಗೆ ನೀಡುವ ವೇತನ, ಸೇವಾ ಭದ್ರತೆ, ಆರೋಗ್ಯ ವಿಮೆ, ರಜೆ ಸೌಲಭ್ಯ, ವಿಶೇಷ ಭತ್ಯೆಗಳು, ಇಡುಗಂಟು ಇವುಗಳನ್ನು ತಾತ್ಕಾಲಿಕ ನೌಕರರಿಗೂ ಕೊಡಬೇಕು ಎನ್ನುವ ಸರ್ಕಾರವೇ ಇಂದು ಅನ್ಯಾಯ ಧೋರಣೆ ತೋರುತ್ತಿದೆ” ಎಂದರು.

“ರಾಜ್ಯದ ಬಿಬಿಎಂಪಿ ಶಾಲೆಗಳಿಗೆ ಗೌರವಧನ ಹೆಚ್ಚಾಗಿದೆ. ವಸತಿ ಶಾಲೆಗಳಲ್ಲೂ ಕೂಡಾ ಗೌರವಧನ ಹೆಚ್ಚಿದೆ. ಸೌಲಭ್ಯಗಳನ್ನೂ ಕೂಡಾ ನೀಡಿದೆ. ಆದರೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ತುಂಬಾ ಅನ್ಯಾಯವಾಗುತ್ತಿದೆ” ಎಂದು ದೂರಿದರು.

“ಶಿಕ್ಷಣ ಸಚಿವರು ಪ್ರಾಥಮಿಕ ಶಾಲೆ ಶಿಕ್ಷಕರಿಗೆ ₹15000, ಪ್ರೌಢ ಶಾಲೆ ಶಿಕ್ಷಕರಿಗೆ ₹16000 ಗೌರವಧನ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಈಗ ಕೇವಲ ₹2000 ಮಾತ್ರ ಹೆಚ್ಚಿಗೆ ಮಾಡಿ ರಾಜ್ಯದ ಅತಿಥಿ ಶಿಕ್ಷಕರಿಗೆ ಅನ್ಯಾಯ ಮಾಡಿದ್ದು, ಕೊಟ್ಟ ಮಾತಿನಂತೆ ನೆಡೆದಿಲ್ಲ. ಕಾಂಗ್ರೆಸ್ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ ಅತಿಥಿ ಶಿಕ್ಷಕರನ್ನು ಖಾಯಂ ಮಾಡುವುದಿಗಿ ಭರವಸೆ ನೀಡಿದೆ. ಆದರೆ ಈಗ ನುಡಿದಂತೆ ನೆಡೆಯುತ್ತಿಲ್ಲ” ಎಂದು ತರಾಟೆಗೆ ತೆಗೆದುಕೊಂಡರು.

“ಮಂಡ್ಯ ಜಿಲ್ಲೆಯಲ್ಲಿ ಸುಮಾರು 1300 ರಿಂದ 1400 ಮಂದಿ ಅತಿಥಿ ಶಿಕ್ಷಕರು ಕೆಲಸ ಮಾಡುತ್ತಿದ್ದೇವೆ. ನಮಗೆ ನಿರಂತರವಾಗಿ ಅನ್ಯಾಯವಾಗುತಿದ್ದರೂ ಜಿಲ್ಲೆಯ ಯಾವೊಬ್ಬ ಜನಪ್ರತಿನಿಧಿಗಳೂ ಕೂಡಾ ನಮ್ಮ ಬಗ್ಗೆ ಧ್ವನಿ ಎತ್ತಿಲ್ಲ. ಇದೇ ರೀತಿ ಮುಂದುವರೆದರೆ ಮುಂಬರುವ ತಾಲೂಕು, ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ನೋಟಾಗೆ ಮತ ನೀಡಬೇಕಾಗುತ್ತದೆ” ಎಂದು ಕಿಡಿ ಕಾರಿದರು.

“ಜನಪ್ರತಿನಿಧಿಗಳಿಗೆ ಅಧಿಕೊಟ್ಟವರು ನಾವು, ಸರ್ಕಾರ ಜಾರಿಗೆ ಬಂದಿರುವುದು ನಮ್ಮಿಂದ. ಈಗ ಅಧಿಕಾರದ ಗದ್ದುಗೆ ಏರಿ ನಮಗೇ ಅನ್ಯಾಯ ಮಾಡುತ್ತಿದ್ದಾರೆ. ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಸರ್ಕಾರ ನಮ್ಮ ಬೇಡಿಕೆಗಳು ಹಾಗೂ ಹಕ್ಕೊತ್ತಾಯಗಳ ವಿಚಾರದಲ್ಲಿ ನಮಗೆ ನ್ಯಾಯ ಕೊಡಿಸದಿದ್ದಲ್ಲಿ ರಾಜ್ಯಾದ್ಯಂತ ಉಪವಾಸ ಸತ್ಯಾಗ್ರಹ ಮಾಡಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಬಾಕಿ ಶುಲ್ಕ ಪಾವತಿಸಿಲ್ಲವೆಂದು ಮಗುವಿನ ಮೇಲೆ ಹಲ್ಲೆ, ಜಾತಿನಿಂದನೆ; ಜೈನ್ ಪಬ್ಲಿಕ್ ಶಾಲೆ ವಿರುದ್ಧ ಕ್ರಮಕ್ಕೆ ಆಗ್ರಹ

ಅತಿಥಿ ಶಿಕ್ಷಕರಿಗೆ ಸೇವಾಭದ್ರತೆ ನೀಡಬೇಕು. ಹತ್ತು ವರ್ಷಕ್ಕೂ ಹೆಚ್ಚು ಕಾಲ ಕರ್ತವ್ಯ ನಿರ್ವಹಿಸಿದ ಅತಿಥಿ ಶಿಕ್ಷಕರನ್ನು ಖಾಯಂ ಮಾಡಬೇಕು. ಪ್ರತಿ ತಿಂಗಳಿಗೆ ₹31,000ದಂತೆ ಕನಿಷ್ಠ ವೇತನ ನೀಡಬೇಕು. ಸೇವಾಹಿರಿತನಕ್ಕೆ ಆಧ್ಯತೆ ನೀಡಬೇಕು. ಸೇವಾದೃಢೀಕರಣ ಪತ್ರ ನೀಡಬೇಕು. ವರ್ಷಕ್ಕೆ ಶೇ.5ರಷ್ಟು ಕೃಪಾಂಕ ನೀಡಬೇಕು. ಅಂಗವಿಕಲ ಶಿಕ್ಷಕರಿಗೆ ಮೀಸಲಾತಿ ನೀಡಬೇಕು. ಪ್ರತಿ ತಿಂಗಳು ಸರಿಯಾಗಿ ಸಂಬಳ ನೀಡಬೇಕು” ಎಂದು ಒತ್ತಾಯಿಸಿದರು.

ತಾಲೂಕು ಪದಾಧಿಕಾರಿಗಳಾದ ಗೌರವಾಧ್ಯಕ್ಷ ಎನ್ ಎಲ್ ಭರತ್ ರಾಜ್, ಉಪಾಧ್ಯಕ್ಷ ಜೆ ಶಿವಕುಮಾರ್, ಚುಂಚಣ್ಣ, ಪ್ರಧಾನ ಕಾರ್ಯದರ್ಶಿ ಕೆಂಪರಾಜು, ಸಹಕಾರ್ಯದರ್ಶಿ ನಂಜುಂಡಸ್ವಾಮಿ, ಆನಂದ್, ಖಜಾಂಚಿ ಪುಟ್ಟರಾಜು, ಮಹದೇವು, ಹನುಮಯ್ಯ, ಬಿಲ್ಲಯ್ಯಸ್ವಾಮಿ, ರಮ್ಯ, ರಾಧಾ, ರೇಖಾ, ನಯನ, ಮಹದೇವಸ್ವಾಮಿ ಸೇರಿದಂತೆ ಇತರರು ಇದ್ದರು.

    eedina
    ಈ ದಿನ ಡೆಸ್ಕ್‌
    Website |  + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

    ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

    ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

    "ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

    ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

    ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

    ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

    ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...