ಮಂಡ್ಯ | ಶ್ರೀರಂಗಪಟ್ಟಣದಲ್ಲಿ ಪತ್ತೆಯಾದ ನೆಲಮಾಳಿಗೆಯ ಸಂರಕ್ಷಣೆಗೆ ಸ್ವಚ್ಛತೆ ಕೈಗೊಂಡ ನಾಗರಿಕರು

Date:

ಮೈಸೂರು-ಬೆಂಗಳೂರು ಹೆದ್ದಾರಿಯ ಶ್ರೀರಂಗಪಟ್ಟಣದಲ್ಲಿ ರಸ್ತೆಯಲ್ಲಿ ಇಕ್ಕೆಲದಲ್ಲಿ ಎರಡು ನೆಲಮಾಳಿಗೆ ಪತ್ತೆಯಾಗಿದ್ದು, ಸುಸ್ಥಿತಿಯಲ್ಲಿವೆ.

ಸರಿ ಸುಮಾರು ಆರು ಅಡಿ ಅಗಲ, 15 ಅಡಿ ಉದ್ದವಿರುವ ಚುರ್ಕಿ ಗಾರೆ, ಇಟ್ಟಿಗೆ ಹಾಗೂ ಕಲ್ಲುಗಳಿಂದ ನಿರ್ಮಾಣವಾಗಿದ್ದು, ಈಗಲು ಯಾವುದೇ ಮಳೆ, ಗಾಳಿಗೆ ಜಗ್ಗದೆ ಶಿಥಿಲಗೊಳ್ಳದೆ ಇರುವುದು ವಿಶೇಷ. ಆದರೆ ಅವುಗಳನ್ನು ಗಿಡ ಗಂಟಿಗಳು ಬೆಳೆದು ಆವರಿಸಿಕೊಂಡು ಹುದುಗಿ ಹೋಗಿದ್ದವು. ಇವುಗಳನ್ನೆಲ್ಲ ತೆರವುಗೊಳಿಸಿ ಕೋಟೆಯ ನೆಲಮಾಳಿಗೆಯನ್ನು ಸಂರಕ್ಷಿಸುವ ಸಲುವಾಗಿ ಸ್ವಚ್ಛತಾ ಕಾರ್ಯವನ್ನು ವಿವಿಧ ಸಂಘಟನೆಗಳು ಕೈಗೊಂಡಿದ್ದವು.

ತಮ್ಮ ಕಾರ್ಯದ ಬಗ್ಗೆ ಈ ದಿನ.ಕಾಮ್ ಜೊತೆಗೆ ಮಾತನಾಡಿದ ಸಿ.ಎಸ್.ವೆಂಕಟೇಶ್ “ಇಲ್ಲಿಗೆ ಬರಲು ಆಗದಂತೆ ಬೆಳೆದುಕೊಂಡಿದ್ದ ತುಂಬಾ ಗಿಡ ಗಂಟೆಗಳನ್ನು ಮಕ್ಕಳ ಜೊತೆಗೂಡಿ ತೆರವುಗೊಳಿಸಿದ್ದೇವೆ. ಸುಮಾರು ಒಂದು ತಿಂಗಳಿನಿಂದ ತಿಳಿಸುತ್ತಾ ಬಂದಿದ್ದರೂ ಪುರಾತತ್ವ ಇಲಾಖೆಯ ಅಧಿಕಾರಿಗಳು ಇತ್ತ ತಲೆ ಹಾಕಿಲ್ಲ. ಈಗಲಾದರು ಬಂದು ಇದನ್ನು ರಕ್ಷಣೆ ಮಾಡಿ, ವರದಿ ಮಾಡಿ ಸರಕಾರಕ್ಕೆ ಕಳುಹಿಸಿ ಸೂಕ್ತವಾದ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

spatna

ಅಚೀವರ್ ಅಕಾಡೆಮಿಯ ಸ್ಥಾಪಕರಾದ ಡಾ. ರಾಘವೇಂದ್ರ ಮಾತನಾಡಿ, “ಎರಡು ತಿಂಗಳ ಹಿಂದೆ ಪ್ರಜಾವಾಣಿಯಲ್ಲಿ ಗಣಂಗೂರು ನಂಜೇಗೌಡರು ಬರೆದ ಬರಹದಲ್ಲಿ ಈ ಜೋಡಿ ನೆಲ ಮಾಳಿಗೆಗಳ ಬಗ್ಗೆ ತಿಳಿದು ಅವರನ್ನು ಕರೆದುಕೊಂಡು ಇಲ್ಲಿ ನೋಡಲು ಬಂದಾಗ ಇಲ್ಲಿಗೆ ಬರಲಾಗದಂತೆ ಗಿಡಗಂಟಿಗಳು ನಿಂತಿದ್ದವು. ಹಾಗಾಗಿ ಇವತ್ತು ಸ್ವಚ್ಛತಾ ಕಾರ್ಯ ಕೈಗೊಂಡಿದ್ದೇವೆ” ಎಂದರು.

ಶ್ರೀರಂಗಪಟ್ಟಣದ ಸಮರ್ಪಣಾ ಟ್ರಸ್ಟ್‌ನ ಅಧ್ಯಕ್ಷರಾದ ಜಯಶಂಕರ್ ಮಾತನಾಡಿ,”ನೆಲಮಾಳಿಗೆಯ ಒಳಗೆ ತುಂಬಾ ಅದ್ಭುತವಾದ ಕಟ್ಟಡವನ್ನು ಕಟ್ಟಿದ್ದಾರೆ. ಕಲ್ಲಿನ ಕಂಬಗಳನ್ನು ನೆಟ್ಟು ಅದರ ಮೇಲೆ ಚುರ್ಕಿ ಗಾರೆಯನ್ನು ಹಾಕಿ ಕಟ್ಟಿ ನಿಲ್ಲಿಸಿದ್ದಾರೆ. ಸೈನಿಕರು ಪಾಳಿ ಬದಲಿಸುತ್ತಿದ್ದ ಜಾಗ ಇದು ಎಂದು ಸಂಶೋಧಕರಿಂದ ಕೇಳಿದ್ದೇವೆ” ಎಂದರು.

4 11

“ವರ್ತುಲಾಕಾರದ ಕೋಟೆಗೆ ಚೇಂಬರುಗಳನ್ನು ಹಾಕಿ, ಶತ್ರು ಸೈನಿಕರನ್ನು ಇಲ್ಲಿ ನಿಂತು ಕಾವಲು ಕಾಯುತ್ತಿದ್ದರು. ಕೆಳಭಾಗದಲ್ಲಿ ಶಸ್ತ್ರಾಸ್ತ್ರಗಳನ್ನು ಇಡುತ್ತಿದ್ದ ಕುರುಹುಗಳನ್ನು ಇಲ್ಲಿ ನೋಡಬಹುದು. ಇಷ್ಟು ಮಾಹಿತಿ ನಮಗೆ ತಿಳಿದುಬಂದಿದೆ. ಇಲ್ಲಿ ಸಂಶೋಧನೆ ಮಾಡಿ ಇನ್ನು ಹೆಚ್ಚಿನ ಮಾಹಿತಿಯನ್ನು ಹೊರ ತೆಗೆಯಬೇಕು” ಎಂದು ಪುರಾತತ್ವ ಇಲಾಖೆಯವರನ್ನು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಮಂಡ್ಯ | ಶ್ರೀರಂಗಪಟ್ಟಣದಲ್ಲಿ ಹುದುಗಿದ್ದ ಮಣ್ಣಿನ ಗುಡ್ಡೆಯಲ್ಲಿ ನೆಲಮಾಳಿಗೆ ಪತ್ತೆ

ಶೇಷಾದ್ರಿಪುರ ಕಾಲೇಜಿನ ವಿದ್ಯಾರ್ಥಿಗಳು, ಪರಿವರ್ತನಾ ಶಾಲೆಯ ತಂಡ, ರೋಟರಿ ಸಂಸ್ಥೆಯ ಪದಾಧಿಕಾರಿಗಳು, ಶ್ರೀರಂಗಪಟ್ಟಣದ ಪ್ರಜ್ಞಾವಂತರ ವೇದಿಕೆಯ ಸಿ.ಎಸ್.ವೆಂಕಟೇಶ್, ಸಮರ್ಪಣಾ ಟ್ರಸ್ಟಿನ ಜಯಶಂಕರ್ ಹಾಗೂ ಅವರ ತಂಡದವರು ಸ್ವಚ್ಚತಾ ಕಾರ್ಯದಲ್ಲಿ ಕೈ ಜೋಡಿಸಿ, ಪಾಲ್ಗೊಂಡಿದ್ದರು.

5 4 3 12

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...