ಮಂಡ್ಯ | ಮರ ಪುಡಿಮಾಡುವ ಯಂತ್ರದಿಂದ ಪರಿಸರ ನಾಶ; ಲೈಸೆನ್ಸ್ ಪಡೆಯದೆ ಅಕ್ರಮ

Date:

ಮರ ಪುಡಿಮಾಡುವ ಯಂತ್ರದಿಂದ ಅಕ್ರಮವಾಗಿ ಮರಗಳನ್ನು ಕಟಾವು ಮಾಡುತ್ತಿರುವುದರಿಂದ ಪರಿಸರ ನಾಶವಾಗುತ್ತಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ, ಕೆಆರ್‌ಪೇಟೆ, ಮದ್ದೂರು ಹಾಗೂ ಮಳವಳ್ಳಿ ತಾಲೂಕುಗಳಲ್ಲಿ, ಅರಣ್ಯ ಇಲಾಖೆಯ ಅನುಮತಿ ಇಲ್ಲದೆ, ಲೈಸೆನ್ಸ್ ಪಡೆಯದೆ ಬಹಳಷ್ಟು ಯಂತ್ರಗಳಿಂದ ಅಕ್ರಮವಾಗಿ ಮರಗಳನ್ನು ಕಡಿದು ಅವಿಗಳನ್ನು ಪುಡಿಮಾಡಲಾಗುತ್ತಿದೆ.

ಪಾಂಡವಪುರ ತಾಲೂಕಿನ ಎಲೆಕೆರೆ, ದೇವೇಗೌಡನ ಕೊಪ್ಪಲು, ಕೆಆರ್‌ಪೇಟೆ ತಾಲೂಕಿನ ಹೊಸಹೊಳಲು, ಹೆಮ್ಮನಹಳ್ಳಿ, ಅಗಸನಹಳ್ಳಿ ಗ್ರಾಮಗಳಲ್ಲಿ ದಿನಕ್ಕೆ ಸರಿಸುಮಾರು 800ರಿಂದ 1000 ಟನ್‌ಗಳವರೆಗೆ ಮರಗಳನ್ನು ಕಡಿದು, ಪರಿಸರ ನಾಶ ಮಾಡಲಾಗುತ್ತಿದೆ.

“ಮರ ಕಡಿಯಲು ಯಾವುದೇ ಲೈಸೆನ್ಸ್ ಇಲ್ಲದೆ ಅಕ್ರಮವಾಗಿ ಮರ ಕಡಿದು ಪುಡಿಮಾಡುವ ಪರಿಸರ ನಾಶ ಮಾಡುತ್ತಿದ್ದಾರೆ. ಆದರೂ ಅರಣ್ಯ ಇಲಾಖೆ ಅಧಿಕಾರಿಗಳು ಇತ್ತ ಗಮನಹರಿಸದೆ ಕಣ್ಣುಮುಚ್ಚಿ ಕುಳಿತಿದ್ದಾರೆ” ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಸಲದ ಬೇಸಿಗೆ ಕಾಲದಲ್ಲಿ ಬಿಸಿಲಿನ ತಾಪಮಾನ ಮಂಡ್ಯ ಜಲ್ಲೆಯಲ್ಲಿ 43 ಡಿಗ್ರಿ ಸೆಲ್ಸಿಸ್‌ವರೆಗೆ ಕಂಡುಬಂದಿತ್ತು. ಇದೇ ರೀತಿ ಚಿಪ್ಪಿಂಗ್‌ ಮಿಷಿನ್‌ಗಳ ಕಾರ್ಯ ನಿರ್ವಹಣೆಯಿಂದ ಪರಿಸರ ನಾಶ ಮುಂದುವರಿದರೆ ಮುಂದಿನ ದಿನಗಳಲ್ಲಿ 50 ಡಿಗ್ರಿ ಸೆಂಟಿಗ್ರೇಡ್ ದಾಟುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ಗ್ರಾಮಾಂತರ | ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡುವಂತೆ ಸಚಿವ ಕೆ ಹೆಚ್ ಮುನಿಯಪ್ಪ ಸೂಚನೆ

ಮಂಡ್ಯ ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಹೇಳಿಕೆ ಪಡೆಯಲು ಈ ದಿನ.ಕಾಮ್‌ ಪ್ರಯತ್ನಿಸಿದೆಯಾದರೂ ಸಂಪರ್ಕಕ್ಕೆ ಲಭ್ಯವಾಗಿಲ್ಲ. ಅರಣ್ಯ ಇಲಾಖೆಯ ಅಧಿಕಾರಿಗಳು ಇತ್ತ ಗಮನಹರಿಸಿ ಕೂಡಲೇ ಎಲ್ಲ ಮರ ಪುಡಿಮಾಡುವ(ಚಿಪ್ಪಿಂಗ್ ಮಿಷಿನ್‌) ಯಂತ್ರಗಳನ್ನು ಸೀಜ಼್ ಮಾಡದೇ ಹೋದರೆ ಸಾರ್ವಜನಿಕರು ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...