ಮಂಡ್ಯ | ‘ಸೊಳ್ಳೆ ಉತ್ಪಾದನಾ ಕೇಂದ್ರ’ವಾದ ವೈದ್ಯಕೀಯ ಕಾಲೇಜು; ಕಣ್ಮುಚ್ಚಿ ಕುಳಿತ ಅಧಿಕಾರಿಗಳು!

Date:

ಇಡೀ ರಾಜ್ಯದಲ್ಲಿ ಡೆಂಘೀ ಜ್ವರ ಹರಡುತ್ತಾ ಇರುವಾಗ ನೈರ್ಮಲ್ಯ ಕಾಪಾಡಿ, ನೀರು ನಿಲ್ಲದಂತೆ, ಸೊಳ್ಳೆಗಳು ಬೆಳೆದು ಹರಡದಂತೆ ಮಾಡಿ ಎಂದು ಆರೋಗ್ಯ ಇಲಾಖೆಯವರು ಪ್ರಚಾರ ಮಾಡುತ್ತಿದ್ದಾರೆ. ಆದರೆ, ಇದಕ್ಕೆ ತದ್ವಿರುದ್ಧವಾಗಿ ಮಂಡ್ಯ ವೈದ್ಯಕೀಯ ಕಾಲೇಜು ನಡೆದುಕೊಳ್ಳುತ್ತಿದೆ ಅಂದರೆ ನೀವು ಆಶ್ಚರ್ಯಪಡಬಹುದು.

ಹೌದು. ಮಂಡ್ಯ ಆರೋಗ್ಯ ಇಲಾಖೆಯ ಭಾಗವಾದ ಮಂಡ್ಯ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಆವರಣವನ್ನೊಮ್ಮೆ ಗಮನಿಸಿದರೆ ಸಾಕು, ಸೊಳ್ಳೆ ಉತ್ಪಾದನಾ ಕೇಂದ್ರವಾಗಿದೆ. ಇದು ದುರಂತವೇ ಸರಿ.

ಮಂಡ್ಯ ವೈದ್ಯಕೀಯ ಕಾಲೇಜು ವಾರ್ಡುಗಳು ಹಾಗೂ ತಮಿಳು ಕಾಲೋನಿಗಳ ನಡುವೆ ಬರುವ ಜಾಗದಲ್ಲಿ ತೆರೆದ ಚರಂಡಿ ಇದೆ. ಕಟ್ಟಡದ ಮೇಲಿಂದ ಗಲೀಜು ನೀರು ಸೋರುತ್ತಿದೆ. ಆ ನೀರು ತಗ್ಗಿನಲ್ಲಿ ನಿಂತಿದೆ. ಜೊತೆಗೆ ಒಳಚರಂಡಿಯ ನೀರು ಸೇರಿ, ಆಸ್ಪತ್ರೆಯ ಆವರಣವೇ ಸೊಳ್ಳೆಯ ಆವಾಸಸ್ಥಾನ ಮಾರ್ಪಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ನಿಂತ ನೀರಿನಲ್ಲಿ ಉತ್ಪತ್ತಿಯಾಗುತ್ತಿರುವ ಸೊಳ್ಳೆಗಳು
ನಿಂತ ನೀರಿನಲ್ಲಿ ಉತ್ಪತ್ತಿಯಾಗುತ್ತಿರುವ ಸೊಳ್ಳೆಗಳು

ಕೆಲವು ದಿನಗಳ ಹಿಂದೆ ಹತ್ತು ಲಕ್ಷ ರೂಪಾಯಿಗಳನ್ನು ಖರ್ಚು ಮಾಡಿ ಒಳಚರಂಡಿಗೆ ಹೊಸ ಪೈಪ್‌ಲೈನ್ ಹಾಕುವ ಮೂಲಕ ಸರಿ ಮಾಡಿದ್ದರು. ಹೊಸ ಲೈನ್ ಹಾಕಿದ್ದರೂ ಕೂಡ ಸಹ ವ್ಯವಸ್ಥೆ ಸರಿ ಹೋಗಿಲ್ಲ. ಒಳಚರಂಡಿ ವ್ಯವಸ್ಥೆ ಸೋರುತ್ತಿದೆ.

ಸರಕಾರ ಇತ್ತೀಚೆಗೆ ಹತ್ತು ಲಕ್ಷ ಖರ್ಚು ಮಾಡಿ ಹೊಸ ಒಳಚರಂಡಿ ವ್ಯವಸ್ಥೆ ಸರಿ ಮಾಡಿದ್ದರೂ ಕೂಡ ಪೂರ್ಣ ಅದ್ವಾನ ಆಗಿ ಕೊಳಚೆ ನೀರು ಹೊರ ಬರುತ್ತಿದೆ. ವಾರ್ಡ್‌ ಮಗ್ಗುಲಲ್ಲಿಯೇ ನಿಂತಿದ್ದು, ಸೊಳ್ಳೆ ಉತ್ಪಾದನೆ ಕೇಂದ್ರವಾಗಿದೆ.  ವಾರ್ಡ್ ಒಳಗಡೆ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಒಳಚರಂಡಿ ನೀರು, ಶೌಚಾಲಯದ ಗಲೀಜು ನೀರಿನಿಂದ ಉತ್ಪತ್ತಿಯಾಗುತ್ತಿರುವ ಸೊಳ್ಳೆಗಳ ನಡುವೆಯೇ ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕಾದ ದುಸ್ಥಿತಿ  ಬಂದೊದಗಿದೆ.

ಆವರಣ 1ಆವರಣ 2

ಗಲೀಜು ನೀರಿನಿಂದಾಗಿ ಅನೈರ್ಮಲ್ಯ ತುಂಬಿದೆ. ವಾರ್ಡ್ ಉದ್ದಕ್ಕೂ ಒಳಚರಂಡಿ ನೀರು ನಿಂತಿದ್ದು, ಸೊಳ್ಳೆಗಳು ಉತ್ಪತ್ತಿಯಾಗುತ್ತಿರುವುದು ಕಣ್ಣಾರೆ ಕಾಣಸಿಗುತ್ತದೆ . ಮಂಡ್ಯ ವೈದ್ಯಕೀಯ ಕಾಲೇಜು ನಿರ್ದೇಶಕರು, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪಾಟೀಲ್ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು  ಇತ್ತ ಗಮನ ಹರಿಸಬೇಕಾದ ಅವಶ್ಯಕತೆ ಇದೆ.

ಡೆಂಘೀ ಜ್ವರ ನಿಯತ್ರಣಕ್ಕೆ ಬರಬೇಕಾದರೆ ನಗರದ ನೈರ್ಮಲ್ಯದ ಜೊತೆ ಜೊತೆಗೆ ಆಸ್ಪತ್ರೆ ಆವರಣದ ಒಳಚರಂಡಿ ಕೂಡ ಸರಿ ಆಗಬೇಕಾಗಿದೆ.

ವಾರ್ಡಿನ ಮತ್ತೊಂದು ಮಗ್ಗುಲಲ್ಲಿ ಗಿಡ ಗಂಟಿಗಳು ಬೆಳೆದು ನಿಂತು ಸೊಳ್ಳೆಗಳ ತಾಣವಾಗಿದೆ. ಹಳೆಯ ಮಂಚ, ಸ್ಟ್ಯಾಂಡ್‌, ಅಂಬ್ಯುಲೆನ್ಸ್ ಇನ್ನಿತರ ಗುಜರಿ ಸಾಮಾನುಗಳನ್ನು ಇಟ್ಟಿರುವುದರಿಂದ ರೋಗಿಗಳಿಗೆ ತೊಂದರೆಯಾಗಿದೆ ಹಾಗೂ ಹರಾಜು ಹಾಕಿ ವಿಲೇವಾರಿ ಮಾಡದ ಕಾರಣ ಸರಕಾರಕ್ಕೂ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.

ಚರಂಡಿ 2

ಜುಲೈ 12ರಂದು ನಡೆದ 2೦24-25ನೇ ಸಾಲಿನ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಂಡ್ಯ ಶಾಸಕರಾದ ರವಿ ಗಣಿಗರವರು, “ರಾಜ್ಯದಲ್ಲಿ ಡೆಂಘೀ ಪ್ರಕರಣಗಳು ಹೆಚ್ಚುತ್ತಿವೆ. ಸ್ವಚ್ಛತೆಯ ಬಗ್ಗೆ ನಿಗಾವಹಿಸಿ. ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿ ಎಚ್ಚರದಿಂದ ಇರಬೇಕು . ಡೆಂಘೀ ತಡೆಗೆ ಕ್ರಮ ತೆಗೆದುಕೊಳ್ಳಬೇಕು. ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಬೇಕು. ಸಣ್ಣಪುಟ್ಟ ರೋಗಗಳಿಗೆಲ್ಲಾ ಮೈಸೂರಿನ ಆಸ್ಪತ್ರೆಗಳಿಗೆ ಕಳುಹಿಸ ಕೂಡದು” ಎಂದು ಮೀಮ್ಸ್ ವೈದ್ಯಕೀಯ ಅಧೀಕ್ಷಕ ಶಿವಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಆದರೂ ಎಚ್ಚೆತ್ತುಕೊಂಡಿಲ್ಲ ಎಂಬುದೇ ವಾಸ್ತವ ಸಂಗತಿ.

ಮಂಡ್ಯ ನಗರಸಭೆಯವರು ಕೂಡ ಇತ್ತ ಗಮನಹರಿಸಬೇಕಾದ ಅವಶ್ಯಕತೆ ಇದೆ. ಒಳಚರಂಡಿಗೆ ಹೊಸ ಪೈಪ್‌ಲೈನ್‌ ಕಾಮಗಾರಿಗೆ ಲಕ್ಷಾಂತರ ರೂ ಖರ್ಚು ಮಾಡಲಾಗಿದೆ. ಕಾಮಗಾರಿ ಕಳಪೆಯಾಗಿರುವುದರಿಂದ ಸಂಬಂಧಿಸಿದ ಗುತ್ತಿಗೆದಾರನ ಬಿಲ್ ಅನ್ನು ತಡೆ ಹಿಡಿದು, ಈಗ ಉಂಟಾಗಿರುವ ಎಲ್ಲ ಸಮಸ್ಯೆಗಳನ್ನು ಸರಿಪಡಿಸುವ ಕೆಲಸ ಆಗಬೇಕಿದೆ. ಜೊತೆಗೆ ಇದರ ಮೇಲ್ವಿಚಾರಣೆ ಹೊತ್ತ ಇಂಜಿನಿಯರ್ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಬೇಕಿದೆ.

ಮಂಡ್ಯ ವೈದ್ಯಕೀಯ ಕಾಲೇಜು

 

ಮಂಡ್ಯ 6

Untitled 24
ನಗರಕೆರೆ ಜಗದೀಶ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...