ಮಂಡ್ಯ | ಮೈಷುಗರ್ ವ್ಯಾಪ್ತಿಯ ರೈತರಿಗೆ ಕಬ್ಬಿನ ಹಣ ಪಾವತಿಯ ಬಗ್ಗೆ ಆತಂಕ ಬೇಡ: ಜಿಲ್ಲಾಧಿಕಾರಿ ಡಾ.ಕುಮಾರ್

Date:

ಮೈಷುಗರ್ ವ್ಯಾಪ್ತಿಯ ರೈತರು ಕಬ್ಬಿನ ಹಣ ಪಾವತಿಯ ಬಗ್ಗೆ ಯಾವುದೇ ಆತಂಕಕ್ಕೆ ಒಳಗಾಗದೇ ತಮ್ಮ ಕಬ್ಬನ್ನು ಇತರೆ ಖಾಸಗಿ ಕಾರ್ಖಾನೆಗಳಿಗೆ ಪರಭಾರೆ ಮಾಡದೇ ಮೈಷುಗರ್ ಕಂಪನಿಗೆ ಸರಬರಾಜು ಮಾಡಿ ಮೈಷುಗರ್ ಕಾರ್ಖಾನೆಯ ಉಳಿವಿಗೆ ಕೈ ಜೋಡಿಸಬೇಕೆಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ತಿಳಿಸಿದ್ದಾರೆ.

ಮೈಷುಗರ್ ವ್ಯಾಪ್ತಿಯ ಕಬ್ಬು ಬೆಳೆಗಾರರು ತಮ್ಮ ಕಬ್ಬನ್ನು ಮೈಷುಗರ್ ಕಂಪನಿಗೆ ಸರಬರಾಜು ಮಾಡುವುದು ಮತ್ತು ಕಬ್ಬು ಸರಬರಾಜು ಮಾಡಿದ ಹಣವನ್ನು ಸರಕಾರದ ನಿಯಮದಂತೆ 14 ದಿವಸಗಳ ಒಳಗಾಗಿ ರೈತರಿಗೆ ಕಬ್ಬಿನ ಹಣ ಪಾವತಿಸಲು ಮಂಡ್ಯ ಮೈಷುಗರ್ ಸಕ್ಕರೆ ಕಾರ್ಖಾನೆ ವತಿಯಿಂದ ಕೊಡಿಸುವ ಸಂಬಂಧ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಪ್ರಸ್ತುತ ಈ ಕಾರ್ಖಾನೆಯು ಈಗಾಗಲೇ ಹಣಕಾಸಿನ ಮುಗ್ಗಟ್ಟಿನಲ್ಲಿದೆ. ಹಣಕಾಸಿನ ಯಾವುದೇ ರೀತಿಯ ಪರ್ಯಾಯ ಏರ್ಪಾಡು ಇಲ್ಲದೆ ಕಾರ್ಖಾನೆ ಪ್ರಾರಂಭಿಸಿ ಕಬ್ಬು ನುರಿಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2024-25ನೇ ಸಾಲಿನ ಹಂಗಾಮಿನಲ್ಲಿ ಮೈಷುಗರ್ ಕಾರ್ಖಾನೆ, ಮಂಡ್ಯ ವ್ಯಾಪ್ತಿಯ ರೈತರ ಕಬ್ಬನ್ನು ಇತರೆ ಕಾರ್ಖಾನೆಗಳಾದ ಎನ್‌ಎಸ್‌ಎಲ್ ಷುಗರ‍್ಸ್, ಕೊಪ್ಪ, ಐಸಿಎಲ್ ಷುಗರ‍್ಸ್, ಕೆ.ಆರ್.ಪೇಟೆ, ಶ್ರೀ ಚಾಮುಂಡೇಶ್ವರಿ ಷುಗರ‍್ಸ್, ಕೆ.ಎಂ ದೊಡ್ಡಿ ಹಾಗೂ ಬನ್ನಾರಿ ಅಮ್ಮನ್ ಸಕ್ಕರೆ ಕಾರ್ಖಾನೆ, ಅಳಗಂಚಿ ಮತ್ತು ಕುಂತೂರು ಸಕ್ಕರೆ ಕಾರ್ಖಾನೆಗಳಿಗೆ ರೈತರಾಗಲೀ ಇಲ್ಲವೇ ಕಾರ್ಖಾನೆಯವರಾಗಲೀ ಅನಧಿಕೃತ ಪರಭಾರೆ ಮಾಡಬಾರದೆಂದು ಸೂಚಿಸಿದೆ. ಹಾಗೂ ಅವರಿಗೆ ಮೈಷುಗರ್ ವ್ಯಾಪ್ತಿಯ ಕಬ್ಬು ಖರೀದಿಸದಂತೆ ನೋಟಿಸ್ ನೀಡಿ ಎಚ್ಚರಿಕೆ ನೀಡಿದ್ದಾರೆ.

ಮೈಸೂರು ಸಕ್ಕರೆ ಕಾರ್ಖಾನೆ ಕಂಪನಿಯು ಮಂಡ್ಯ ಜಿಲ್ಲೆಯ ಶತಮಾನದ ಭವ್ಯ ಇತಿಹಾಸವನ್ನು ಹೊಂದಿದ್ದು, ಸದರಿ ಸಕ್ಕರೆ ಕಾರ್ಖಾನೆೆಯನ್ನು ಉಳಿಸುವುದು ನಮ್ಮೆಲ್ಲರ ಹೊಣೆಯಾಗಿರುತ್ತದೆ. ಈ ಹಿನ್ನೆಲೆಯಲ್ಲಿ ದಿ ಮೈಸೂರು ಶುಗರ್ ಕಂಪನಿ ಲಿ ಮಂಡ್ಯ ಕಾರ್ಖಾನೆಯ ವ್ಯಾಪ್ತಿಯಲ್ಲಿನ ಕಬ್ಬುನ್ನು ಒಪ್ಪಿಗೆ ಮತ್ತು ಒಪ್ಪಿಗೆ ರಹಿತ ಖಾಸಗಿ ಸಕ್ಕರೆ ಕಾರ್ಖಾನೆಗಳಿಗೆ ಪರಭಾರೆಯಾದರೆ ಕಾರ್ಖಾನೆಯನ್ನು ಪ್ರಾರಂಭಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಕಬ್ಬು ಬೆಳೆಗಾರರು ಕಬ್ಬು ಸರಬರಾಜು ಮಾಡುವ ಮೂಲಕ ಸಹಕರಿಸಬೇಕು ಎಂದು ಕೋರಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...