ಮಂಡ್ಯ | ನಾಗಮಂಗಲ ಗಲಭೆಗೆ ಸಂಘ ಪರಿವಾರದ ಸಂಚು: ಸಿಪಿಐಎಂ ಆರೋಪ

Date:

ಮಂಡ್ಯ ಜಿಲ್ಲೆಯ ನಾಗಮಂಗಲ ಗಲಭೆಗೆ ಸಂಘ ಪರಿವಾರ ಸಂಚು ರೂಪಿಸಿದ್ದು, ಪಟ್ಟಣದಲ್ಲಿ ಗಣೇಶ ವಿಸರ್ಜನೆಯ ಸಂದರ್ಭದಲ್ಲಿ ನಡೆದ ಕೋಮು ಗಲಭೆ ಮತ್ತು ಆಸ್ತಿಪಾಸ್ತಿ ಹಾನಿಯಾಗಿದೆ. ಗುಪ್ತಚರ ಮತ್ತು ಪೊಲೀಸ್ ಇಲಾಖೆಯ ವೈಫಲ್ಯ ಹಾಗೂ ಜೆಡಿಎಸ್‌ ಪಕ್ಷದ ಮೈತ್ರಿಯನ್ನು ದುರುಪಯೋಗ ಮಾಡಿಕೊಂಡು ಗಲಭೆ ಎಬ್ಬಿಸಿದೆ ಎಂದು ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಟಿ ಎಲ್ ಕೃಷ್ಣೇಗೌಡ ಆರೋಪಿಸಿದ್ದಾರೆ.

ಮಂಡ್ಯದಲ್ಲಿ ನಡೆದ ಸಿಪಿಐಎಂ ಪಕ್ಷದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಸೆಪ್ಟೆಂಬರ್ 17ರಂದು ಸಿಪಿಐಎಂ ನಿಯೋಗವು ನಾಗಮಂಗಲಕ್ಕೆ ಭೇಟಿ ನೀಡಿದಾಗ, ಸಾರ್ವಜನಿಕರೊಂದಿಗೆ ಮಾತುಕತೆಯ ವೇಳೆ ಈ ಅಂಶಗಳು ಬೆಳಕಿಗೆಬಂದಿವೆ. ಆದ್ದರಿಂದ ಶಾಂತಿ ಸ್ಥಾಪನೆಗಾಗಿ ಆದಿಚುಂಚನಗಿರಿ ಮಠದ ಶ್ರೀಗಳು ಪಾದಯಾತ್ರೆ ನಡೆಸಬೇಕು” ಎಂದು ಒತ್ತಾಯಿಸಿದರು.

“ಸೆಪ್ಟೆಂಬರ್ 11ರಂದು ನಾಗಮಂಗಲ ಪಟ್ಟಣದಲ್ಲಿ ನಡೆದ ಗಲಭೆಯಲ್ಲಿ ಅನೇಕ ಅಂಗಡಿಗಳು ಮತ್ತು ಆಸ್ತಿಪಾಸ್ತಿಗೆ ಹಾನಿ ಉಂಟಾಗಿದೆ. ಬದರಿಕೊಪ್ಪಲು ಗ್ರಾಮದ ಯುವಕರು ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಲು ಪಟ್ಟಣಕ್ಕೆ ಬಂದಾಗ, ಮೆರವಣಿಗೆಯನ್ನು ನಿಶ್ಚಿತ ಸಮಯಕ್ಕಿಂತ ವಿಳಂಬವಾಗಿ ನಡೆಸಿದ್ದು, ಮಸೀದಿ ಹತ್ತಿರ ಪಟಾಕಿ ಸಿಡಿಸಿ, ಘೋಷಣೆಗಳನ್ನು ಕೂಗಿದ್ದಾರೆ. ಮಸೀದಿಯವರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದಾಗ ಪರಸ್ಪರ ಕೈಕೈಮಿಲಾಯಿಸಿ ಗಲಾಟೆಯ ಕಡೆಗೆ ತಿರುಗಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೆರವಣಿಗೆಯನ್ನು ಮೊಟಕುಗೊಳಿಸಿ ಗಣೇಶ ಮೂರ್ತಿಯನ್ನು ಸ್ಟೇಷನ್ನಿಗೆ ತಂದಿದ್ದರಿಂದ ಕಿಡಿಗೇಡಿಗಳು ಗಲಭೆ ಶುರು ಮಾಡಿ, ಬೆಂಕಿ ಹಚ್ಚಿದ್ದಾರೆ. ಮುಸ್ಲಿಂ ಸಮುದಾಯಕ್ಕೆ ಸೇರಿದ ಅಂಗಡಿಗಳೇ ಹೆಚ್ಚು ಗುರಿಯಾಗಿವೆ. ಹಿಂದೂ ಸಮುದಾಯದ ಅಂಗಡಿಗಳಿಗೆ ಹೆಚ್ಚು ಹಾನಿಯಾಗಿಲ್ಲ. ಇದರಿಂದ ಸಂಘ ಪರಿವಾರ ಗಲಭೆಗೆ ಸಂಚು ಮಾಡಿರುವುದು ಎದ್ದು ಕಾಣುತ್ತದೆ” ಎಂದರು.

ಗಲಭೆಯ ಪರಿಣಾಮವಾಗಿ, ನಾಗಮಂಗಲದಲ್ಲಿ ಅಶಾಂತಿ ನಿರ್ಮಾಣವಾಗಿದ್ದು, ಇದರಲ್ಲಿ ಸಂಘ ಪರಿವಾರದ ಸಂಘಟನೆಗಳ ಕೈವಾಡವಿದೆ. ಪ್ರತಿ ವರ್ಷ ಗಣೇಶ ಮೆರವಣಿಗೆ ಮಾತ್ರ ಇರುತಿತ್ತು. ಆದರೆ ಈ ಬಾರಿ ಜೈ ಶ್ರೀರಾಮ್ ಘೋಷಣೆ ಮತ್ತು ಕೇಸರಿ ಶಾಲು ಮೆರವಣಿಗೆಯಲ್ಲಿ ಕಾಣಿಸಿಕೊಂಡಿದೆ. ಮೂರ್ತಿ ಸ್ಥಾಪನೆಗೆ ಹಣಕಾಸಿನ ನೆರವನ್ನು ಒದಗಿಸಿ ಭಕ್ತರನ್ನು ಸಂಘದ ಕಾರ್ಯಕರ್ತರನ್ನಾಗಿ ಬದಲಿಸುವ ಸಂಚನ್ನು ರೂಪಿಸಿದ್ದಾರೆ ಎಂದು ಆರೋಪಿಸಿದರು.

“ಈ ಗಲಭೆಯ ಹಿಂದೆ ಸಂಘ ಪರಿವಾರದ ಸಂಚು ಸ್ಪಷ್ಟವಾಗಿದ್ದು, ಘಟನೆಗೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರಿಗೆ ದಂಡನೆ ವಿಧಿಸಬೇಕು. ನಾಗಮಂಗಲದಲ್ಲಿ ಶಾಂತಿ ಸ್ಥಾಪಿಸಲು ಆದಿಚುಂಚನಗಿರಿ ಮಠದ ಸ್ವಾಮೀಜಿಗಳು ಪಾದಯಾತ್ರೆ ನಡೆಸಿ, ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಶ್ರಮಿಸಬೇಕು” ಎಂದು ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ತ್ವರಿತ ವಿಚಾರಣೆಗೆ ಆಗ್ರಹಿಸಿ ಪ್ರತಿಭಟನೆ

“ಸಂಘ ಪರಿವಾದ ಮೆದುಳು ಹಾಗೂ ಜೆಡಿಎಸ್‌ನ ಕೈಕಾಲು ಸೇರಿ ನಡೆಸಿದ ಗಲಭೆಯಲ್ಲಿ ₹25 ಕೋಟಿಗೂ ಅಧಿಕ ಆಸ್ತಿಪಾಸ್ತಿ ನಷ್ಟವುಂಟಾಗಿ ಇಲ್ಲಿನ ವ್ಯಾಪಾರಿಗಳು ಬೀದಿಗೆ ಬಿದ್ದಿದ್ದಾರೆ. ನಷ್ಟ ಅನುಭವಿಸಿದ ಎಲ್ಲರಿಗೂ ಪರಿಹಾರ ಕಟ್ಟಿಕೊಡಬೇಕು” ಎಂದು ಆಗ್ರಹಿಸಿದರು.

ಸಿಪಿಐಎಂ ಕಾರ್ಯಕಾರಿ ಮಂಡಳಿ ಸದಸ್ಯೆ ಸಿ ಕುಮಾರಿ, ಜಿಲ್ಲಾ ಸಮಿತಿ ಸದಸ್ಯ ಆರ್ ಕೃಷ್ಣ, ಬಿ ಹನುಮೇಶ್‌ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...