ಮಂಡ್ಯ | ನಿವೇಶನ ಹಾಗೂ ವಸತಿ ವಂಚಿತರ ಸಮಾವೇಶ ನಡೆಸಲು ತೀರ್ಮಾನ

Date:

ಹೆಚ್ಚುವರಿ ಕುಟುಂಬಗಳು ಒಂದೇ ಮನೆಯಲ್ಲಿ ವಾಸ ಮಾಡುತ್ತಿರುವ ನಿವೇಶನ ಹಾಗೂ ವಸತಿ ವಂಚಿತರು 80ಕ್ಕೂ ಅಧಿಕ ಮಂದಿ ಅರ್ಜಿ ಸಲ್ಲಿಸಿದವರು ಸೇರಿದಂತೆ ರಾಜ್ಯ ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಹಾಗೂ ಕರ್ನಾಟಕ ಜನಶಕ್ತಿಯಿಂದ ಸಭೆ ನಡೆಸಿದ್ದು, ಡಿಸಿ, ಎಸಿ ಮತ್ತು ತಹಶೀಲ್ದಾರರನ್ನು ಭೇಟಿ ಮಾಡಿ ಏಪ್ರಿಲ್‌ 29ರಂದು ಎಲ್ಲ ನಿವೇಶನ ವಂಚಿತರು ಒಟ್ಟಾಗಿ ಹೋಗಿ ಅರ್ಜಿ ಸಲ್ಲಿಸಿ ಸ್ವೀಕೃತಿ ಪತ್ರ ಪಡೆಯಲಾಗುವುದು ಎಂದು ತಿಳಿಸಲಾಗಿದೆ.

ಮಂಡ್ಯ ಜಿಲ್ಲೆಯ ಎಲ್ಲ ತಾಲೂಕಿನಲ್ಲಿರುವ ಭೂಮಿ ವಸತಿ ವಂಚಿತರನ್ನು ಮೇ 15ರೊಳಗೆ ಭೇಟಿ ಮಾಡಿ ಸಭೆಗಳನ್ನು ನೇಡೆಸಿ ಮೇ 15ರಂದು ಜಿಲ್ಲಾ ಮಟ್ಟದ ಪದಾಧಿಕಾರಿಗಳನ್ನು ಅಯ್ಕೆ ಮಾಡಿ ಒಂದು ಸಮಾವೇಶ ಹಮ್ಮಿಕೊಳ್ಳಲಾಗುವುದು. ಈ ಸಮಾವೇಶಕ್ಕೆ ಜಿಲ್ಲಾಧಿಕಾರಿ, ಎಸಿ, ತಹಶೀಲ್ದಾರರು ಹಾಗೂ ನಗರಸಭೆ ಅಯುಕ್ತರನ್ನು ಬರಮಾಡಿಕೊಳ್ಳುವುದಾಗಿ ಎಲ್ಲರೂ ತಿರ್ಮಾನಿಸಿದ್ದಾರೆ.

ಸಭೆಯ ಬಳಿಕ ಮಂಡ್ಯದ ಭೂಮಿ ವಸತಿ ಸಮನ್ವಯ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯಲ್ಲಿ ಸಂಘಟನೆ ಸದಸ್ಯರಾಗಿ ಕೆ ವಿ ದೇವಿ, ಅಂಜಲಿ, ಸುಮತಿ, ಅಂಜನಾ, ರೇಖಾ, ಶ್ರಿವೇಣಿ, ಸ್ನೇಹ, ಆಹಿಷಾ, ಲಕ್ಷ್ಮಿ, ನಾಗರಾಜು, ಶಿವ, ಶಿವರಂಜನಿ, ನಾಗಮಣಿ, ಬನ್ನಾರಿ, ಶಿವಣ್ಣ ಸೇರಿದಂತೆ ಹಲವರು ತಾವೇ ತಮ್ಮ ಸಮಾಕ್ಷಮದಲ್ಲಿ ಸದಸ್ಯರಾಗಲು ಒಪ್ಪಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಮಂಡ್ಯ ವಸತಿ ವಂಚಿತರು

ಮುಂದಿನ ದಿನಗಳಲ್ಲಿ ಎಲ್ಲ ತಾಲೂಕುಗಳಲ್ಲಿ ಸಭೆ ಮಾಡಿ ಪದಧಿಕಾರಿಗಳನ್ನು ತೊಡಗಿಸಿಕೊಳ್ಳಲಾಗುವುದು. ಜತೆಗೆ 26ರಂದು ದಾವಣಗೆರೆಯಲ್ಲಿ ನಡೆಯುವ ಸಂವಿಧಾನ ಸಂರಕ್ಷಣಾ ಪಡೆ ಸಮಾವೇಶಕ್ಕೆ ಭೂಮಿ ವಸತಿ ತಂಡದಿಂದ ಒಂದು ಬಸ್‌ನಲ್ಲಿ ಹೊರಡುವುದಾಗಿ ನಿರ್ಣಯ ಕೈಗೊಳ್ಳಲಾಗಿದೆ.

ಈ ಸುದ್ದಿ ಓದಿದ್ದೀರಾ? ಉಳ್ಳಾಲ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಏ.29ರಂದು ಬೃಹತ್ ರ‍್ಯಾಲಿ, ಹಕ್ಕೊತ್ತಾಯ ಸಮಾವೇಶ

ಈ ಸಂದರ್ಭದಲ್ಲಿ ಮರಿಯಪ್ಪ, ಶ್ರಿರಂಗಚಾರಿ, ರಾಜ್ಯ ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಬನ್ನಾರಿ K R ಪೇಟೆ, ನಿಂಗಮ್ಮ, ಶಿವಣ್ಣ, ಕರ್ನಾಟಕ ಜನಶಕ್ತಿಯ ಜಗದೀಶ್ ನಗರಕೆರೆ, ಪೃಥ್ವಿ, ಮದ್ದೂರು, ಸಿದ್ದರಾಜು ಎಂ ಸೇರಿದಂತೆ ಹಲವು ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...