ಮಂಡ್ಯ | ಈದ್ ಮಿಲಾದ್ ಮತ್ತು ಗಣೇಶ ಹಬ್ಬಗಳ ಶಾಂತಿಯುತ ಆಚರಣೆಗೆ ಡಿಸಿ ಕುಮಾರ್ ಸೂಚನೆ

Date:

ಮಂಡ್ಯ ಜಿಲ್ಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆಯಿಂದ ಗಣೇಶ ಹಾಗೂ ಈದ್ ಮಿಲಾದ್ ಹಬ್ಬ ಆಚರಿಸೋಣ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಸಾರ್ವಜನಿಕರ ಸಾಮರಸ್ಯ ಸಭೆಯಲ್ಲಿ ತಿಳಿಸಿದರು.

ಮಂಡ್ಯ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, “ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗದಂತೆ ಕಾನೂನಿನ ಚೌಕಟ್ಟಿನಲ್ಲಿ ಗಣೇಶ ಹಬ್ಬವನ್ನು ಆಚರಿಸಿ” ಎಂದರು.

ಅನುಮತಿ ಕಡ್ಡಾಯ: ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ಪ್ರತಿಷ್ಠಾಪಿಸುವವರು ತಾಲೂಕು ಕಚೇರಿಗಳಲ್ಲಿ ತೆರೆಯಲಾಗುವ ಏಕಗವಾಕ್ಷಿ ಕೇಂದ್ರದಲ್ಲಿ ಮನವಿ ಸಲ್ಲಿಸಿ ಅನುಮತಿ ಪಡೆಯುವುದು ಕಡ್ಡಾಯ. ಅನುಮತಿ ಪಡೆಯುವ ಸಂದರ್ಭದಲ್ಲಿ ಗಣಪತಿ ಪ್ರತಿಷ್ಠಾಪಿಸುವ ದಿನಾಂಕ, ಅವಧಿ, ವಿಸರ್ಜನೆ ಮಾಡುವ ದಿನಾಂಕ ಮತ್ತು ಸ್ಥಳ, ಮೆರವಣಿಗೆಯ ರೂಟ್ ಮ್ಯಾಪ್ ಗಳನ್ನು ನಮೂದಿಸಬೇಕು. ಇದರಿಂದ ಪೊಲೀಸ್‌ ಬಂದೋಬಸ್ತ್, ಸಿಸಿಟಿವಿ ಅಳವಡಿಕೆ, ಬ್ಯಾರಿಕ್ಯಾಡಿಂಗ್, ಚೆಸ್ಕಾಂ ಹಾಗೂ ಅಗ್ನಿಶಾಮಕ ಇಲಾಖೆಯಿಂದ ಅಗತ್ಯ ಸಿದ್ಧತೆಯನ್ನು ವ್ಯವಸ್ಥಿತವಾಗಿ ಮಾಡಿಕೊಳ್ಳಬಹುದು” ಎಂದ ಅವರು, “ಸ್ಥಳೀಯ ಮುಖಂಡರು ಒಂದೇ ಸ್ಥಳವನ್ನು ನಿಗದಿಪಡಿಸಿಕೊಂಡು ಗಣಪತಿ ವಿಸರ್ಜನೆ ಮಾಡಿದರೆ, ಜಿಲ್ಲಾಡಳಿತದಿಂದ ಬೇಕಿರುವ ಸಿದ್ಧತೆ ಹಾಗೂ ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವುದು ಸುಲಭ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಿ.ಒ.ಪಿ ಗಣಪತಿ ಖರೀದಿ ಮಾಡಬಾರದು: ಮಂಡ್ಯ ಜಿಲ್ಲೆಯಲ್ಲಿ ಪಿ.ಒ.ಪಿ ಗಣಪತಿ ತಯಾರಿಸುವುದಿಲ್ಲ ಆದರೆ ಹೊರಗಿನಿಂದ ತಂದು ಮಾರಾಟ ಮಾಡುತ್ತಾರೆ. ಸಾರ್ವಜನಿಕರು ಪಿ.ಒ.ಪಿ ಗಣಪತಿ ಖರೀದಿ ಮಾಡಬಾರದು. ಆಯೋಜಕರು ಸಹ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಅನ್ನ ಸಂತರ್ಪಣೆ ಸಂದರ್ಭದಲ್ಲಿ ಶುಚಿತ್ವಕ್ಕೆ ಆದ್ಯತೆ ನೀಡಬೇಕು ಎಂದರು.

ಹಬ್ಬದ ದಿನದಂದೇ ಗಣಪತಿ ಪ್ರತಿಷ್ಠಾಪಿಸಿ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, “ಸೆಪ್ಟೆಂಬರ್ 5 ರಂದು ಈದ್ ಮಿಲಾದ್ ಹಬ್ಬ ಇರುವುದರಿಂದ ಸದರಿ ದಿನದಂದು ಗಣಪತಿ ವಿಸರ್ಜನೆ ಮಾಡುವುದು ಬೇಡ. 9 ಹಾಗೂ 11 ದಿನಕ್ಕೆ ವಿಸರ್ಜನೆ ಮಾಡುವುದು ಉತ್ತಮ. ಗಣಪತಿ ಹಬ್ಬದ ದಿನದಂದೇ ಗಣಪತಿಯನ್ನು ಪ್ರತಿಷ್ಠಾಪಿಸಿ ಅದರ ಬದಲಾಗಿ ಬೇರೆ ದಿನ ಪ್ರತಿಷ್ಠಾಪಿಸುವುದು” ಬೇಡ ಎಂದರು.

ಗಣಪತಿ ವಿಸರ್ಜನೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಗೆ ನಿಗದಿಪಡಿಸುವ ರೂಟ್ ಮ್ಯಾಪ್ ಅನುಸಾರ ಮೆರವಣಿಗೆ ಚಲಿಸಬೇಕು. ತಾಲೂಕು ಮಟ್ಟದಲ್ಲಿ ಸಭೆಗಳನ್ನು ನಡೆಸಿ ಸೂಕ್ತ ನಿರ್ದೇಶನಗಳನ್ನು ನೀಡಲಾಗುವುದು.

ಕಿಡಿಗೇಡಿಗಳ ಬಗ್ಗೆ ನಿಗಾ: “ಕೋಮು ಗಲಭೆ ಉಂಟುಮಾಡುವ ಕಿಡಿಗೇಡಿಗಳ ಬಗ್ಗೆ ನಿಗಾ ವಹಿಸಲಾಗುತ್ತಿದೆ. ಸ್ಥಳೀಯರಿಗೆ ಕಿಡಿಗೇಡಿಗಳು ಹಾಗೂ ಸಂದೇಹಾತ್ಮಕ ಘಟನೆ ಕಂಡುಬಂದಲ್ಲಿ ಸ್ಥಳೀಯ ಪೊಲೀಸ್‌ ಇಲಾಖೆ ಮಾಹಿತಿ ನೀಡಿ. ಕೋಮು ಗಲಭೆ ಉಂಟು ಮಾಡುವ ಹಾಗೂ ಶಾಂತಿ ಕದಡುವ ಸಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುವುದು ಹಾಗೂ ಸುಳ್ಳು ಸುದ್ದಿ ಹರಡುವವರ ಮೇಲೂ ಸಹ ಪೊಲೀಸ್‌ ತಂಡ ನಡುವೆ ನಿಗಾ ವಹಿಸುತ್ತಿದೆ. ಪ್ರಕರಣಗಳು ಕಂಡು ಬಂದಲ್ಲಿ ನಿರ್ಧಾಕ್ಷಿಣ್ಯ ಕ್ರಮ ವಹಿಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ.ಆರ್ ಮಾತನಾಡಿ, “ಪರಿಸರ ಮಾಲಿನ್ಯ ಉಂಟುಮಾಡದಂತೆ ಗಣಪತಿ ಹಬ್ಬ ಆಚರಿಸೋಣ, ಈ ಬಾರಿ ಪುಟ್ಟದಾದ ಜೇಡಿ ಮಣ್ಣು ಹಾಗೂ ನೈಸರ್ಗಿಕ ಬಣ್ಣ ಉಪಯೋಗಿಸಿ ತಯಾರಿಸಿದ ಗಣಪತಿಯನ್ನು ಪ್ರತಿಷ್ಠಾಪಿಸಿ. ಪಿ.ಒ.ಪಿ ಗಣಪತಿಯನ್ನು ಕೆರೆ ನೀರಿನಲ್ಲಿ ವಿಸರ್ಜನೆ ಮಾಡಿದರೆ ಕೆರೆ ನೀರು ಮಲಿನವಾಗಿ ಮುಂದಿನ ದುಷ್ಪರಿಣಾಮವನ್ನು ನಾವೇ ಎದುರಿಸಬೇಕಾಗುತ್ತದೆ” ಎಂದರು.

“ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ತಾಲೂಕು ಮಟ್ಟದಲ್ಲಿ ಜೇಡಿ ಮಣ್ಣಿನಿಂದ ಗಣಪತಿ ತಯಾರಿ ಮಾಡಲು ಮಕ್ಕಳಿಗೆ ತರಬೇತಿ ನೀಡಲು ಯೋಜಿಸಲಾಗಿದೆ. ಮಕ್ಕಳು ಪ್ರತಿ ಬೀದಿಯಲ್ಲಿ ಗಣಪತಿ ಪ್ರತಿಷ್ಠಾಪಿಸುವುದು ಸಾಮಾನ್ಯ. ಮಕ್ಕಳು ತರಬೇತಿಯಲ್ಲಿ ಹಾಜರಾಗಿ ಅವರೇ ತಯಾರಿಸಿದ ಗಣಪತಿ ಪ್ರತಿಷ್ಠಾಪಿಸಲಿ. ಇದರರಿಂದ ಪರಿಸರ ಮಾಲಿನ್ಯ ತಡೆಗಟ್ಟಬಹುದು. ಮಕ್ಕಳು ಮಣ್ಣಿನಲ್ಲಿ ಗಣಪತಿ ತಯಾರಿ ಮಾಡುವಾಗ ಕೆಲವು ಗಿಡಗಳ ಬೀಜವನ್ನು ಸೇರಿಸಿದರೆ. ಗಣಪತಿ ವಿಸರ್ಜನೆಯ ನಂತರ ಗಿಡಗಳು ಬೆಳೆದು ಹಸರೀಕರಣಕ್ಕೂ ಸಹ ಆದ್ಯತೆ ನೀಡಬಹುದು” ಎಂದರು.

ಇದನ್ನೂ ಓದಿ: ಮಂಡ್ಯ | ಸ್ವಾತಂತ್ರ್ಯ ಹೋರಾಟದಲ್ಲಿ ಕನ್ನಡಿಗರ ಪಾತ್ರ ದೊಡ್ಡದಿದೆ: ಸಚಿವ ಎನ್ ಚಲುವರಾಯಸ್ವಾಮಿ

ಸಭೆಯಲ್ಲಿ ಹಾಜರಿದ್ದ ಮುಖಂಡರು ಶಾಂತಿ ಸಭೆಯ ಬದಲಾಗಿ ಸಾಮರಸ್ಯ ಸಭೆ ಎಂದು ಕರೆಯೋಣ, ಈದೆ ಮಿಲಾದ್ ನಲ್ಲಿ ನಡೆಯುವ ಮೆರವಣಿಗೆಯಲ್ಲಿ ವಿಧಿಸಲಾಗುವ ಷರತ್ತುಗಳನ್ನು ಸರಳೀಕರಣ ಮಾಡಿಕೊಡಿ, ಗಣಪತಿ ಪ್ರತಿಷ್ಠಾಪಿಸುವ ಸ್ಥಳಗಳಲ್ಲಿ ಜಾನಪದ ಶೈಲಿಯ ಡೊಳ್ಳು ಕುಣಿತ, ತಮಟೆ, ವೀರಗಾಸೆ ಮುಂತಾದ ಪ್ರದರ್ಶನಗಳಿಗೆ ಅವಕಾಶ ನೀಡಬೇಕು. ಸಭೆಯಲ್ಲಿ ಹಾಜರಾಗಿರುವ ಮುಖಂಡರು ಯಾವುದೇ ಹಬ್ಬಗಳಲ್ಲಿ ಯಾವುದೇ ತೊಂದರೆ ಮಾಡುವುದಿಲ್ಲ ಕಿಡಿಗೇಡಿಗಳು ಗಲಭೆಗಳು ಸೃಷ್ಠಿಸುತ್ತಾರೆ ಅವರ ಮೇಲೆ ನಿಗಾವಿಡಿ. ಗಣಪತಿ ವಿಸರ್ಜನೆಗೆ ಪೊಲೀಸ್ ಇಲಾಖೆ ದಿನಾಂಕ ನಿಗದಿಪಡಿಸಬೇಕು. ಸಿ.ಸಿ ಕ್ಯಾಮರಾ ಹೆಚ್ಚು ಅಳವಡಿಸಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಕೆರೆಗಳ ಹತ್ತಿರ ಎಚ್ಚರಿಕೆ ವಹಿಸಿ.ಗಣಪತಿ ಹಬ್ಬದಲ್ಲಿ ಆಯೋಜಿಸುವ ಕಾರ್ಯಕ್ರಮಗಳು ಸಾಮರಸ್ಯದಿಂದ ಕೂಡಿರಲಿ, ಸ್ಪಧಾತ್ಮಕವಾಗಿ ಬೇಡ ಎಂದು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಸಭೆಯಲ್ಲಿ ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಗಂಗಾಧರ ಸ್ವಾಮಿ, ಸೇರಿದಂತೆ ಇನ್ನಿತರೆ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...