ಮಂಡ್ಯ | ಕಾವೇರಿ ಆರತಿ ಬದಲು ಬಸವಣ್ಣನ ವಚನಗಳ ಚರ್ಚೆ ನಡೆಸಿ: ದ್ರಾವಿಡ ಕನ್ನಡ ಚಳುವಳಿ ಒತ್ತಾಯ

Date:

ಮಂಡ್ಯದಲ್ಲಿ ಕಾವೇರಿ ಆರತಿ ಮಾದರಿಯ ಕಾರ್ಯಕ್ರಮ ಬೇಡ. ದಸರಾ ಉತ್ಸವದ ಸಂದರ್ಭದಲ್ಲಿ ಹಿಂದಿ ಭಾಷೆಗೆ ಅವಕಾಶ ನೀಡದಂತೆ ದ್ರಾವಿಡ ಕನ್ನಡ ಚಳುವಳಿಯ ಹನಕೆರೆ ಅಭಿಗೌಡ ಒತ್ತಾಯಿಸಿದ್ದಾರೆ.

ಸೋಮವಾರ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತಹಶೀಲ್ದಾರ್ ರೋಹಿಣಿಗೆ ಮನವಿ ಸಲ್ಲಿಸುವ ಮೂಲಕ ಪ್ರತಿಭಟಿಸಿದರು.

ದ್ರಾವಿಡ ಕನ್ನಡ ಚಳುವಳಿಯ ಹನಕೆರೆ ಅಭಿಗೌಡ ಮಾತನಾಡಿ, “ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು, ಕೆಲವು ಶಾಸಕರು ಮತ್ತು ಜಿಲ್ಲಾಧಿಕಾರಿಗಳು ಉತ್ತರ ಭಾರತದ ಗಂಗಾ ಆರತಿಯನ್ನು ಅಧ್ಯಯನ ಮಾಡಿ ಅದೇ ಮಾದರಿಯಲ್ಲಿ ಕಾವೇರಿ ಆರತಿ ಮಾಡುವುದಾಗಿ ಯೋಜಿಸುತ್ತಿರುವುದು ನಿರಾಶಾದಾಯಕ. ಗಂಗಾ ಮಾತ್ರ ಪವಿತ್ರವಲ್ಲ, ನಮ್ಮ ತುಂಗಾ ನದಿಯೂ ಪವಿತ್ರ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಹಿಂದಿ ಆಚಾರ-ಆಚರಣೆಗಳ ಹೇರಿಕೆ, ನಮ್ಮ ಕನ್ನಡ ನಾಡಿನ ಸಾಂಸ್ಕೃತಿಕ ಸ್ವಾತಂತ್ರ್ಯಕ್ಕೆ ಹಾನಿ ಉಂಟುಮಾಡುತ್ತಿದೆ. ಭಾರತ ಒಕ್ಕೂಟದಲ್ಲಿ ಹಿಂದಿ ಮತ್ತು ಸಂಸ್ಕೃತ ಆಚರಣೆಗಳಿಗೆ ಬೃಹತ್ ಮೊತ್ತದ ಹಣ ವ್ಯಯವಾಗುತ್ತಿದೆ. ಕರ್ನಾಟಕ ಸರ್ಕಾರವೂ ಈ ಮಾರ್ಗದಲ್ಲೇ ಹೋಗುವುದನ್ನು ತಕ್ಷಣವೇ ನಿಲ್ಲಿಸಬೇಕು,” ಎಂದು ಒತ್ತಿ ಹೇಳಿದರು.

ಕಾವೇರಿ ನದಿತೀರದಲ್ಲಿ ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ ಮಾಡಬಾರದು, ಬದಲಿಗೆ ಪ್ರತೀ ದಸರಾ ಸಂದರ್ಭದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಕನ್ನಡ ವಿದ್ಯಾರ್ಥಿಗಳನ್ನು ಆಹ್ವಾನಿಸಿ, ಬಸವಣ್ಣನವರ ವಚನಗಳ ಚರ್ಚೆಯನ್ನು ಆಯೋಜಿಸಬೇಕು. ಈ ಮೂಲಕ ಅಸ್ಪೃಶ್ಯತೆ, ಜಾತಿ ಅಸಮಾನತೆ, ಮತ್ತು ನದಿಯ ನೀರನ್ನು ಕಲುಷಿತಗೊಳಿಸುವ ಕಾರ್ಯಕ್ರಮಗಳನ್ನು ತಡೆಯಲು ಸಾಧ್ಯ ಎಂದು ತಿಳಿಸಿದರು.

ಮಂಡ್ಯ

“ಶ್ರೀರಂಗಪಟ್ಟಣದ ದಸರಾ ಉತ್ಸವದಲ್ಲಿ ಹಿಂದಿ ಕಲಾವಿದರಿಗೆ, ಗುತ್ತಿಗೆದಾರರಿಗೆ ಮತ್ತು ಕೆಲಸದವರಿಗೆ ಅವಕಾಶ ನೀಡಬಾರದು. ನಾವು ನಮ್ಮ ಕನ್ನಡ ನುಡಿ ಮತ್ತು ಸಂಸ್ಕೃತಿಯನ್ನೇ ಉತ್ತೇಜಿಸಬೇಕು. ಇದರಲ್ಲಿ ಯಾವುದೇ ರೀತಿಯ ಹಿಂದಿ ಭಾಷೆಯ ಮಿತಿಮೀರುವ ಆಕ್ರಮಣವನ್ನು ತಡೆಯಬೇಕು” ಎಂದು ಒತ್ತಾಯಿಸಿದರು.

ಯಾವುದೇ ಕಾರಣಕ್ಕೂ, ನಮ್ಮ ಸ್ಥಳೀಯ ಸಂಸ್ಕೃತಿಗೆ, ನುಡಿಗೆ ಹಿನ್ನಡೆಯಾಗುವ ಕಾರ್ಯಗಳನ್ನು ಅನುಮತಿಸಬಾರದು. ಕರ್ನಾಟಕ ಸರ್ಕಾರವು ಈ ರೀತಿಯ ಚಟುವಟಿಕೆಗಳನ್ನು ಪ್ರೋತ್ಸಾಹಿಸಿದರೆ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಸಿದರು.

ಈ ಮನವಿ, ಮಂಡ್ಯ ಜಿಲ್ಲೆಯ ಜನರ ಭಾವನೆಗಳ ಪ್ರತಿಬಿಂಬಿವಾಗಿದೆ. ಜಿಲ್ಲಾಡಳಿತವು ಈ ಕುರಿತಾಗಿ ಸೂಕ್ತವಾದ ಕ್ರಮ ಕೈಗೊಂಡು, ಗಂಗಾ ಆರತಿ ರೀತಿಯ ಕಾರ್ಯಕ್ರಮ ತಡೆಗಟ್ಟಿ ಕನ್ನಡಿಗರ ಭಾವನೆಗಳನ್ನು ಗೌರವಿಸಬೇಕು ಎಂದು ಆಗ್ರಹಿಸಿದರು.

ಇದನ್ನು ಓದಿದ್ದೀರಾ? ಶ್ರೀರಂಗಪಟ್ಟಣ | ಪತ್ತೆಯಾಗಿದ್ದ ಟಿಪ್ಪು ಕಾಲದ ಜೋಡಿ ನೆಲಮಾಳಿಗೆಯ ಸ್ವಚ್ಛತಾ ಕಾರ್ಯ

ಮನವಿ ಸಲ್ಲಿಸುವ ಸಂದರ್ಭದಲ್ಲಿ, ಪಾಂಡವಪುರದ ರಾಜೇಂದ್ರ ಸಿಂಗ್ ಬಾಬು, ಮದ್ದೂರಿನ ಧನುಷ್ ಗೌಡ, ಜಯರಾಂ ಹೊಸೂರು ಸೇರಿದಂತೆ ದ್ರಾವಿಡ ಕನ್ನಡ ಚಳುವಳಿ ಸದಸ್ಯರು ಉಪಸ್ಥಿತರಿದ್ದರು. ಈ ಕಾಳಜಿ ಮತ್ತು ಮನವಿಯನ್ನು ಗಂಭೀರವಾಗಿ ಪರಿಗಣಿಸುವಂತೆ, ಕರ್ನಾಟಕ ಸರ್ಕಾರ ಮತ್ತು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...