ಮಂಡ್ಯ | ಬಡವರಿಗೆ ನಿವೇಶನದ ಹಕ್ಕುಪತ್ರ, ಮೂಲ ಸೌಲಭ್ಯಕ್ಕೆ ಆಗ್ರಹ: ಕೃಷಿ, ಗ್ರಾಮೀಣ ಕಾರ್ಮಿಕರ ಸಂಘದಿಂದ ಪ್ರತಿಭಟನೆ

Date:

ಮಂಡ್ಯ ನಗರದಲ್ಲಿ ವಾಸಿಸುತ್ತಿರುವ ಬಡವರಿಗೆ ನಿವೇಶನದ ಹಕ್ಕುಪತ್ರ ನೀಡುವುದು ಸೇರಿದಂತೆ ಮೂಲ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಗರದ ಸರ್‌ಎಂವಿ ಪ್ರತಿಮೆ ಬಳಿ ಸೇರಿದ ಕಾರ್ಯಕರ್ತರು ಘೋಷಣೆ ಕೂಗಿ, ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಕುಮಾರ ಅವರಿಗೆ ಮನವಿ ಸಲ್ಲಿಸಿದರು.

“15 ವರ್ಷಗಳಿಂದ ನಗರದ ಬಡವರು ನಿವೇಶನಕ್ಕಾಗಿ ನಿರಂತರ ಹೋರಾಟ ಮಾಡುತ್ತ ಬಂದ ಪರಿಣಾಮ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಸಭೆ ನಡವಳಿಯಾಗಿವೆ. ಆದರೆ ನಡವಳಿಗಳು ನಡವಳಿಯಾಗಿಯೇ ಉಳಿದಿರುವುದು ದುರಂತ. ವಾಸಕ್ಕೆ ಮನೆ ಇಲ್ಲದ ಬಾಡಿಗೆ ಮನೆಗಳಲ್ಲಿ ಚಿಕ್ಕಿ ಚೋಪಡಿಯಲ್ಲಿ ವಾಸಿಸುತ್ತಿದ್ದು, ಬಾಡಿಗೆ ಕಟ್ಟುವುದರಲ್ಲೇ ಜೀವನ ಕಳೆಯುವಂತಾಗಿದೆ. ಮಳೆ ಬಂದರೆ ವಾಸಕ್ಕೆ ಯೋಗ್ಯವಲ್ಲದ ಅದೆಷ್ಟೋ ಮನೆಗಳಲ್ಲಿ ವಾಸ ಮಾಡುವ ದುಃಸ್ಥಿತಿ ಎದುರಾಗಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೀಡಿ ಕಾಲೊನಿ, ಕೆರೆ ಅಂಗಳದಲ್ಲಿ ವಾಸಿಸುತ್ತಿರುವ ಬಡವರಿಗೂ ಹಕ್ಕುಪತ್ರ ನೀಡಬೇಕು. ಶಂಕರಮಠಕ್ಕೆ ಹೋಗುವ ರಸ್ತೆಯ ಬಲಭಾಗದಲ್ಲಿ ಹುಣಸೆ ಮರಗಳಿದ್ದು, ಈ ಮರಗಳ ಅಡಿಯಲ್ಲಿ 20 ಮನೆಗಳಿವೆ. ಮರದ ಬೇರುಗಳಿಂದ ಮನೆಗಳ ಗೋಡೆಗಳು ಬಿರುಕುಬಿಟ್ಟಿವೆ. ಬೇರೆ ಕಡೆ ನಿವೇಶನ ಕೊಡಿಸಿ ಅಥವಾ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಮಂಗಳೂರು | ಜನರ ಬದುಕು ಹಸನುಗೊಳಿಸಲು ಅಗತ್ಯ ಬೇಡಿಕೆ ಈಡೇರಿಸಬೇಕು: ಸಿಪಿಐಎಂ ಆಗ್ರಹ

“ವೃದ್ಧರು, ಅಂಗವಿಕಲರು, ವಿಧವೆಯರಿಗೆ ನೀಡುತ್ತಿರುವ ಮಾಸಾಶನವು ಸಮರ್ಪಕವಾಗಿ ಜಾರಿಯಾಗಬೇಕು. ಈಗ ಕೊಡುತ್ತಿರುವ ಮಾಸಾಶನ ಸಾಲುತ್ತಿಲ್ಲ. ಕನಿಷ್ಠ ತಿಂಗಳಿಗೆ ₹3,000 ನಿಗದಿಪಡಿಸಬೇಕು. ನಗರದಲ್ಲಿ ಹದಗೆಟ್ಟಿರುವ ರಸ್ತೆಗಳನ್ನು ದುರಸ್ತಿಗೊಳಿಸಬೇಕು. ಜತೆಗೆ ಮೂಲಸೌಲಭ್ಯ ಕಲ್ಪಿಸಬೇಕು. ಸಾಲ ಕೇಳಿ ಅರ್ಜಿ ಹಾಕಿದ ಎಲ್ಲ ಬಡವರಿಗೂ ಆರ್‌ಬಿಐ ನಿರ್ದೇಶನದಂತೆ ₹2 ಲಕ್ಷದವರೆಗೆ ಬಡ್ಡಿ ರಹಿತ ಸಾಲ ನೀಡಬೇಕು” ಎಂದು ಒತ್ತಾಯಿಸಿದರು.

ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಂ ಪುಟ್ಟಮಾದು, ಪ್ರಧಾನ ಕಾರ್ಯದರ್ಶಿ ಬಿ ಹನುಮೇಶ್‌, ಮುಖಂಡರಾದ ಸಿ ಕುಮಾರಿ, ಅಮಾಸಯ್ಯ, ಅಬ್ದುಲ್ಲಾ, ಬಾನು, ತಾಜ್‌, ನಸೀಮ, ಸುಮೇರಾ, ಶಾಕೀರಾ ಇದ್ದರು.

ತಂತ್ರಜ್ಞಾನದ ಗಗನಚುಂಬಿ ಕಟ್ಟಡಗಳ ನಡುವೆ ಒಂದು ಛಾವಣಿಗಾಗಿ, ತಮ್ಮ ಘನತೆಯ ಬದುಕಿಗಾಗಿ ಪ್ರತಿ ಹಳ್ಳಿ ಹಳ್ಳಿಗಳಲ್ಲಿಯೂ ಇಂತಹ ಹೋರಾಟಗಳನ್ನು ಕಾಣಬಹುದು. ಸ್ವಾತಂತ್ರ್ಯ ಬಂದು 78 ವರ್ಷಗಳು ಕಳೆದಿದ್ದು, ಎಐ ಕಾಲದಲ್ಲಿ ಬದುಕುತ್ತಿದ್ದೇವಾದರೂ ಬಹುತೇಕ ಕುಟುಂಬಗಳು ಇವತ್ತಿಗೂ ನಿವೇಶನ, ವಸತಿ, ಶಿಕ್ಷಣ ಸೇರಿದಂತೆ ಇತರೆ ಮೂಲ ಸೌಕರ್ಯಗಳಿಗಾಗಿ ಬೀದಿಯಲ್ಲಿ ಕೂತು ಸರ್ಕಾರಗಳನ್ನು ಕೇಳಬೇಕಾದ ಪರಿಸ್ಥಿತಿ ಬಂದೊದಗಿದೆ.

ದೇಶದ ಅತಿದೊಡ್ಡ ರಾಜಕೀಯ ಶಕ್ತಿಯೇ ಬಡಜನರು, ಕೂಲಿಕಾರ್ಮಿಕರು, ರೈತರು. ಆದರೆ ಸರ್ಕಾರ ಇವರ ಧ್ವನಿಯನ್ನು ಆಲಿಸದಿದ್ದರೆ ಚುನಾವಣೆಯಂತಹ ಸಂದರ್ಭದಲ್ಲಿ ರಾಜಕೀಯ ನಾಯಕರಿಗೆ ಸವಾಲುಗಳು ಎದುರಾಗಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...