ಮಂಡ್ಯ | ತಮಿಳು ಕಾಲೋನಿಯ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸುವಂತೆ ಒತ್ತಾಯ

Date:

ದೇಶ ಸ್ವಚ್ಚ ಮಾಡುವ ಜನತೆಗೆ, ನಗರ ಕಟ್ಟಲು ದುಡಿಯುವ ಜನತೆಗೆ ವಾಸಕ್ಕೊಂದು ಸೂರಿಲ್ಲ. ಈ ದೇಶದ ಪ್ರಜೆಗಳು ನಾವು ನಮಗೂ ಎಲ್ಲರಂತೆ ಬದುಕುವ ಸಂವಿಧಾನ ಬದ್ಧ ಹಕ್ಕು ಬೇಕೆಂದು ಅಗ್ರಹಿಸಿ ಮಂಡ್ಯ ತಾಲೂಕಿನ ತಮಿಳು ಕಾಲೋನಿ ನಿವಾಸಿಗಳು ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿ ನೇತೃತ್ವದಲ್ಲಿ ಅನಿರ್ಧಿಷ್ಠಾವಧಿ ಧರಣಿ ನಡೆಸುತ್ತಿದ್ದಾರೆ.

ಮಂಡ್ಯ ಜಿಲ್ಲಾಧಿಕಾರಿ ಕಚೇರಿಯ ಬಳಿ ಅನಿದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಗುರುವಾರ ಸಂಜೆ ಕೊಳಚೆ ಅಭಿವೃದ್ಧಿ ಮಂಡಳಿಯವರು ಬಂದು ಸೋಮವಾರ ಲೀಗಲ್ ಒಪೀನಿಯನ್(‌ಸೂಕ್ತ ಕಾನೂನು ಅಭಿಪ್ರಾಯ) ಬರುತ್ತದೆ. ಬಳಿಕ ಹಸ್ತಾಂತರ ಮಾಡಿಕೊಳ್ಳುತ್ತೇವೆ. ಪ್ರತಿಭಟನೆ ವಾಪಸ್ ಪಡೆದುಕೊಳ್ಳಿ ಎಂದು ಮನವಿ ಮಾಡಿದ್ದಾರೆ. ನಿವಾಸಿಗಳು ಹಸ್ತಾಂತರ ಅದೇಶ ಕಾಪಿ ಕೈಗೆ ಸಿಗುವ ತನಕ ಹೋರಾಟ ಮುಂದುವರೆಸುತ್ತೇವೆಂದು ಪಟ್ಟು ಹಿಡಿದಿದ್ದಾರೆ.

ಮಂಡ್ಯ ತಾಲೂಕು, ಮದ್ದೂರು ಕೆಇಬಿ ಕಚೇರಿ ಮುಂಭಾಗದಲ್ಲಿರುವ ತಮಿಳುಕಾಲೋನಿ ನಿವಾಸಿಗಳು, ಸುಮಾರು 70 ವರ್ಷಗಳಿಂದ ವಾಸಿಸುತ್ತಿರುವ ಜಾಗದಲ್ಲಿ ಸುಮಾರು 114 ಕುಟುಂಬಗಳಿವೆ. ಮದ್ದೂರಿನ ಬೀದಿಗಳನ್ನು ಸ್ವಚ್ಛಪಡಿಸುವ ಪೌರಕಾರ್ಮಿಕರಾಗಿ, ದಿನಗೂಲಿ ಕಾರ್ಮಿಕರಾಗಿ, ಮೂಟೆ ಹೊರುವ ಕಾರ್ಮಿಕರಾಗಿ, ಮನೆಕಟ್ಟುವವರಾಗಿ, ಮನೆ ಕೆಲಸಕ್ಕೆ ನೆರವಾಗುವವರಾಗಿ, ಸಮುದಾಯ ಭವನಗಳಲ್ಲಿ ಸ್ವಚ್ಛತಾ ಕಾರ್ಮಿಕರಾಗಿ ಹತ್ತು ಹಲವು ರೀತಿಗಳಲ್ಲಿ ಈ ನಗರವನ್ನು ಕಟ್ಟುತ್ತಿದ್ದಾರೆ. ಮದ್ದೂರು ನಗರವನ್ನು ಸುಂದರವಾಗಿಸಲು ಶ್ರಮಿಸಿದ ಈ ಜನಗಳು ತಾವೆ ವಾಸಿಸುವ ಭೂಮಿ ಹಕ್ಕಿಗಾಗಿ, ತಲೆಮಾರುಗಳು ಕಳೆದರು ಇನ್ನೂ ಹೋರಾಡುತ್ತಲೇ ಇರಬೇಕಾದ ದುಸ್ಥಿತಿ ನಮ್ಮ ಕಣ್ಣಮುಂದೆ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವಿಚಾರದಲ್ಲಿ ಹಲವಾರು ಹೋರಾಟಗಳು ನಡೆದು, 1976ರಲ್ಲಿ ಈ ಪ್ರದೇಶವನ್ನು ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿಯಿಂದ ಘೋಷಣೆ ಮಾಡಲಾಗಿತ್ತು. ಆದರೆ, ಇಲ್ಲಿನ ಹಲವು ಪಟ್ಟಭದ್ರರ ದಬ್ಬಾಳಿಕೆಯಿಂದ ಹಾಗೂ ಶ್ರಮಿಕ ನಿವಾಸಿಗಳ ರಕ್ಷಣೆ ಮಾಡಬೇಕಾದವರೇ ಶಾಮೀಲಾಗಿ ಎಸಗಿದ ಮೋಸದಿಂದಾಗಿ ಬಹಳ ಕಾಲ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಂದಿನಿಂದ ಇಂದಿನವರೆಗೂ ತಮ್ಮ ವಾಸದ ಭೂಮಿಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ನಿವಾಸಿಗಳು ಹೋರಾಟ ಮಾಡುತ್ತಾ ಬರುತ್ತಿದ್ದಾರೆ.

ಸರ್ಕಾರ ಮತ್ತು ಜನಪ್ರತಿನಿಧಿಗಳು ಚುನಾವಣೆ ಸಂದರ್ಭಗಳಿಂದ ಇಲ್ಲಿಯ ತನಕ ಬಾಯಿಮಾತಿನ ಭರವಸೆಗಳನ್ನು ಕೊಡುವುದನ್ನು ಬಿಟ್ಟರೆ ಅಲ್ಲಿನ ನಿವಾಸಿಗಳಿಗೆ ಭೂಮಿ ಹಕ್ಕನ್ನು ಕೊಡಿಸುವ ಕೆಲಸ ಸರ್ಕಾರದಿಂದ ಮತ್ತು ಜಿಲ್ಲಾಡಳಿತ ವತಿಯಿಂದ ಕೈಗೊಂಡಿಲ್ಲ. ಇಲ್ಲಿಯ ನಿವಾಸಿಗಳಿಗೆ ಹಕ್ಕುಪತ್ರಗಳು ಇಲ್ಲದೆ, ವಸತಿಯನ್ನು ನಿರ್ಮಿಸಿಕೊಳ್ಳುವ ಯಾವ ಯೋಜನೆಯ ಅಡಿಯಲ್ಲೂ ಫಲಾನುಭವ ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಜೊತೆಗೆ ಸರಿಯಾದ ಮೂಲಭೂತ ಸೌಲಭ್ಯಗಳು ದೊರೆಯಬೇಕೆಂದರೂ ಪ್ರತಿ ಬಾರಿ ಪರದಾಡಬೇಕಿದೆ ಮತ್ತು ಹೋರಾಟ ಮಾಡುತ್ತಾ ಪಡೆದುಕೊಳ್ಳಬೇಕಿದೆ.

“ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯ ಬಳಿ ಹಮ್ಮಿಕೊಂಡಿರುವ ಅನಿದಿಷ್ಠಾವಧಿ ಪ್ರತಿಭಟನೆಯನ್ನು ತೀವ್ರಗೊಳಿಸಬಾರದು ಎಂದರೆ ಇನ್ನೆರಡು ದಿನಗಳಲ್ಲಿ ಈ ವಿಚಾರ ಸ್ಪಷ್ಟವಾಗಿ ತಾರ್ಕಿಕ ಅಂತ್ಯ ಕಾಣಬೇಕು. ಇಲ್ಲದಿದ್ದಲ್ಲಿ ಮಂಡ್ಯ ಜಿಲ್ಲೆಗೆ ಭೇಟಿ ನೀಡಲಿರುವ ವಸತಿ ಮಂತ್ರಿಗಳನ್ನು ಕಂಡು ಅವರಿಗೆ ನಮ್ಮ ಅಳಲನ್ನು ತೋಡಿಕೊಳ್ಳುತ್ತೇವೆ. ನಂತರ ಪರಿಹಾರ ಸಿಗದಿದ್ದರೆ ಸೆಪ್ಟೆಂಬರ್ 01 ರಿಂದ ಬೆಂಗಳೂರಿನ ಮುಖ್ಯಮಂತ್ರಿ ಕಚೇರಿಗೆ ಪಾದಯಾತ್ರೆ ಆರಂಸುತ್ತೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಹೆಚ್ಚುವರಿ ವಸತಿ ಮಂಜೂರಾತಿಗೆ ಆಗ್ರಹಿಸಿ ವಸತಿ ಸಚಿವರಿಗೆ ಮನವಿ

“ಜಿಲ್ಲಾಡಳಿತ ಕೂಡಲೇ ಮದ್ದೂರು ತಮಿಳು ಕಾಲೋನಿಯ ಜಾಗವನ್ನು ಕೊಳಚೆ ಅಭಿವೃದ್ಧಿ ಮಂಡಳಿಗೆ ಹಸ್ತಾಂತರ ಮಾಡಬೇಕು. ತಮಿಳು ಕಾಲೋನಿಯ 114 ವಾಸಿಸುವ ಕುಟುಂಬಗಳನ್ನು ಸಮೀಕ್ಷೆ ಮಾಡಿ ಕೂಡಲೇ ಹಕ್ಕುಪತ್ರಗಳನ್ನು ನೀಡಬೇಕು. ಮುಂದೆ ಯಾವುದೇ ಸಂಘ ಸಂಸ್ಥೆಗಳಿಂದ, ಭೂ-ವಿರೋಧಿ ಶಕ್ತಿಗಳಿಂದ, ಬಲಾಢ್ಯರಿಂದ ನಿವಾಸಿಗಳಿಗೆ ತೊಂದರೆ ಆಗದಂತೆ ಕ್ರಮವಹಿಸಬೇಕು” ಎಂದು ಒತ್ತಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...