ಮಂಡ್ಯ | ಸರ್ಕಾರಿ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲಾವಿದರ ಕಡೆಗಣಿಸಿದ ಜಿಲ್ಲಾಡಳಿತ: ಕಾರಸವಾಡಿ ಮಹದೇವ

Date:

ಈವೆಂಟ್ ಮ್ಯಾನೆಜ್‌ಮೆಂಟ್‌ ಹೆಸರಲ್ಲಿ ಕಮಿಷನ್ ಆಸೆಗೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲಾವಿದರನ್ನು ಕಡೆಗಣಿಸುತ್ತಿರುವ ಮಂಡ್ಯ ಜಿಲ್ಲಾಡಳಿತದ ನಡೆ ಸರಿಯಲ್ಲ ಎಂದು ಕಲಾವಿದರ ಸಂಘದ ಸಂಚಾಲಕ ಕಾರಸವಾಡಿ ಮಹದೇವ ಬೇಸರ ವ್ಯಕ್ತಪಡಿಸಿದರು.

ಮಂಡ್ಯ ಜಿಲ್ಲೆಯ ಸ್ಥಳೀಯ ಕಲಾವಿದರು ಮತ್ತು ಕಲೆಗಳಿಗೆ ಗಗನಚುಕ್ಕಿ ಜಲಪಾತೋತ್ಸವ ಸಮಿತಿ ಹಾಗೂ ಶ್ರೀರಂಗಪಟ್ಟಣ ದಸರಾ ಉತ್ಸವ ಸಮಿತಿಗಳು ಅನ್ಯಾಯ ಮಾಡುತ್ತಿರುವುದನ್ನು ಖಂಡಿಸಿ ಮಾತನಾಡಿದರು. ಬಳಿಕ ಜಿಲ್ಲೆಯ ಎಲ್ಲಾ ಕಲಾವಿದರಿಂದ ಸೆಪ್ಟೆಂಬರ್‌ 9 ಸೋಮವಾರ ಕಾವೇರಿ ಉದ್ಯಾನವನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

“ಮಂಡ್ಯ ಜಿಲ್ಲೆ ಸಾಕಷ್ಟು ಕಲೆ ಹಾಗೂ ಕಲಾವಿದರಿಗೆ ಮೂಲಸ್ಥಾನವಾಗಿದೆ. ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲೂ ಕೂಡ ಜಿಲ್ಲೆಯ ಕಲೆ, ಕಲಾವಿದರಿಗೆ ದೊಡ್ಡ ಸ್ಥಾನಮಾನವಿದೆ. ಆದರೆ ಜಿಲ್ಲಾಡಳಿತ ಈ ಪ್ರತಿಭೆಗಳಿಗೆ ಬೆಲೆ ಕೊಡದೆ ನಡೆದುಕೊಳ್ಳುತ್ತಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂತೆಕಸಲಗೆರೆ ಬಸವರಾಜು ಮಾತನಾಡಿ, “ಸಾವಿರಾರು ಕಲಾವಿದರು ಯಾವುದೇ ಫಲಾಪೇಕ್ಷೆಗಳಿಲ್ಲದೆ ಹಲವು ವರ್ಷಗಳಿಂದ ಕಲೆಗಳನ್ನು ಉಳಿಸಿಕೊಂಡು ಬಂದಿದ್ದಾರೆ. ಆದರೆ, ಸರ್ಕಾರಿ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲಾವಿದರಿಗೆ ಅವಕಾಶ ನೀಡದೆ, ಸರ್ಕಾರ ಅನ್ಯಾಯ ಮಾಡುತ್ತಿದೆ” ಎಂದು ಕಲಾವಿದರು ಆಕ್ರೋಶ ವ್ಯಕ್ತಪಡಿಸಿದರು.

ಸಿಐಟಿಯು‌ ಸಿ ಕುಮಾರಿ ಮಾತನಾಡಿ, “ಜಿಲ್ಲೆಯ ಎಲ್ಲ ಸರ್ಕಾರಿ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಬೇಕು. ತಾರತಮ್ಯ ನಿಲ್ಲಿಸಿ, 15 ದಿನಗಳೊಳಗಾಗಿ ಸಂಭಾವನೆ ನೀಡಬೇಕು ಮತ್ತು ಕಲಾಪ್ರದರ್ಶನ ನಡೆಯುವಾಗ ನೀರು, ಊಟ, ವಸತಿ ಹಾಗೂ ವಸ್ತ್ರಾಲಂಕಾರಕ್ಕೆ ಸ್ಥಳಾವಕಾಶ ಏರ್ಪಾಡು ಕಲ್ಪಿಸಬೇಕು” ಎಂದು ಒತ್ತಾಯಿಸಿದರು.

ಮಹಿಳಾ ಮುನ್ನಡೆಯ ಪೂರ್ಣಿಮಾ ಮಾತನಾಡಿ, “ಕೀಳು ಅಭಿರುಚಿಯ ಕಾರ್ಯಕ್ರಮ ಗಿಚ್ಚಿ ಗಿಲಿಗಿಲಿ ತಂಡದಂತಹ ಮಧ್ಯವರ್ತಿಗಳಿಗೆ ಅವಕಾಶ ನೀಡದೆ ನೇರವಾಗಿ ಸ್ಥಳೀಯ ಕಲಾವಿದರಿಗೆ ಕಾರ್ಯಕ್ರಮಗಳಲ್ಲಿ ಅವಕಾಶ ನೀಡಬೇಕು. ಸ್ಥಳೀಯ ಕಲಾವಿದರನ್ನು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ನಿಯೋಜಿಸಲು ಶಿಫಾರಸು ಮಾಡಬೇಕು” ಎಂದರು.

“ಜಿಲ್ಲೆಯಲ್ಲಿ ಸಾಕಷ್ಟು ಜನ ಡ್ರಾಮ ಸೀನರಿ ಮಾಲೀಕರು, ನಾಟಕ ಕಲಾವಿದರು, ವಾದ್ಯಗೋಷ್ಠಿ ಕಲಾವಿದರು, ಶಾಮಿಯಾನ, ಧ್ವನಿವರ್ಧಕ, ಬೆಳಕು ದೀಪ ಅಲಂಕಾರ, ವಸ್ತ್ರಾಲಂಕಾರದವರಿಗೆ ಜೀವನ ಭದ್ರತೆ ಇಲ್ಲದಿರುವುದರಿಂದ ಹೆಚ್ಚು ಉತ್ತೇಜನ ನೀಡುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಬೇಕು” ಎಂದು ಕಲಾವಿದರು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ಸಮಗ್ರ ಅಭಿವೃದ್ಧಿ ಕುರಿತು ಅ.20ರಂದು ಬೃಹತ್ ವಿಚಾರ ಸಂಕಿರಣ

ಕಲಾವಿದರ ಮನವಿ ಸ್ವೀಕರಿಸಿದ ಸ್ಥಾನಿಕ ತಹಶೀಲ್ದಾರ್ ರೋಹಿಣಿ ಮಾತನಾಡಿ, “ನಿಮ್ಮ ಮನವಿಯನ್ನು ಜಿಲ್ಲಾಧಿಕಾರಗಳ ಹಾಗೂ ಸರ್ಕಾರದ ಗಮನಕ್ಕೆ ತಂದು ತುರ್ತಾಗಿ‌ ನ್ಯಾಯ ಕೊಡಿಸಲಾಗುವುದು” ಎಂದು ಭರವಸೆ ನೀಡಿದರು.

ಈ ಸಾಂಸ್ಕೃತಿಕ ಪ್ರತಿಭಟನೆಯಲ್ಲಿ ಮಹಿಳಾ ಮುನ್ನಡೆಯ ಶಿಲ್ಪ, ಕರ್ನಾಟಕ ಜನಶಕ್ತಿ ಸಿದ್ದರಾಜು, ರಾಹುಲ್‌ ಮಂಡ್ಯ, ಕಲಾವಿದರಾದ ಹುರುಗಲವಾಡಿ ರಾಮಯ್ಯ, ಮಂಗಲ ಲಂಕೇಶ್, ವೈರಮುಡಿ, ಯೋಗೇಶ್, ಬಸವರಾಜು, ಹನಿಯಂಬಾಡಿ ಶೇಖರ್ ಸೇರಿದಂತೆ ಬಹುತೇಕ ಕಲಾವಿದರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...