ಮಂಡ್ಯ | ಮೈಷುಗರ್ ಕಾರ್ಖಾನೆ ಉಳಿಸಲು ಚರ್ಚೆ: ಡಿಸಿಎಂ ಡಿ ಕೆ ಶಿವಕುಮಾರ್

Date:

ಮಂಡ್ಯ ಜಿಲ್ಲೆಯ ಪ್ರಮುಖ ಸಮಸ್ಯೆ, ಐತಿಹಾಸಿಕ ಮೈಶುಗರ್ ಕಾರ್ಖಾನೆ ಉಳಿವು, ಕೆಆರ್ ಎಸ್ ನ ಬೃಂದಾವನ ಉದ್ಯಾನವನ ಅಭಿವೃದ್ಧಿ ಸೇರಿದಂತೆ ವಿವಿಧ ವಿಚಾರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜಿಲ್ಲೆಯ ನಾಯಕರು ಹಾಗೂ ಇಲಾಖೆ ಅಧಿಕಾರಿಗಳ ಜತೆ ಶುಕ್ರವಾರ ಚರ್ಚೆ ನಡೆಸಿದರು.

“ಮಂಡ್ಯ ಜಿಲ್ಲೆಯ ಸಮಸ್ಯೆ ಕುರಿತು ಇಲ್ಲಿನ ನಾಯಕರ ಜತೆ ಚರ್ಚೆ ಮಾಡಿದ್ದೇವೆ. ಐತಿಹಾಸಿಕ ಮೈಷುಗರ್ ಕಾರ್ಖಾನೆ ಹೇಗೆ ಉಳಿಸಿಕೊಳ್ಳಬೇಕು ಎಂದು ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದೆವು. ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು, ರೈತರಿಗೆ ಅನುಕೂಲ ಮಾಡಿಕೊಳ್ಳಬೇಕು ಎಂಬ ಉದ್ದೇಶದಿಂದ ಸಭೆ ಮಾಡಿದ್ದೇವೆ. ಹೊಸ ಕಾರ್ಖಾನೆ ಆರಂಭಿಸಬೇಕಾ ಅಥವಾ ಇರುವ ಕಾರ್ಖಾನೆಗೆ ಹೊಸ ವ್ಯವಸ್ಥೆ ಕಲ್ಪಿಸುವುದೇ ಎಂದು ತಾಂತ್ರಿಕ ಸಮಿತಿ ಮುಂದೆ ಚರ್ಚೆ ಮಾಡಿದ್ದೇವೆ” ಎಂದು ತಿಳಿಸಿದರು.

“10 ಸಾವಿರ ಟಿಸಿಡಿ ಮಾಡುವುದು ನಮ್ಮ ಮುಂದೆ ಇರುವ ಆಯ್ಕೆ. ಇದನ್ನು ಮಾಡಿದರೆ ಬೇಕಾಗಿರುವ ಕಬ್ಬನ್ನು ಎಲ್ಲಿಂದ ತರುವುದು? ಬೆಳೆ ಪ್ರಮಾಣ ಎಷ್ಟಿದೆ? ಎಂದು ಅಧಿಕಾರಿಗಳ ಜತೆ ಸುದೀರ್ಘ ಚರ್ಚೆ ಮಾಡಿದ್ದೇವೆ. ಈಗಿರುವ 5 ಸಾವಿರ ಟಿಸಿಡಿ ಸಂಪೂರ್ಣವಾಗಿ ನಡೆದು ಅಲ್ಲಿ ಎಥೆನಾಲ್ ಘಟಕ ಸೇರಿದಂತೆ ಎಲ್ಲವೂ ಕಾರ್ಯಾರಂಭವಾಗಿ ಸಂಸ್ಥೆ ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಬೇಕು. ನಾವು ದೊಡ್ಡ ಕಾರ್ಖಾನೆ ಮಾಡುವುದು ದೊಡ್ಡದಲ್ಲ. ಅದಕ್ಕೆ ತಕ್ಕಂತೆ ರೈತರು ಕಬ್ಬು ಬೆಳೆಯಲು ಉತ್ತೇಜನ ನೀಡಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮಗಿರುವ ವರದಿ ಪ್ರಕಾರ ಅಕಾಲಿಕ ಮಳೆಯಿಂದಾಗಿ ರೈತರು ಕಬ್ಬು ಬೆಳೆಯುವುದನ್ನು ಬಿಟ್ಟು ಬೇರೆ ಬೆಳೆ ಬೆಳೆಯಲು ಮುಂದಾಗುತ್ತಿದ್ದಾರೆ. ಎರಡು ಸಾವಿರ ರೈತರು ಕಬ್ಬು ಬೆಳೆಗೆ ಮುಂದಾಗಿದ್ದಾರೆ. ಇದಕ್ಕೆ ಏನು ಮಾಡಬೇಕು ಎಂದು ಚರ್ಚೆ ಮಾಡಿದ್ದೇವೆ. ಜಿಲ್ಲೆಯಲ್ಲಿ ಈ ಕಾರ್ಖಾನೆ ಜತೆಗೆ ಇನ್ನು ಐದಾರು ಕಾರ್ಖಾನೆಗಳಿವೆ. ಎಲ್ಲವೂ ಸುಸ್ಥಿರವಾಗಿರಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...